AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ದಿನ ಆಸ್ಪತ್ರೆಯಲ್ಲಿ ಗಂಗೂಲಿ; ನಾಳೆ ಡಿಸ್ಚಾರ್ಜ್

ಸೌರವ್ ಗಂಗೂಲಿಯವರ ಅಪೇಕ್ಷೆಯ ಮೇರೆಗೆ ಅವರ ಅಸ್ಪತ್ರೆ ವಾಸವನ್ನು ಒಂದು ದಿನದ ಮಟ್ಟಿಗೆ ವಿಸ್ತರಿಸಲಾಗಿದೆ. ಬಿಸಿಸಿಐ ಅಧ್ಯಕ್ಷನ ಹೃದಯ ಈಗ 20ರ ತರುಣನ ಹೃದಯದಂತೆ ಕೆಲಸ ಮಾಡುತ್ತಿದೆ ಎಂದು ಖ್ಯಾತ ಹಾರ್ಟ್ ಸರ್ಜನ್ ಡಾ. ದೇವಿ ಶೆಟ್ಟಿ ಹೇಳಿದ್ದಾರೆ.

ಮತ್ತೊಂದು ದಿನ ಆಸ್ಪತ್ರೆಯಲ್ಲಿ ಗಂಗೂಲಿ; ನಾಳೆ ಡಿಸ್ಚಾರ್ಜ್
ಸೌರವ್​ ಗಂಗೂಲಿ
ಅರುಣ್​ ಕುಮಾರ್​ ಬೆಳ್ಳಿ
|

Updated on:Jan 06, 2021 | 4:19 PM

Share

ಕೊಲ್ಕತ್ತಾ: ಮಾಧ್ಯಮಗಳಲ್ಲಿ ಮಂಗಳವಾರದಂದು ವರದಿಯಾಗಿರುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸೌರವ್ ಗಂಗೂಲಿ ಆಸ್ಪತ್ರೆಯಿಂದ ಇಂದು (ಜ.6) ಡಿಸ್ಚಾರ್ಜ್ ಆಗುತ್ತಿಲ್ಲ. ಗುರುವಾರ ಡಿಸ್ಚಾರ್ಜ್ ಆಗಲಿದ್ದಾರೆ. ಮತ್ತೊಂದು ದಿನ ಆಸ್ಪತ್ರೆಯಲ್ಲಿ ಇರುತ್ತೇನೆ ಎನ್ನುವ ನಿರ್ಧಾರವನ್ನು ಖುದ್ದು ಗಂಗೂಲಿಯವರೇ ತೆಗೆದುಕೊಂಡಿದ್ದಾರೆ ಎಂದು ವುಡ್​ಲ್ಯಾಂಡ್ ಆಸ್ಪತ್ರೆಯ ಮೂಲಗಳು ಹೇಳಿವೆ.

‘ಅವರು ಅಸ್ಪತ್ರೆಯಲ್ಲಿರುವವರೆಗೆ ಮತ್ತು ಡಿಸ್ಚಾರ್ಜ್ ಆದ ನಂತರವೂ ನಮ್ಮ ವೈದ್ಯಕೀಯ ತಂಡ ಅವರ ಆರೋಗ್ಯದ ಮೇಲೆ ನಿರಂತರ ನಿಗಾ ಇಡಲಿದೆ. ಅವರನ್ನು ಇಂದೇ ಡಿಸ್ಚಾರ್ಜ್ ಮಾಡಲು ನಿರ್ಧರಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಇನ್ನೊಂದು ದಿನ ಕಳೆಯಲು ಸೌರವ್ ಗಂಗೂಲಿ ಇಚ್ಛೆ ವ್ಯಕ್ತಪಡಿಸಿದ್ದಾರೆ’ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಇಂದು ಮಧ್ಯಾಹ್ನ ಮಾಧ್ಯಮದವರೊಂದಿಗೆ ಮಾತಾಡಿದ ಅಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ರೂಪಾಲಿ ಬಸು, ಗಂಗೂಲಿಯವರ ಆರೋಗ್ಯ ಸ್ಥಿರವಾಗಿದೆ. ಕಳೆದ 24 ಗಂಟೆಗಳಲ್ಲಿ ಗಂಗೂಲಿ ಆರೋಗ್ಯದಲ್ಲಿ ಯಾವುದೇ ಏರುಪೇರು ಕಂಡುಬಂದಿಲ್ಲ. ಮತ್ತೊಮ್ಮೆ ಅವರ ರಕ್ತ ಪರೀಕ್ಷೆಯನ್ನು ಮಾಡಲಾಗಿದೆ. ಆವರ ಹೃದಯ ಸೂಕ್ತವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಎಲ್ಲ ಪ್ಯಾರಾಮೀಟರ್​ಗಳು ಸರಿಯಾಗಿವೆ. ಅವರನ್ನು ಗುರುವಾರದಂದು ಡಿಸ್ಚಾರ್ಜ್ ಮಾಡಲಾಗುವುದು’ ಎಂದು ಡಾ. ರೂಪಾಲಿ ಹೇಳಿದರು.

ಜನವರಿ 2ರಂದು ತಮ್ಮ ಮನೆಯ ಜಿಮ್​ನಲ್ಲಿ ವ್ಯಾಯಾಮ ಮಾಡುತ್ತಿದ್ದ ಗಂಗೂಲಿ ಎದೆಯಲ್ಲಿ ಬಿಗಿತ, ತಲೆಭಾರ ಹಾಗೂ ಮೂರ್ಛೆ ಬಂದಂತೆ ಆದ ಬಗ್ಗೆ ದೂರಿದ ನಂತರ ಅವರನ್ನು ಮುಂಜಾನೆ 11 ಗಂಟೆ ಸುಮಾರಿಗೆ ವುಡ್​ಲ್ಯಾಂಡ್ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಗೂಲಿಗೆ ಲಘು ಹೃದಯಾಘಾತವಾಗಿರುವ ವಿಷಯವನ್ನು ತಿಳಿಸಿದ್ದ ವೈದ್ಯರು ಚಿಕಿತ್ಸೆ ಪ್ರಾರಂಭಿಸಿದ್ದರು.

ಗಂಗೂಲಿಯವರನ್ನು ಡಿಸ್ಚಾರ್ಜ್ ಮಾಡಿದ 2-3 ವಾರಗಳವರೆಗೆ ಅವರ ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸಬೇಕಾಗುತ್ತದೆ. ಅನಂತರ ಮುಂದಿನ ಚಿಕಿತ್ಸಾ ಕ್ರಮದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದೆಂದು ಡಾ. ರೂಪಾಲಿ ಹೇಳಿದ್ದಾರೆ.

ಖ್ಯಾತ ಹಾರ್ಟ್ ಸರ್ಜನ್ ಡಾ.ದೇವಿ ಶೆಟ್ಟಿಯವರು ಗಂಗೂಲಿಯನ್ನು ನೋಡಿಕೊಳ್ಳುತ್ತಿರುವ ವೈದಕೀಯ ತಂಡವನ್ನು ಭೇಟಿಯಾಗಿ ಚಿಕಿತ್ಸಾ ಕ್ರಮದ ಬಗ್ಗೆ ಸಲಹೆ ನೀಡಿದರು. ನಂತರ ಸುದ್ದಿಗಾರರೊಂದಿಗೆ ಮಾತಾಡಿದ ಡಾ.ಶೆಟ್ಟಿ, ‘ಗಂಗೂಲಿ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ, ಅವರ ಹೃದಯ ಈಗ 20 ರ ಪ್ರಾಯದ ಯುವಕನ ಹೃದಯದಂತೆ ಕಾರ್ಯ ನಿರ್ವಹಿಸುತ್ತಿದೆ’ ಎಂದರು.

ಎದೆ ನೋವಿನಿಂದ ಆಸ್ಪತ್ರೆಗೆ ದಾಖಲಾದ BCCI ಅಧ್ಯಕ್ಷ ಸೌರವ್​ ಗಂಗೂಲಿ

ಗಂಗೂಲಿ ಕಾಣಿಸಿಕೊಂಡಿದ್ದ ಫಾರ್ಚೂನ್ ಅಡುಗೆ ಎಣ್ಣೆ ಜಾಹೀರಾತುಗಳನ್ನು ತಡೆಹಿಡಿದ ಅದಾನಿ ವಿಲ್ಮರ್​ ಸಂಸ್ಥೆ

Published On - 3:58 pm, Wed, 6 January 21

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು