AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾರಾಯಣಗೌಡ್ರು ಸೀರೆ, ಮೂಗು ಬೊಟ್ಟು ತಂದಿದ್ದಾರೆ, ಆದ್ರೆ ಜನ ಮಾರುಹೋಗಲ್ಲ’

ಮಂಡ್ಯ: ಕೆ.ಆರ್.ಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಸಿ.ನಾರಾಯಣಗೌಡ ವ್ಯಾಪಾರ ಮಾಡಲು ಮುಂಬೈಗೆ ಹೋದ್ರು. ಅಲ್ಲಿ ವ್ಯಾಪಾರ ಮಾಡಲು ಆಗಲಿಲ್ಲ. ಇಲ್ಲಿಗೆ ವ್ಯಾಪಾರ ಮಾಡಲು ಬಂದಿದ್ರು. ಈಗ ದೊಡ್ಡ ವ್ಯಾಪಾರ ಮಾಡಿಕೊಂಡಿದ್ದಾರೆ. ಅದೇ ವ್ಯಾಪಾರದ ದುಡ್ಡಲ್ಲಿ ಹಳೆಯ ಮಾಡಲ್ ಸೀರೆ, ರೋಲ್‌ ಗೋಲ್ಡ್ ಮೂಗಬೊಟ್ಟು, ಡೂಪ್ಲಿಕೇಟ್ ರಾಡೋ ವಾಚ್ ಬಂದಿವೆ. ಇವುಗಳಿಗೆ ನಮ್ಮ ಜನ ಮಾರುಹೋಗಲ್ಲ ಎಂದು ಮಾಜಿ ಸಚಿವ ಸಿ.ಎಸ್​.ಪುಟ್ಟರಾಜು ವಾಗ್ದಾಳಿ ನಡೆಸಿದರು. ಕೆ.ಸಿ.ನಾರಾಯಣಗೌಡ ಅವರ ಆಮಿಷಗಳಿಗೆ ಕ್ಷೇತ್ರದ ಜನರು ಮಾರುಹೋಗುವುದಿಲ್ಲ. ಅವರ ವ್ಯಾಪಾರದ ದುಡ್ಡಿನಿಂದ ಒಂದೆರಡು […]

‘ನಾರಾಯಣಗೌಡ್ರು ಸೀರೆ, ಮೂಗು ಬೊಟ್ಟು ತಂದಿದ್ದಾರೆ, ಆದ್ರೆ ಜನ ಮಾರುಹೋಗಲ್ಲ’
ಸಾಧು ಶ್ರೀನಾಥ್​
|

Updated on:Nov 24, 2019 | 4:51 PM

Share

ಮಂಡ್ಯ: ಕೆ.ಆರ್.ಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಸಿ.ನಾರಾಯಣಗೌಡ ವ್ಯಾಪಾರ ಮಾಡಲು ಮುಂಬೈಗೆ ಹೋದ್ರು. ಅಲ್ಲಿ ವ್ಯಾಪಾರ ಮಾಡಲು ಆಗಲಿಲ್ಲ. ಇಲ್ಲಿಗೆ ವ್ಯಾಪಾರ ಮಾಡಲು ಬಂದಿದ್ರು. ಈಗ ದೊಡ್ಡ ವ್ಯಾಪಾರ ಮಾಡಿಕೊಂಡಿದ್ದಾರೆ. ಅದೇ ವ್ಯಾಪಾರದ ದುಡ್ಡಲ್ಲಿ ಹಳೆಯ ಮಾಡಲ್ ಸೀರೆ, ರೋಲ್‌ ಗೋಲ್ಡ್ ಮೂಗಬೊಟ್ಟು, ಡೂಪ್ಲಿಕೇಟ್ ರಾಡೋ ವಾಚ್ ಬಂದಿವೆ. ಇವುಗಳಿಗೆ ನಮ್ಮ ಜನ ಮಾರುಹೋಗಲ್ಲ ಎಂದು ಮಾಜಿ ಸಚಿವ ಸಿ.ಎಸ್​.ಪುಟ್ಟರಾಜು ವಾಗ್ದಾಳಿ ನಡೆಸಿದರು.

ಕೆ.ಸಿ.ನಾರಾಯಣಗೌಡ ಅವರ ಆಮಿಷಗಳಿಗೆ ಕ್ಷೇತ್ರದ ಜನರು ಮಾರುಹೋಗುವುದಿಲ್ಲ. ಅವರ ವ್ಯಾಪಾರದ ದುಡ್ಡಿನಿಂದ ಒಂದೆರಡು ಸಾವಿರ ವೋಟ್ ತಗೋಬಹುದು ಅಷ್ಟೇ. ಅವರು ಇಂತಹ ಗಿಮಿಕ್​ಗಳಿಂದ ರಾಜಕಾರಣ ಮಾಡಲು ಆಗಲ್ಲ. ಮತ್ತೆ ಅವರನ್ನು ಇಲ್ಲಿಯ ಜನರು ಯಾವ ರೀತಿ ಮುಂಬೈಗೆ ಕಳಿಸ್ತಾರೆ ನೋಡಿ ಎಂದು ಮಡುವಿನ ಕೋಡಿ ಗ್ರಾಮದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ರು.

ಬಿಜೆಪಿ ದೇವೇಗೌಡರ ಮನೆ ಬಾಗಿಲು ತಟ್ಟುತ್ತೆ: ಉಪಚುನಾವಣೆಯಲ್ಲಿ ಬಿಜೆಪಿ 2-3 ಸೀಟ್ ಗೆಲ್ಲದಿದ್ರೆ ಏನ್ ಆಗುತ್ತೆ. ಫಲಿತಾಂಶದ ಬಳಿಕ ಬಿಜೆಪಿಯವರು ದೇವೇಗೌಡರ ಮನೆ ಬಾಗಿಲು ತಟ್ಟೋದನ್ನ ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಡಿ.5ರ ಮೇಲೆ ನಮ್ಮ ರಾಜಕೀಯ ಲೆಕ್ಕಾಚಾರ ತಿಳಿಸುತ್ತೇವೆ. ನೂರಕ್ಕೆ ನೂರು ಭಾಗ ಚುನಾವಣೆ ಬಳಿಕ ಬಿಜೆಪಿ ದೇವೇಗೌಡರ ಮನೆಗೆ ಬರೋದನ್ನ ತಪ್ಪಿಸಲು ಆಗುವುದಿಲ್ಲ ಎಂದರು.

Published On - 4:46 pm, Sun, 24 November 19

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ