AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಕಿಯ ಅವಘಡಕ್ಕೆ ರೈತನ ಬದುಕಿನಲ್ಲಿ ಆವರಿಸಿದ ಕತ್ತಲು..

ಹಾವೇರಿ: ದನದ ಕೊಟ್ಟಿಗೆಗೆ ಬೆಂಕಿ ಹೊತ್ತಿಕೊಂಡು ಕೊಟ್ಟಿಗೆಯಲ್ಲಿದ್ದ ಒಂದು ಆಕಳು ಸಜೀವ ದಹನ ಆಗಿದ್ದು, ಮತ್ತೊಂದು ಆಕಳು ಹಾಗೂ ಒಂದು ಎತ್ತು ಗಂಭೀರವಾಗಿ ಗಾಯಗೊಂಡ ಘಟನೆ ಹಾವೇರಿ‌ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಗುಡ್ಡದಮಾದಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ಕುಮಾರ್ ಮನೆಯ ಪಕ್ಕದ ದನದ ಕೊಟ್ಟಿಗೆಯಲ್ಲಿ ಒಂದು ಎತ್ತು ಮತ್ತು ಎರಡು ಆಕಳುಗಳನ್ನು ಕಟ್ಟಿದ್ದ. ಎಂದಿನಂತೆ ಮನೆಯವರೆಲ್ಲರೂ ಮನೆಯ ಒಳಗೆ ತಮ್ಮ ತಮ್ಮ ಕೆಲಸ ಕಾರ್ಯಗಳಲ್ಲಿ ನಿರತರಾಗಿದ್ದರು. ಆದರೆ ಏಕಾಏಕಿ ದನದ ಕೊಟ್ಟಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೋಡ […]

ಬೆಂಕಿಯ ಅವಘಡಕ್ಕೆ ರೈತನ ಬದುಕಿನಲ್ಲಿ ಆವರಿಸಿದ ಕತ್ತಲು..
ಆಯೇಷಾ ಬಾನು
ಆಯೇಷಾ ಬಾನು|

Updated on:Nov 16, 2020 | 10:28 AM

Share

ಹಾವೇರಿ: ದನದ ಕೊಟ್ಟಿಗೆಗೆ ಬೆಂಕಿ ಹೊತ್ತಿಕೊಂಡು ಕೊಟ್ಟಿಗೆಯಲ್ಲಿದ್ದ ಒಂದು ಆಕಳು ಸಜೀವ ದಹನ ಆಗಿದ್ದು, ಮತ್ತೊಂದು ಆಕಳು ಹಾಗೂ ಒಂದು ಎತ್ತು ಗಂಭೀರವಾಗಿ ಗಾಯಗೊಂಡ ಘಟನೆ ಹಾವೇರಿ‌ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಗುಡ್ಡದಮಾದಾಪುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರೈತ ಕುಮಾರ್ ಮನೆಯ ಪಕ್ಕದ ದನದ ಕೊಟ್ಟಿಗೆಯಲ್ಲಿ ಒಂದು ಎತ್ತು ಮತ್ತು ಎರಡು ಆಕಳುಗಳನ್ನು ಕಟ್ಟಿದ್ದ. ಎಂದಿನಂತೆ ಮನೆಯವರೆಲ್ಲರೂ ಮನೆಯ ಒಳಗೆ ತಮ್ಮ ತಮ್ಮ ಕೆಲಸ ಕಾರ್ಯಗಳಲ್ಲಿ ನಿರತರಾಗಿದ್ದರು. ಆದರೆ ಏಕಾಏಕಿ ದನದ ಕೊಟ್ಟಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆ ದನದ ಕೊಟ್ಟಿಗೆ ಧಗಧಗನೆ ಹೊತ್ತಿ ಉರಿದಿದೆ.

ಬೆಂಕಿ ತಗುಲಿ ಆಕಳು ಮತ್ತು ಎತ್ತು ನರಳಾಟ: ಬೆಂಕಿ ಹೊತ್ತಿ ಉರಿಯುತ್ತಿರುವುದನ್ನು ಕಂಡ ಗ್ರಾಮದ ಜನರು ಕುಮಾರನ ಮನೆಯ ಬಳಿ ಧಾವಿಸಿ ಹರಸಾಹಸದಿಂದ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಒಂದು ಆಕಳು ಬೆಂಕಿಯಲ್ಲಿ ಬೆಂದು ಸಜೀವ ದಹನ ಆಗಿದೆ. ಮತ್ತೊಂದು ಆಕಳು ಹಾಗೂ ಒಂದು ಎತ್ತು ಅರೆಬರೆ ಬೆಂದ ಸ್ಥಿತಿಯಲ್ಲಿ ನರಳಾಡುತ್ತಿರುವುದು ನೆರೆದಿದ್ದವರ ಕರುಳು ಕಿತ್ತು ಬರುವಂತಿತ್ತು. ಐವತ್ತರಿಂದ ಎಪ್ಪತ್ತು ಸಾವಿರ ರೂಪಾಯಿ ಬೆಲೆ ಬಾಳುವ ಆಕಳು ಮತ್ತು ಎತ್ತು ಬೆಂಕಿಯ ಕೆನ್ನಾಲಿಗೆಗೆ ಬೆಂದು ಹೋಗಿರುವುದು ರೈತನ ಕುಟುಂಬ ಹಾಗೂ ಸ್ಥಳೀಯರ ಕಣ್ಣಾಲಿಗಳು ತೇವಗೊಳ್ಳುವಂತಾಗಿತ್ತು.

ದನದಕೊಟ್ಟಿಗೆಯಲ್ಲಿ ದೀಪವೂ ಇರಲಿಲ್ಲ, ವಿದ್ಯುತ್ ಅವಘಡ ಸಂಭವಿಸುವ ಪರಿಸ್ಥಿತಿಯೂ ಇರಲಿಲ್ಲವಂತೆ. ಆದರೆ ಏಕಾಏಕಿ ಬೆಂಕಿ ಹೇಗೆ ಹೊತ್ತಿಕೊಂಡಿದೆ ಎಂಬುದು ಹಲವು ಅನುಮಾನಗಳಿಗೆ ಎಡೆ ಮಾಡಿದೆ. ಅವಘಡಕ್ಕೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಒಟ್ಟಿನಲ್ಲಿ ಒಂದು ಆಕಳು ಸಜೀವ ದಹನ ಆಗಿರುವುದು, ಮತ್ತೊಂದು ಆಕಳು ಹಾಗೂ ಒಂದು ಎತ್ತು ಅರೆಬರೆ ಬೆಂದ ಸ್ಥಿತಿಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವುದು ರೈತನ ಕುಟುಂಬಕ್ಕೆ ಕತ್ತಲು ಆವರಿಸುವಂತೆ ಮಾಡಿದೆ.

Published On - 10:27 am, Mon, 16 November 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ