Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಮಂಡಿಯೂರಿದ ಕ್ರಿಕೆಟ್​ ಆಸ್ಟ್ರೇಲಿಯಾ..! ಸಿಡ್ನಿಯಲ್ಲಿ ಭಾರತೀಯ ಆಟಗಾರರು ಜನಾಂಗೀಯ ನಿಂದನೆಗೊಳಗಾಗಿದ್ದು ನಿಜ

ಭಾರತೀಯ ಕ್ರಿಕೆಟ್ ತಂಡದ ಸದಸ್ಯರು ಜನಾಂಗೀಯ ನಿಂದನೆಗೆ ಒಳಗಾಗಿದ್ದರು ಎಂದು ಕ್ರಿಕೆಟ್​ ಆಸ್ಟ್ರೇಲಿಯಾ ದೃಢಪಡಿಸಿದೆ.

ಕೊನೆಗೂ ಮಂಡಿಯೂರಿದ ಕ್ರಿಕೆಟ್​ ಆಸ್ಟ್ರೇಲಿಯಾ..! ಸಿಡ್ನಿಯಲ್ಲಿ ಭಾರತೀಯ ಆಟಗಾರರು ಜನಾಂಗೀಯ ನಿಂದನೆಗೊಳಗಾಗಿದ್ದು ನಿಜ
ಫೀಲ್ಡಿಂಗ್​ ಮಾಡುವ ವೇಳೆ ಭಾರತದ ವೇಗದ ಬೌಲರ್​ ಮಹಮದ್​ ಸಿರಾಜ್​, ಆಸಿಸ್​ ಅಭಿಮಾನಿಗಳಿಂದ ಜನಾಂಗೀಯ ನಿಂದನೆಗೆ ಒಳಗಾದರು.
Follow us
ಪೃಥ್ವಿಶಂಕರ
|

Updated on:Jan 27, 2021 | 12:33 PM

ಸಿಡ್ನಿ: ಇತ್ತೀಚೆಗೆ ಮುಕ್ತಾಯಗೊಂಡ ಬಾರ್ಡರ್-ಗವಾಸ್ಕರ್ ಕ್ರಿಕೆಟ್ ಸರಣಿಯ ಮೂರನೇ ಟೆಸ್ಟ್ ಪಂದ್ಯದ ವೇಳೆ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ (SCG) ಪ್ರೇಕ್ಷಕರಿಂದ ಭಾರತೀಯ ಆಟಗಾರರು ಜನಾಂಗೀಯ ಕಿರುಕುಳಕ್ಕೆ ಒಳಗಾಗಿರುವುದು ಸತ್ಯ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಬುಧವಾರ ಒಪ್ಪಿಕೊಂಡಿದೆ.

ಸಿಡ್ನಿ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ಕೊನೆಯಲ್ಲಿ ಎಸ್‌ಸಿಜಿ ಕ್ರೀಡಾಂಗಣದಲ್ಲಿ ಕುಳಿತಿದ್ದ ಪ್ರೇಕ್ಷಕರು, ಟೀಂ ಇಂಡಿಯಾ ಆಟಗಾರರಾದ ಜಸ್ಪ್ರಿತ್ ಬುಮ್ರಾ ಮತ್ತು ಸಿರಾಜ್ ಅವರನ್ನು ಜನಾಂಗೀಯ ನಿಂದನೆಗೆ (sledging) ಗುರಿಪಡಿಸಿದ್ದಾರೆ ಎಂದು ಮ್ಯಾಚ್ ರೆಫರಿ ಡೇವಿಡ್ ಬೂನ್‌ಗೆ ಟೀಂ ಇಂಡಿಯಾ ಆಟಗಾರರು ದೂರು ನೀಡಿದ್ದರು. ನಂತರ ನಾಲ್ಕನೇ ದಿನಾದಟದಲ್ಲೂ ಈ ಘಟನೆ ಮರುಕಳಿಸಿತು. ಹೀಗಾಗಿ ಟೀಂ ಇಂಡಿಯಾ ಆಟಗಾರರು ಈ ವಿಚಾರವನ್ನು ಮತ್ತೆ ಆಂಪೈರ್​ ಗಮನಕ್ಕೆ ತಂದರು.

ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್‌ಗೆ ವರದಿ ಸಲ್ಲಿಕೆ ಇದರಿಂದಾಗಿ ನಾಲ್ಕನೇ ದಿನದಂದು ಆಸ್ಟ್ರೇಲಿಯಾದ ಎರಡನೇ ಇನ್ನಿಂಗ್ಸ್ ಸಮಯದಲ್ಲಿ ಟೀ ವಿರಾಮಕ್ಕೂ ಮುನ್ನ ಆರು ಜನರನ್ನು ಮೈದಾನದಿಂದ ಹೊರಹಾಕಲಾಯಿತು. ಈ ಘಟನೆಯ ನಂತರ, ಕ್ರಿಕೆಟ್ ಆಸ್ಟ್ರೇಲಿಯಾ ತನಿಖೆಯನ್ನು ಪ್ರಾರಂಭಿಸಿತ್ತು ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಈ ವಿಚಾರದ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆಸ್ಟ್ರೇಲಿಯಾದ ಕ್ರಿಕೆಟ್ ಮಂಡಳಿಗೆ ಸೂಚಿಸಿತ್ತು.

ಈ ಘಟನೆಗೆ ಸಂಬಂಧಿಸಿದಂತೆ ಕ್ರಿಕೆಟ್ ಆಸ್ಟ್ರೇಲಿಯಾ, ಭಾರತ ವಿರುದ್ಧದ ಮೂರನೇ ಟೆಸ್ಟ್ ಸಮಯದಲ್ಲಿ ಎಸ್‌ಸಿಜಿ ಮೈದಾನದಲ್ಲಿ ಪ್ರೇಕ್ಷಕರ ವರ್ತನೆ ಕುರಿತು ತನ್ನ ವರದಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್‌ಗೆ ಸಲ್ಲಿಸಿದೆ ಎಂದು ಸಿಎ ಸಮಗ್ರತೆ ಮತ್ತು ಭದ್ರತೆಯ ಮುಖ್ಯಸ್ಥ ಸೀನ್ ಕ್ಯಾರೊಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟೀಂ ಇಂಡಿಯಾ ಆಟಗಾರರ ವಿರುದ್ದ ಜನಾಂಗೀಯ ನಿಂದನೆ ಮಾಡಿದ ಪೇಕ್ಷಕರನ್ನು ಭದ್ರತಾ ಸಿಬ್ಬಂದಿ ಕ್ರೀಡಾಂಗಣದಿಂದ ಹೊರಗೆ ಕಳುಹಿಸಿದರು

ಜನಾಂಗೀಯ ನಿಂದನೆಗೆ ಒಳಗಾಗಿದ್ದರು.. ವರದಿಯಲ್ಲಿ, ಭಾರತೀಯ ಕ್ರಿಕೆಟ್ ತಂಡದ ಸದಸ್ಯರು ಜನಾಂಗೀಯ ನಿಂದನೆಗೆ ಒಳಗಾಗಿದ್ದರು ಎಂದು ಕ್ರಿಕೆಟ್​ ಆಸ್ಟ್ರೇಲಿಯಾ ದೃಢಪಡಿಸಿದೆ. ಈ ವಿಷಯದ ಬಗ್ಗೆ ಸಿಎ ಸ್ವಂತ ತನಿಖೆ ಮುಕ್ತವಾಗಿದೆ, ಸಿಸಿಟಿವಿ ದೃಶ್ಯಾವಳಿಗಳು, ಟಿಕೆಟಿಂಗ್ ಡೇಟಾಗಳ ವಿಶ್ಲೇಷಣೆಯ ಮೂಲಕ ಈ ಘಟನೆಗೆ ಕಾರಣಕರ್ತರನ್ನು ಸಿಎ ಪತ್ತೆಹಚ್ಚಲಿದೆ ಎಂದರು.

ಜನಾಂಗೀಯ ನಿಂದನೆಗೊಳಗಾದ ಮಹಮದ್​ ಸಿರಾಜ್​ ಭಾರತಕ್ಕೆ ಮರಳಿದ ಬಳಿಕ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದರು. ಈ ಬಗ್ಗೆ ಮಾತಾನಾಡಿದ್ದ ಸಿರಾಜ್, ಪ್ರಕರಣದ ತನಿಖೆ ನಡೆಯುತ್ತಿದೆ. ನಮಗೆ ನ್ಯಾಯ ಸಿಗುತ್ತದೆಯೋ ಇಲ್ಲವೋ ಎಂದು ನೋಡೋಣ. ನಾನು ಫಿಲ್ಡಿಂಗ್​ ಮಾಡುವ ವೇಳೆ ಕೆಲವು ಪ್ರೇಕ್ಷಕರು ನನ್ನನ್ನು ನಿಂದಿಸುತ್ತಿದ್ದಾರೆಂದು ನಾನು ನನ್ನ ತಂಡದ ನಾಯಕರಾದ ಅಜಿಂಕ್ಯಾ ರಹಾನೆಗೆ ಹೇಳಿದ್ದೆ ಎಂದಿದ್ದರು.

ನಾವು ಕ್ರಿಕೆಟ್ ಆಟವನ್ನು ಗೌರವಿಸುತ್ತೇವೆ.. ಇದನ್ನು ಗಂಭೀರವಾಗಿ ಪರಿಗಣಿಸಿದ ರಹಾನೆ ಈ ವಿಚಾರವನ್ನು ಅಂಪೈರ್ ಬಳಿ ಹೇಳಿಕೊಂಡರು. ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡ ಅಂಪೈರ್, ನೀವು ಆಟವನ್ನು ಇಲ್ಲಿಗೆ ನಿಲ್ಲಿಸಬಹುದು ಎಂದು ಹೇಳಿದ್ದರು. ಆದರೆ ಕ್ಯಾಪ್ಟನ್ ರಹಾನೆ, ನಾವು ಹಾಗೆ ಹೋಗುವುದಿಲ್ಲ, ನಾವು ಕ್ರಿಕೆಟ್ ಆಟವನ್ನು ಗೌರವಿಸುತ್ತೇವೆ. ನೀವು ಆ ಪ್ರೇಕ್ಷಕರನ್ನು ಮೈದಾನದಿಂದ ಹೊರಗೆ ಕಳುಹಿಸಬಹುದು ಎಂದು ಅಂಪೈರ್ ಬಳಿ ಹೇಳಿಕೊಂಡಿದ್ದರು ಎಂದು ಸಿರಾಜ್ ಹೇಳಿಕೆ ನೀಡಿದ್ದರು.

ಘಟನೆಯ ಬಳಿಕ ಕ್ರಿಕೆಟ್ ಆಸ್ಟ್ರೇಲಿಯಾ ಮತ್ತು ಡೇವಿಡ್ ವಾರ್ನರ್ ಮತ್ತು ಮುಖ್ಯ ಕೋಚ್ ಜಸ್ಟಿನ್ ಲ್ಯಾಂಗರ್ ಸೇರಿದಂತೆ ಆಸ್ಟ್ರೇಲಿಯಾದ ಆಟಗಾರರು ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದರು.

India vs Australia Test Series | ಸಿಡ್ನಿ ಕ್ರಿಕೆಟ್​ ಮೈದಾನದಲ್ಲಿ ಪ್ರೇಕ್ಷಕರಿಂದ ಭಾರತೀಯ ಆಟಗಾರ ವಿರುದ್ಧ ಜನಾಂಗೀಯ ನಿಂದನೆ

Published On - 12:11 pm, Wed, 27 January 21

‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ