
ರಾಯಚೂರು: ಕೃಷ್ಣಾ ನದಿ ಹಿನ್ನೀರಿನಲ್ಲಿ ಈಜಾಡುತ್ತಿದ್ದ ಬಾಲಕನನ್ನು ಮೊಸಳೆ ಎಳೆದೊಯ್ದಿರುವ ಘಟನೆ ಲಿಂಗಸುಗೂರು ತಾಲೂಕಿನ ಚಿತ್ತಾಪುರ ಗ್ರಾಮದ ಬಳಿ ನಡೆದಿದೆ. ನದಿಯಲ್ಲಿ ಈಜಾಡುತ್ತಿದ್ದ 16 ವರ್ಷದ ಮಂಜುನಾಥ್ನನ್ನು ಮೊಸಳೆ ಏಕಾಏಕಿ ಎಳೆದೊಯ್ದಿದೆ.
ಘಟನಾ ಸ್ಥಳಕ್ಕೆ ಸ್ಥಳೀಯರು ಹಾಗೂ ಲಿಂಗಸುಗೂರು ಪೊಲೀಸರು ಭೇಟಿ ನೀಡಿದ್ದು, ಬಾಲಕನಿಗಾಗಿ ಶೋಧಾ ಕಾರ್ಯ ನಡೆಸುತ್ತಿದ್ದಾರೆ. ಈ ಸಂಬಂಧ ಲಿಂಗಸಗೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.