AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟ್‌ ಪಂದ್ಯಾವಳಿ: ಬಹುಮಾನ ನೋಡಿ ಮುಗಿಬಿದ್ದ 400 ತಂಡಗಳು, ಬೇಸತ್ತ ಆಯೋಜಕರಿಂದ ಪಂದ್ಯಾವಳಿ ರದ್ದು.. ಅಷ್ಟಕ್ಕೂ ಯಾವುದು ಆ ಬಹುಮಾನ..!

ಆಯೋಜಕರು ನೀಡುವ ಬಹುಮಾನಗಳ ಲಿಸ್ಟ್​ ನೋಡಿದ ರಾಜ್ಯದ 400 ಕ್ಕೂ ಹೆಚ್ಚು ಕ್ರಿಕೆಟ್​ ತಂಡಗಳು, ತಾವು ಸಹ ಕ್ರಿಕೆಟ್​ ಪಂದ್ಯಾವಳಿಯಲ್ಲಿ ಭಾಗವಹಿಸುವುದಾಗಿ ನೊಂದಣಿ ಮಾಡಿಕೊಳಲ್ಲು ಈಗ ಮುಗಿಬಿದ್ದಿದ್ದಾರೆ.

ಕ್ರಿಕೆಟ್‌ ಪಂದ್ಯಾವಳಿ: ಬಹುಮಾನ ನೋಡಿ ಮುಗಿಬಿದ್ದ 400 ತಂಡಗಳು, ಬೇಸತ್ತ ಆಯೋಜಕರಿಂದ ಪಂದ್ಯಾವಳಿ ರದ್ದು.. ಅಷ್ಟಕ್ಕೂ ಯಾವುದು ಆ ಬಹುಮಾನ..!
ಪೃಥ್ವಿಶಂಕರ
|

Updated on:Jan 29, 2021 | 4:23 PM

Share

ಚಿಕ್ಕಮಗಳೂರು: ಜಿಲ್ಲೆಯ ಕಡಬಗೆರೆಯಲ್ಲಿ ಕ್ರಿಕೆಟ್‌ ಟೂರ್ನಿ ಆಯೋಜನೆ ಮಾಡಲಾಗಿದ್ದು, ಆಯೋಜಕರು ಪಂದ್ಯಾವಳಿಯಲ್ಲಿ ಗೆದ್ದವರಿಗೆ ಭಾರೀ ಮೊತ್ತದ ಬಹುಮಾನ ಘೋಷಣೆ ಮಾಡಿದ್ದಾರೆ. ಆಯೋಜಕರು ಗೆದ್ದವರಿಗೆ ನೀಡುವ ಬಹುಮಾನದ ಮಾಹಿತಿ ಕೇಳಿದರೆ ನೀವೂ ಸಹ ಒಂದು ತಂಡ ಕಟ್ಟಿಕೊಂಡು ಚಿಕ್ಕಮಗಳೂರಿಗೆ ದೌಡಾಯಿಸುವುದರಲ್ಲಿ ಯಾವೂದೇ ಅನುಮಾನವಿಲ್ಲ. ಏನದು ಬಹುಮಾನ..? ಮುಂದೆ ಓದಿ.

ಹೌದು.. ಕಾಫಿ ನಾಡಿನ ಕ್ರಿಕೆಟ್‌ ಪ್ರೇಮಿಗಳು ಫೆಬ್ರವರಿಯಂದು ಜಿಲ್ಲೆಯ ಕಡಬಗೆರೆ ಗಾಂಧಿ ಮೈದಾನದಲ್ಲಿ ಕ್ರಿಕೆಟ್‌ ಪಂದ್ಯಾವಳಿ ಆಯೋಜನೆ ಮಾಡಿದ್ದು, ಪಂದ್ಯಾವಳಿಯಲ್ಲಿ ಗೆದ್ದವರಿಗೆ ಭಾರಿ ಮೊತ್ತದ ಹಾಗೂ ತುಂಬಾ ವಿಶಿಷ್ಟಕರವಾದ ಬಹುಮಾನ ನೀಡುವುದಾಗಿ ಪ್ರಚಾರ ನೀಡಿದ್ದಾರೆ.

ಆಯೋಜಕರು ನೀಡುವ ಬಹುಮಾನಗಳ ಲಿಸ್ಟ್​ ನೋಡಿದ ರಾಜ್ಯದ 400 ಕ್ಕೂ ಹೆಚ್ಚು ಕ್ರಿಕೆಟ್​ ತಂಡಗಳು, ತಾವು ಸಹ ಕ್ರಿಕೆಟ್​ ಪಂದ್ಯಾವಳಿಯಲ್ಲಿ ಭಾಗವಹಿಸುವುದಾಗಿ ನೊಂದಣಿ ಮಾಡಿಕೊಳ್ಳಲು ಈಗ ಮುಗಿಬಿದ್ದಿದ್ದಾರೆ. ಹೀಗೆ ಸಂಚಲನ ಮೂಡಿಸಿರುವ ಕ್ರಿಕೆಟ್​ ಪಂದ್ಯಾವಳಿಯ ಬಹುಮಾನಗಳ ವರದಿ ನೋಡುವುದಾದರೆ..

ಮೊದಲನೇ ಬಹುಮಾನ- 30 ಕೆ. ಜಿ ತೂಗುವ ಕುರಿ ಹಾಗೂ 1 ಕೇಸ್​ ಬಿಯರ್​ ಎರಡನೇ ಬಹುಮಾನ- 6 ನಾಟಿ ಕೋಳಿ, 1 ಫುಲ್​ ಬಾಟಲ್​ ದುಬಾರಿ ಮದ್ಯ ಹಾಗೂ 1 ಕೇಸ್​ ಬಿಯರ್

ಪಂದ್ಯಾವಳಿಯಲ್ಲಿ ಭಾಗವಹಿಸಿದ ಎಲ್ಲಾ ತಂಡಗಳಿಗೂ ತಂಪು ಪಾನೀಯವನ್ನು ಬಹುಮಾನವನ್ನಾಗಿ ನೀಡುವುದಾಗಿ ಹೇಳಿದ್ದಾರೆ. ಇಷ್ಟೆ ಅಲ್ಲದೆ ಸರಣಿ ಶ್ರೇಷ್ಠ ಆಟಗಾರನಿಗೆ 5 ಕೆ.ಜಿ ಈರುಳ್ಳಿ, ಉತ್ತಮ ದಾಂಡಿಗನಿಗೆ 1 ಕೆ.ಜಿ ಖಾರದ ಪುಡಿ ಹಾಗೂ ಉತ್ತಮ ಬೌಲರ್​ಗೆ 2 ಲೀಟರ್​ ಅಡುಗೆ ಎಣ್ಣೆ ನೀಡುವುದಾಗಿ ಬಹುಮಾನ ಘೋಷಿಸಿದ್ದಾರೆ.

400 ತಂಡಗಳಿಂದ ಫೋನ್ ಕರೆ, ಪಂದ್ಯಾವಳಿ ರದ್ದು.. ಬಹುಮಾನದ ವರದಿ ನೋಡಿದ ರಾಜ್ಯದ ನಾನಾ ಕ್ರಿಕೆಟ್‌ ತಂಡಗಳ ಕ್ಯಾಪ್ಟನ್​ಗಳು ಆಯೋಜಕರಿಗೆ ಫೋನ್​ ಮಾಡಲು ಪ್ರಾರಂಭಿಸಿದ್ದಾರೆ. ಪ್ರಕಟಣೆ ಹೊರಡಿಸಿದ ಒಂದೇ ದಿನದಲ್ಲಿ ರಾಜ್ಯದ ನಾನಾ ಕಡೆಯಿಂದ 400 ಕ್ಕೂ ಹೆಚ್ಚು ತಂಡಗಳು ಕರೆ ಮಾಡಿದ್ದಾರೆ. ಹೀಗಾಗಿ ಅಪಾರ ಫೋನ್ ಕರೆಗಳಿಂದ ಹೆದರಿದ ಆಯೋಜಕರು ಸದ್ಯಕ್ಕೆ ಪಂದ್ಯಾವಳಿಯನ್ನು ರದ್ದುಗೊಳಿಸಿದ್ದಾರೆ! ಹೀಗಾಗಿ ವಿಭಿನ್ನ ಬಹುಮಾನಗಳನ್ನು ಪಡೆಯುವಲ್ಲಿ ವಂಚಿತರಾಗಿ ನಿರಾಶೆಗೊಳ್ಳುವ ಸರದಿ ಈಗ ನಿಮ್ಮದು..

ಇನ್ಮುಂದೆ ಕ್ರಿಕೆಟ್​ನಲ್ಲಿ ಬೌನ್ಸರ್​ ಬ್ಯಾನ್​?: ಮಹತ್ವದ ವರದಿ ನೀಡಿದ ತಜ್ಞರ ತಂಡ

Published On - 4:05 pm, Thu, 28 January 21

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ