AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈ, ಹೈದರಾಬಾದ್​​ನಿಂದ 6 CRPF ಕಂಪನಿ ಬರ್ತಿದೆ: ಗೃಹ ಸಚಿವ ಬೊಮ್ಮಾಯಿ

ಬೆಂಗಳೂರು: ನಿನ್ನೆ ರಾತ್ರಿ ನಡೆದ ಗಲಭೆಯಿಂದ ತಲ್ಲಣಗೊಂಡಿರುವ ಕೆ.ಜಿ.ಹಳ್ಳಿ-ಡಿ.ಜೆ.ಹಳ್ಳಿ ಏರಿಯಾದ ಸುತ್ತಮುತ್ತ ಇದೀಗ ಗರುಡ ಸ್ಪೆಷಲ್ ಫೋರ್ಸ್​ ರೌಂಡ್ಸ್ ಹೊಡೆಯಲು ಪ್ರಾರಂಭಿಸಿದೆ. ನಿಷೇಧಾಜ್ಞೆ ಜಾರಿಯಲ್ಲಿರುವ ಪ್ರದೇಶದಲ್ಲಿ ಗಸ್ತು ತಿರುಗುತ್ತಿರುವ ಈ ವಿಶೇಷ ಪಡೆ ಸೈರನ್ ಮೊಳಗಿಸುವ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ನೀಡುತ್ತಿದೆ. ಗಲ್ಲಿಗಲ್ಲಿಗೂ ನುಗ್ಗಿ ಎಚ್ಚರಿಕೆ ನೀಡುತ್ತಿರುವ ಗರುಡ ಫೋರ್ಸ್ ಮನೆ ಬಿಟ್ಟು ಹೊರಗೆ ಬಂದವರಿಗೆ ಲಾಠಿ ರುಚಿ ತೋರಿಸುತ್ತಿದೆ. ‘ಹೈದರಾಬಾದ್ ಮತ್ತು ಚೆನ್ನೈನಿಂದ 6 CRPF ತುಕಡಿ ಬರುತ್ತಿದೆ’ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ […]

ಚೆನ್ನೈ, ಹೈದರಾಬಾದ್​​ನಿಂದ 6 CRPF ಕಂಪನಿ ಬರ್ತಿದೆ: ಗೃಹ ಸಚಿವ ಬೊಮ್ಮಾಯಿ
KUSHAL V
|

Updated on: Aug 12, 2020 | 12:45 PM

Share

ಬೆಂಗಳೂರು: ನಿನ್ನೆ ರಾತ್ರಿ ನಡೆದ ಗಲಭೆಯಿಂದ ತಲ್ಲಣಗೊಂಡಿರುವ ಕೆ.ಜಿ.ಹಳ್ಳಿ-ಡಿ.ಜೆ.ಹಳ್ಳಿ ಏರಿಯಾದ ಸುತ್ತಮುತ್ತ ಇದೀಗ ಗರುಡ ಸ್ಪೆಷಲ್ ಫೋರ್ಸ್​ ರೌಂಡ್ಸ್ ಹೊಡೆಯಲು ಪ್ರಾರಂಭಿಸಿದೆ. ನಿಷೇಧಾಜ್ಞೆ ಜಾರಿಯಲ್ಲಿರುವ ಪ್ರದೇಶದಲ್ಲಿ ಗಸ್ತು ತಿರುಗುತ್ತಿರುವ ಈ ವಿಶೇಷ ಪಡೆ ಸೈರನ್ ಮೊಳಗಿಸುವ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ನೀಡುತ್ತಿದೆ. ಗಲ್ಲಿಗಲ್ಲಿಗೂ ನುಗ್ಗಿ ಎಚ್ಚರಿಕೆ ನೀಡುತ್ತಿರುವ ಗರುಡ ಫೋರ್ಸ್ ಮನೆ ಬಿಟ್ಟು ಹೊರಗೆ ಬಂದವರಿಗೆ ಲಾಠಿ ರುಚಿ ತೋರಿಸುತ್ತಿದೆ.

‘ಹೈದರಾಬಾದ್ ಮತ್ತು ಚೆನ್ನೈನಿಂದ 6 CRPF ತುಕಡಿ ಬರುತ್ತಿದೆ’ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಬಸವರಾಜ್​ ಬೊಮ್ಮಾಯಿ ಅವರು ಹೈದರಾಬಾದ್ ಮತ್ತು ಚೆನ್ನೈನಿಂದ ಬರುತ್ತಿರುವ 6 CRPF ತುಕಡಿಗಳನ್ನ ಡಿಜೆ ಹಳ್ಳಿಯಲ್ಲಿ ನಿಯೋಜಿಸಲಾಗುವುದು. ಸೂಕ್ಷ್ಮ ಪ್ರದೇಶದಲ್ಲಿ CRPF ನಿಯೋಜನೆ ಬಗ್ಗೆ ಹಿರಿಯ ಅಧಿಕಾರಿಗಳು ತೀರ್ಮಾನ ಕೈಗೊಳ್ಳುತ್ತಾರೆ. ಜೊತೆಗೆ, ರಾಪಿಡ್ ಌಕ್ಷನ್ ಫೋರ್ಸ್ ಮತ್ತು ಗರುಡ ಫೋರ್ಸ್ ಕೂಡ ಸ್ಥಳದಲ್ಲಿ ಈಗಾಗಲೇ ನಿಯೋಜಿಸಲಾಗಿದೆ.

ಪ್ಲಾನ್ ಮಾಡಿ, ದಾಳಿ ಮಾಡಿದ್ದು ಮೇಲ್ನೋಟಕ್ಕೆ ಕಂಡುಬಂದಿದೆ: ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿನ ಪರಿಸ್ಥಿತಿ ಸಂಪೂರ್ಣವಾಗಿ ಪೊಲೀಸರ ಹತೋಟಿಯಲ್ಲಿದೆ. ಇನ್ನು ಹೆಚ್ಚಿನ ಗಲಭೆಕೋರರ ಬಂಧನ ಆಗಬೇಕಾಗಿದೆ. ಘಟನೆಯ ಹಿಂದೆ ಯಾರಿದ್ದಾರೆ ಅನ್ನೋ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಯುತ್ತಿದೆ. ಘಟನೆಯ ಬಗ್ಗೆ ಮುಖ್ಯಮಂತ್ರಿಗಳು ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ. ನಾನು ಮುಖ್ಯಮಂತ್ರಿ ಜೊತೆ ಫೋನ್ ನಲ್ಲಿ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು  ಹೇಳಿದ್ದಾರೆ.

ಪೊಲೀಸ್ ಸ್ಟೇಷನ್​ನಲ್ಲಿ ಘಟನೆಯ ಎಲ್ಲಾ ರೆಕಾರ್ಡ್​ಗಳಿವೆ. ಸಿಸಿಟಿವಿ ಇದೆ. ಕೃತ್ಯ ಎಸಗಿದ ಎಲ್ಲರ ಮಾಹಿತಿ ಕಲೆ ಹಾಕಲಾಗುತ್ತಿದೆ. ಫೇಸ್​ಬುಕ್​ನಲ್ಲಿ ಕರೆಕೊಟ್ಟು ಪ್ಲಾನ್ ಮಾಡಿ ದಾಳಿ ಮಾಡಿದ್ದು ಮೇಲ್ನೋಟಕ್ಕೆ ಕಂಡುಬಂದಿದೆ. ಕಾನೂನು ಸುವ್ಯವಸ್ಥೆಯನ್ನು ಹದಗೆಡಿಸಲು ಷಡ್ಯಂತ್ರ ನಡೆದಿದೆ. ಹಬ್ಬ-ಹರಿದಿನಗಳು ಶಾಂತವಾಗಿ ನಡೆಯುತ್ತಿರುವಾಗ ಸಮಾಜಘಾತುಕ ಶಕ್ತಿಗಳ ಕೃತ್ಯ ಕಂಡುಬಂದಿದೆ. ಕೆಲವರು ಪ್ರಚೋದನೆ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಸಮಾಜದಲ್ಲಿ ಶಾಂತಿ ಕದಡುವ ಯತ್ನ ನಡೆದಿದೆ. ಬೆಂಗಳೂರು ತಲುಪಿದ ತಕ್ಷಣ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಮಾಡುತ್ತೇವೆ. ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಉಡುಪಿಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ