AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಶಂಕಿತ ಆದ ಎಸ್ಕೇಪ್​ ಮಾಂತ್ರಿಕ, ಒಂದೇ ದಿನದಲ್ಲಿ 2 ಬಾರಿ ಪರಾರಿಗೆ ಯತ್ನ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಹೊಸಕೋಟೆಯಲ್ಲಿ ಕೋವಿಡ್ ಪರೀಕ್ಷೆಗೆ ಕರೆತರುವ ವೇಳೆ ಶಂಕಿತನೊಬ್ಬ ಎರಡು ಬಾರಿ ಪರಾರಿಯಾಗಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಕಳೆದ ಕೆಲವು ದಿನಗಳ ಹಿಂದೆ ಸೋಂಕಿನಿಂದ ಮೃತಪಟ್ಟಿದ್ದ ಮಹಿಳೆಯ ಅಂತ್ಯಕ್ರಿಯೆಯಲ್ಲಿ 150 ಜನ ಭಾಗಿಯಾಗಿದ್ದರು. ಹಾಗಾಗಿ, ಇವರೆಲ್ಲರನ್ನ ಪತ್ತೆಹಚ್ಚಿ ಕೋವಿಡ್​ ಪರೀಕ್ಷೆ ನಡೆಸಲು ಆರೋಗ್ಯಾಧಿಕಾರಿಗಳು ಮುಂದಾದರು. ಹೀಗಾಗಿ ಪ್ರಾಥಮಿಕ ಸಂಪರ್ಕದಲ್ಲಿದ್ದ ವ್ಯಕ್ತಿಯೊಬ್ಬನನ್ನು THO ಮಂಜುನಾಥ್ ಪರೀಕ್ಷೆಗಾಗಿ ಕೋವಿಡ್​ ಆಸ್ಪತ್ರೆಗೆ ಕರೆತಂದಿದ್ದರು. ಈ ವೇಳೆ ಶಂಕಿತ ಆಸ್ವತ್ರೆಯಲ್ಲಿ ಸಿಬ್ಬಂದಿಯನ್ನ ತಳ್ಳಿ ಎಸ್ಕೇಪ್ ಆಗಿ ಓಡಿಹೋದ.  ಹೀಗಾಗಿ, […]

ಕೊರೊನಾ ಶಂಕಿತ ಆದ ಎಸ್ಕೇಪ್​ ಮಾಂತ್ರಿಕ, ಒಂದೇ ದಿನದಲ್ಲಿ 2 ಬಾರಿ ಪರಾರಿಗೆ ಯತ್ನ
KUSHAL V
|

Updated on:Jun 26, 2020 | 10:13 AM

Share

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಹೊಸಕೋಟೆಯಲ್ಲಿ ಕೋವಿಡ್ ಪರೀಕ್ಷೆಗೆ ಕರೆತರುವ ವೇಳೆ ಶಂಕಿತನೊಬ್ಬ ಎರಡು ಬಾರಿ ಪರಾರಿಯಾಗಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.

ಕಳೆದ ಕೆಲವು ದಿನಗಳ ಹಿಂದೆ ಸೋಂಕಿನಿಂದ ಮೃತಪಟ್ಟಿದ್ದ ಮಹಿಳೆಯ ಅಂತ್ಯಕ್ರಿಯೆಯಲ್ಲಿ 150 ಜನ ಭಾಗಿಯಾಗಿದ್ದರು. ಹಾಗಾಗಿ, ಇವರೆಲ್ಲರನ್ನ ಪತ್ತೆಹಚ್ಚಿ ಕೋವಿಡ್​ ಪರೀಕ್ಷೆ ನಡೆಸಲು ಆರೋಗ್ಯಾಧಿಕಾರಿಗಳು ಮುಂದಾದರು. ಹೀಗಾಗಿ ಪ್ರಾಥಮಿಕ ಸಂಪರ್ಕದಲ್ಲಿದ್ದ ವ್ಯಕ್ತಿಯೊಬ್ಬನನ್ನು THO ಮಂಜುನಾಥ್ ಪರೀಕ್ಷೆಗಾಗಿ ಕೋವಿಡ್​ ಆಸ್ಪತ್ರೆಗೆ ಕರೆತಂದಿದ್ದರು. ಈ ವೇಳೆ ಶಂಕಿತ ಆಸ್ವತ್ರೆಯಲ್ಲಿ ಸಿಬ್ಬಂದಿಯನ್ನ ತಳ್ಳಿ ಎಸ್ಕೇಪ್ ಆಗಿ ಓಡಿಹೋದ.  ಹೀಗಾಗಿ, ದಿನವೆಲ್ಲಾ ಹುಡುಕಾಡಿದ ಪೊಲೀಸರು ಮತ್ತು ಅಧಿಕಾರಿಗಳು ಕೊನೆಗೂ ಆತನನ್ನು ಪತ್ತೆಹಚ್ಚಿ ಌಂಬುಲೆನ್ಸ್​ನಲ್ಲಿ ವಾಪಸ್ ಕರೆತರುತ್ತಿದ್ದರು.

ಌಂಬುಲೆನ್ಸ್​ನಿಂದ ಎರಡನೇ ಬಾರಿ ಎಸ್ಕೇಪ್​..! ಆದ್ರೆ ಌಂಬುಲೆನ್ಸ್​ನಲ್ಲಿ ಆತನನ್ನ ಆಸ್ಪತ್ರೆಗೆ ಕರೆತರುವ ವೇಳೆ ಟ್ರಾಫಿಕ್​ನಲ್ಲಿ ವಾಹನ ನಿಲ್ಲಿಸಿದ್ದಾಗ ಮತ್ತೊಮ್ಮೆ ಎಸ್ಕೇಪ್ ಆಗಿದ್ದಾನೆ. ಈ ವೇಳೆ ಸ್ಥಳೀಯರ ಸಹಾಯದಿಂದ ಶಂಕಿತನನ್ನ ಸುಮಾರು ನಾಲ್ಕು ಕಿ.ಮಿ ಚೇಸ್ ಮಾಡಿದ ಅಧಿಕಾರಿಗಳು ಕೊನೆಗೂ ಆತನನ್ನು ಹಿಡಿಯುವಲ್ಲಿ ಯಶಸ್ವಿಯಾದರು. ಪದೇಪದೇ ಆತ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರಿಂದ ಶಂಕಿತನ ಕೈಗೆ ಕೋಳ ತೊಡಿಸಿ ಆಸ್ಪತ್ರೆಗೆ ಕರೆತಂದರು.

Published On - 10:10 am, Fri, 26 June 20

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ