AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊತ್ತಿ ಉರಿದ ಕೊಟ್ಟಿಗೆ; ನೋಡನೋಡುತ್ತಲೇ ಸಜೀವ ದಹನವಾದ ಆಕಳು, ಕಲಬುರಗಿಯಲ್ಲಿ ಮನಕಲಕುವ ಘಟನೆ

ಕೊಟ್ಟಿಗೆ ಧಗಧಗಿಸುತ್ತಿದ್ದ ವೇಳೆಯಲ್ಲೂ ಜೀವವನ್ನು ಉಳಿಸಿಕೊಳ್ಳಲು ಆಕಳು ಹೊರಗೆ ಓಡಿ ಬಂದ ದೃಶ್ಯ ಎಂತಹ ಕಲ್ಲು ಹೃದಯವನ್ನೂ ಕರಗಿಸುವಂತಿದೆ. ಮೈಯೆಲ್ಲಾ ಸುಟ್ಟು ಹೋದ ಕಾರಣ ಹೊರಗೆ ಓಡಿ ಬಂದ ಆಕಳು ಆಯಾಸದಿಂದ ನೆಲಕ್ಕುರುಳಿದೆ.

ಹೊತ್ತಿ ಉರಿದ ಕೊಟ್ಟಿಗೆ; ನೋಡನೋಡುತ್ತಲೇ ಸಜೀವ ದಹನವಾದ ಆಕಳು, ಕಲಬುರಗಿಯಲ್ಲಿ ಮನಕಲಕುವ ಘಟನೆ
ಗಾಯಗೊಂಡ ಎತ್ತು
Skanda
|

Updated on:Mar 13, 2021 | 11:20 AM

Share

ಕಲಬುರಗಿ: ಜಿಲ್ಲೆಯ ಶಹಬಾದ್ ತಾಲೂಕಿನ ಮರತೂರ ಗ್ರಾಮದಲ್ಲಿ ನಿನ್ನೆ ಸಂಜೆ ನಡೆದ ಆಕಸ್ಮಿಕ ಅಗ್ನಿ ಅನಾಹುತದಲ್ಲಿ ಆಕಳೊಂದು ಸಜೀವ ದಹನವಾಗಿದೆ. ಜೊತೆಯಲ್ಲಿದ್ದ ಎತ್ತು ಗಾಯಗೊಂಡಿದ್ದು, ಕರು ಬೆಂಕಿಯ ಕೆನ್ನಾಲಿಗೆಯಿಂದ ಪಾರಾಗಿದೆ. ಬೆಂಕಿ ವೇಗವಾಗಿ ವ್ಯಾಪಿಸಿದ ಕಾರಣ ಕೊಟ್ಟಿಗೆ ಸುಟ್ಟು ಭಸ್ಮವಾಗಿದೆ. ಹೊಲದಲ್ಲಿದ್ದ ಕೊಟ್ಟಿಗೆಗೆ ಏಕಾಏಕಿ ಬೆಂಕಿ ತಗುಲಿದ್ದು, ನೋಡು ನೋಡುತ್ತಲೇ ಕೊಟ್ಟಿಗೆಗೆ ವ್ಯಾಪಿಸಿದ ಬೆಂಕಿಯ ಕೆನ್ನಾಲಿಗೆ ಹಸುವನ್ನು ಬಲಿ ಪಡೆದಿದೆ. ಘಟನೆಯ ದೃಶ್ಯ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಮನಕಲಕುವಂತಿದೆ.

ಕೊಟ್ಟಿಗೆ ಧಗಧಗಿಸುತ್ತಿದ್ದ ವೇಳೆಯಲ್ಲೂ ಜೀವವನ್ನು ಉಳಿಸಿಕೊಳ್ಳಲು ಆಕಳು ಹೊರಗೆ ಓಡಿ ಬಂದ ದೃಶ್ಯ ಎಂತಹ ಕಲ್ಲು ಹೃದಯವನ್ನೂ ಕರಗಿಸುವಂತಿದೆ. ಮೈಯೆಲ್ಲಾ ಸುಟ್ಟು ಹೋದ ಕಾರಣ ಹೊರಗೆ ಓಡಿ ಬಂದ ಆಕಳು ಆಯಾಸದಿಂದ ನೆಲಕ್ಕುರುಳಿದೆ. ಅಲ್ಲದೇ. ತೀವ್ರವಾಗಿ ಬೆಂಕಿಯಲ್ಲಿ ಬೆಂದ ಕಾರಣ ಆಕಳಿನ ಮೂಗು ಬಾಯಿಯಿಂದ ಹೊಗೆ ಹೊರಹೊಮ್ಮಲಾರಂಭಿಸಿದ್ದು ಅದರ ಮೂಕ ರೋದನೆ ತೀವ್ರ ಬೇಸರ ತರಿಸುತ್ತದೆ.

ದಯಾನಂದ ಶೇರಿಕಾರ ಎನ್ನುವವರಿಗೆ ಸೇರಿದ ಕೊಟ್ಟಿಗೆ ಇದಾಗಿದ್ದು, ಜಾನುವಾರುಗಳನ್ನು ಎಂದಿನಂತೆ ಕೊಟ್ಟಿಗೆಯಲ್ಲಿ ಬಿಟ್ಟಿದ್ದಾಗ ಅಗ್ನಿ ಅವಘಡ ಸಂಭವಿಸಿದೆ. ಹತ್ತಿ ಕಟ್ಟಿಗೆಗೆ ಬೆಂಕಿ ಹೊತ್ತಿಕೊಂಡು ಪಕ್ಕದ ಕೊಟ್ಟಿಗೆಗೂ ಜ್ವಾಲೆ ಆವರಿಸಿದ ಕಾರಣ ಅನಾಹುತ ಘಟಿಸಿದೆ ಎನ್ನಲಾಗಿದೆ. ಘಟನೆ ಸಂಬಂಧ ಶಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಅಚ್ಚರಿಗೆ ಕಾರಣವಾದ ಕಲಬುರಗಿ ಜೋಳ ಬೆಳೆ: ಜೋಳದ ಬೀಜಕ್ಕೆ ಬಂತು ಬಲು ಡಿಮ್ಯಾಂಡ್ 

ಹಸುಗಳ ಹಾಲು ಕರೆಯುವ ಸ್ಪರ್ಧೆ: ನಾ ಮುಂದು ತಾ ಮುಂದು ಎಂದು ಬಂದ ಪಶುಪಾಲಕರು

Published On - 11:08 am, Sat, 13 March 21

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?