ಕಾಲೇಜಿಗೆ ಯಾಕೆ ಬಂತು ಈ ಮೊಸಳೆ!?

ಧಾರವಾಡ: ವ್ಯಾಸಂಗವೋ ಅಥವಾ ಮತ್ಯಾವುದೋ ಸಂಗ ಬಯಸಿ ಮೊಸಳೆಯೊಂದು ಕಾಲೇಜ್ ಆವರಣದಲ್ಲಿ ದಿಢೀರನೇ ಪ್ರತ್ಯಕ್ಷವಾಗಿಬಟ್ಟಿದೆ. ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳು ಮೊಸಳೆ ನೋಡಿ‌ ಭಯಭೀತರಾಗಿ, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಧಾರವಾಡ ಜಿಲ್ಲೆಯಅಳ್ನಾವರ ಪಟ್ಟಣದ ಹೊರ ಭಾಗದಲ್ಲಿರೋ ಸೇಂಟ್ ಥೆರೇಸಾ ಕಾಲೇಜ್ ನಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಸಿಬ್ಬಂದಿಗೆ ಇತರೆ ಸಾರ್ವಜನಿಕರೂ ಸಾಥ್​ ನೀಡಿದ್ದಾರೆ. ಕೊನೆಗೆ ಮೊಸಳೆಯನ್ನು ಜೀವಂತವಾಗಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಕಾಲೇಜಿಗೆ ಯಾಕೆ ಬಂತು ಈ ಮೊಸಳೆ!?
ಸಾಧು ಶ್ರೀನಾಥ್​

Updated on: Feb 20, 2020 | 4:51 PM

ಧಾರವಾಡ: ವ್ಯಾಸಂಗವೋ ಅಥವಾ ಮತ್ಯಾವುದೋ ಸಂಗ ಬಯಸಿ ಮೊಸಳೆಯೊಂದು ಕಾಲೇಜ್ ಆವರಣದಲ್ಲಿ ದಿಢೀರನೇ ಪ್ರತ್ಯಕ್ಷವಾಗಿಬಟ್ಟಿದೆ. ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳು ಮೊಸಳೆ ನೋಡಿ‌ ಭಯಭೀತರಾಗಿ, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಧಾರವಾಡ ಜಿಲ್ಲೆಯಅಳ್ನಾವರ ಪಟ್ಟಣದ ಹೊರ ಭಾಗದಲ್ಲಿರೋ ಸೇಂಟ್ ಥೆರೇಸಾ ಕಾಲೇಜ್ ನಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಸಿಬ್ಬಂದಿಗೆ ಇತರೆ ಸಾರ್ವಜನಿಕರೂ ಸಾಥ್​ ನೀಡಿದ್ದಾರೆ. ಕೊನೆಗೆ ಮೊಸಳೆಯನ್ನು ಜೀವಂತವಾಗಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us