AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊತ್ತಿ ಉರಿದ ಕೊಟ್ಟಿಗೆ; ನೋಡನೋಡುತ್ತಲೇ ಸಜೀವ ದಹನವಾದ ಆಕಳು, ಕಲಬುರಗಿಯಲ್ಲಿ ಮನಕಲಕುವ ಘಟನೆ

ಕೊಟ್ಟಿಗೆ ಧಗಧಗಿಸುತ್ತಿದ್ದ ವೇಳೆಯಲ್ಲೂ ಜೀವವನ್ನು ಉಳಿಸಿಕೊಳ್ಳಲು ಆಕಳು ಹೊರಗೆ ಓಡಿ ಬಂದ ದೃಶ್ಯ ಎಂತಹ ಕಲ್ಲು ಹೃದಯವನ್ನೂ ಕರಗಿಸುವಂತಿದೆ. ಮೈಯೆಲ್ಲಾ ಸುಟ್ಟು ಹೋದ ಕಾರಣ ಹೊರಗೆ ಓಡಿ ಬಂದ ಆಕಳು ಆಯಾಸದಿಂದ ನೆಲಕ್ಕುರುಳಿದೆ.

ಹೊತ್ತಿ ಉರಿದ ಕೊಟ್ಟಿಗೆ; ನೋಡನೋಡುತ್ತಲೇ ಸಜೀವ ದಹನವಾದ ಆಕಳು, ಕಲಬುರಗಿಯಲ್ಲಿ ಮನಕಲಕುವ ಘಟನೆ
ಗಾಯಗೊಂಡ ಎತ್ತು
Skanda
|

Updated on:Mar 13, 2021 | 11:20 AM

Share

ಕಲಬುರಗಿ: ಜಿಲ್ಲೆಯ ಶಹಬಾದ್ ತಾಲೂಕಿನ ಮರತೂರ ಗ್ರಾಮದಲ್ಲಿ ನಿನ್ನೆ ಸಂಜೆ ನಡೆದ ಆಕಸ್ಮಿಕ ಅಗ್ನಿ ಅನಾಹುತದಲ್ಲಿ ಆಕಳೊಂದು ಸಜೀವ ದಹನವಾಗಿದೆ. ಜೊತೆಯಲ್ಲಿದ್ದ ಎತ್ತು ಗಾಯಗೊಂಡಿದ್ದು, ಕರು ಬೆಂಕಿಯ ಕೆನ್ನಾಲಿಗೆಯಿಂದ ಪಾರಾಗಿದೆ. ಬೆಂಕಿ ವೇಗವಾಗಿ ವ್ಯಾಪಿಸಿದ ಕಾರಣ ಕೊಟ್ಟಿಗೆ ಸುಟ್ಟು ಭಸ್ಮವಾಗಿದೆ. ಹೊಲದಲ್ಲಿದ್ದ ಕೊಟ್ಟಿಗೆಗೆ ಏಕಾಏಕಿ ಬೆಂಕಿ ತಗುಲಿದ್ದು, ನೋಡು ನೋಡುತ್ತಲೇ ಕೊಟ್ಟಿಗೆಗೆ ವ್ಯಾಪಿಸಿದ ಬೆಂಕಿಯ ಕೆನ್ನಾಲಿಗೆ ಹಸುವನ್ನು ಬಲಿ ಪಡೆದಿದೆ. ಘಟನೆಯ ದೃಶ್ಯ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಮನಕಲಕುವಂತಿದೆ.

ಕೊಟ್ಟಿಗೆ ಧಗಧಗಿಸುತ್ತಿದ್ದ ವೇಳೆಯಲ್ಲೂ ಜೀವವನ್ನು ಉಳಿಸಿಕೊಳ್ಳಲು ಆಕಳು ಹೊರಗೆ ಓಡಿ ಬಂದ ದೃಶ್ಯ ಎಂತಹ ಕಲ್ಲು ಹೃದಯವನ್ನೂ ಕರಗಿಸುವಂತಿದೆ. ಮೈಯೆಲ್ಲಾ ಸುಟ್ಟು ಹೋದ ಕಾರಣ ಹೊರಗೆ ಓಡಿ ಬಂದ ಆಕಳು ಆಯಾಸದಿಂದ ನೆಲಕ್ಕುರುಳಿದೆ. ಅಲ್ಲದೇ. ತೀವ್ರವಾಗಿ ಬೆಂಕಿಯಲ್ಲಿ ಬೆಂದ ಕಾರಣ ಆಕಳಿನ ಮೂಗು ಬಾಯಿಯಿಂದ ಹೊಗೆ ಹೊರಹೊಮ್ಮಲಾರಂಭಿಸಿದ್ದು ಅದರ ಮೂಕ ರೋದನೆ ತೀವ್ರ ಬೇಸರ ತರಿಸುತ್ತದೆ.

ದಯಾನಂದ ಶೇರಿಕಾರ ಎನ್ನುವವರಿಗೆ ಸೇರಿದ ಕೊಟ್ಟಿಗೆ ಇದಾಗಿದ್ದು, ಜಾನುವಾರುಗಳನ್ನು ಎಂದಿನಂತೆ ಕೊಟ್ಟಿಗೆಯಲ್ಲಿ ಬಿಟ್ಟಿದ್ದಾಗ ಅಗ್ನಿ ಅವಘಡ ಸಂಭವಿಸಿದೆ. ಹತ್ತಿ ಕಟ್ಟಿಗೆಗೆ ಬೆಂಕಿ ಹೊತ್ತಿಕೊಂಡು ಪಕ್ಕದ ಕೊಟ್ಟಿಗೆಗೂ ಜ್ವಾಲೆ ಆವರಿಸಿದ ಕಾರಣ ಅನಾಹುತ ಘಟಿಸಿದೆ ಎನ್ನಲಾಗಿದೆ. ಘಟನೆ ಸಂಬಂಧ ಶಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಅಚ್ಚರಿಗೆ ಕಾರಣವಾದ ಕಲಬುರಗಿ ಜೋಳ ಬೆಳೆ: ಜೋಳದ ಬೀಜಕ್ಕೆ ಬಂತು ಬಲು ಡಿಮ್ಯಾಂಡ್ 

ಹಸುಗಳ ಹಾಲು ಕರೆಯುವ ಸ್ಪರ್ಧೆ: ನಾ ಮುಂದು ತಾ ಮುಂದು ಎಂದು ಬಂದ ಪಶುಪಾಲಕರು

Published On - 11:08 am, Sat, 13 March 21

Follow Us
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!