ನದಿಯಲ್ಲಿ ಈಜಾಡುತ್ತಿದ್ದ ಬಾಲಕನನ್ನ ಎಳೆದೊಯ್ದ ಮೊಸಳೆ, ಗ್ರಾಮಸ್ಥರಲ್ಲಿ ಆತಂಕ!

ರಾಯಚೂರು: ಕೃಷ್ಣಾ ನದಿ ಹಿನ್ನೀರಿನಲ್ಲಿ ಈಜಾಡುತ್ತಿದ್ದ ಬಾಲಕನನ್ನು ಮೊಸಳೆ ಎಳೆದೊಯ್ದಿರುವ ಘಟನೆ ಲಿಂಗಸುಗೂರು ತಾಲೂಕಿನ ಚಿತ್ತಾಪುರ ಗ್ರಾಮದ ಬಳಿ ನಡೆದಿದೆ. ನದಿಯಲ್ಲಿ ಈಜಾಡುತ್ತಿದ್ದ 16 ವರ್ಷದ ಮಂಜುನಾಥ್​ನನ್ನು ಮೊಸಳೆ ಏಕಾಏಕಿ ಎಳೆದೊಯ್ದಿದೆ. ಘಟನಾ ಸ್ಥಳಕ್ಕೆ ಸ್ಥಳೀಯರು ಹಾಗೂ ಲಿಂಗಸುಗೂರು ಪೊಲೀಸರು ಭೇಟಿ ನೀಡಿದ್ದು, ಬಾಲಕನಿಗಾಗಿ ಶೋಧಾ ಕಾರ್ಯ ನಡೆಸುತ್ತಿದ್ದಾರೆ. ಈ ಸಂಬಂಧ ಲಿಂಗಸಗೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನದಿಯಲ್ಲಿ ಈಜಾಡುತ್ತಿದ್ದ ಬಾಲಕನನ್ನ ಎಳೆದೊಯ್ದ ಮೊಸಳೆ, ಗ್ರಾಮಸ್ಥರಲ್ಲಿ ಆತಂಕ!
ಸಾಧು ಶ್ರೀನಾಥ್​

Updated on: Apr 19, 2020 | 2:54 PM

ರಾಯಚೂರು: ಕೃಷ್ಣಾ ನದಿ ಹಿನ್ನೀರಿನಲ್ಲಿ ಈಜಾಡುತ್ತಿದ್ದ ಬಾಲಕನನ್ನು ಮೊಸಳೆ ಎಳೆದೊಯ್ದಿರುವ ಘಟನೆ ಲಿಂಗಸುಗೂರು ತಾಲೂಕಿನ ಚಿತ್ತಾಪುರ ಗ್ರಾಮದ ಬಳಿ ನಡೆದಿದೆ. ನದಿಯಲ್ಲಿ ಈಜಾಡುತ್ತಿದ್ದ 16 ವರ್ಷದ ಮಂಜುನಾಥ್​ನನ್ನು ಮೊಸಳೆ ಏಕಾಏಕಿ ಎಳೆದೊಯ್ದಿದೆ.

ಘಟನಾ ಸ್ಥಳಕ್ಕೆ ಸ್ಥಳೀಯರು ಹಾಗೂ ಲಿಂಗಸುಗೂರು ಪೊಲೀಸರು ಭೇಟಿ ನೀಡಿದ್ದು, ಬಾಲಕನಿಗಾಗಿ ಶೋಧಾ ಕಾರ್ಯ ನಡೆಸುತ್ತಿದ್ದಾರೆ. ಈ ಸಂಬಂಧ ಲಿಂಗಸಗೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us