ಬಿಲ್ ಹೆಚ್ಚಾಗಿ ಹಾಕಿದ್ದೀರೆಂದು ಪ್ರಶ್ನಿಸಿದ್ದಕ್ಕೆ ಗ್ರಾಹಕರ ಮೇಲೆ ರಾಡ್​ನಿಂದ ಹಲ್ಲೆ

ಹುಬ್ಬಳ್ಳಿ: 60 ರೂಪಾಯಿ ಬಿಲ್ ಹೆಚ್ಚಾಗಿ ಹಾಕಿದ್ದೀರೆಂದು ಪ್ರಶ್ನಿಸಿದ್ದಕ್ಕೆ ಹೋಟೆಲ್ ಮಾಲೀಕ ಮತ್ತು ಸಿಬ್ಬಂದಿ ಸೇರಿ ಗ್ರಾಹಕರ ಮೇಲೆ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದ ಪಿಬಿ ರಸ್ತೆಯಲ್ಲಿರುವ ಹೋಟೆಲ್‌ನಲ್ಲಿ ನಡೆದಿದೆ. ನಿನ್ನೆ ತಡ ರಾತ್ರಿ ಊಟ ಮಾಡಲು ಬಂದಿದ್ದ ಪ್ರಕಾಶ ಬಿದರಕುಂದಿ ಮತ್ತು ಮುತ್ತಪ್ಪ ಬಿದರಕುಂದಿ ಎಂಬ ಇಬ್ಬರು ಗ್ರಾಹಕರು ಊಟ ಮಾಡಿದ ಬಳಿಕ ಬಿಲ್ ಕೇಳಿದ್ದಾರೆ. ಬಿಲ್​ನಲ್ಲಿ 60 ರೂಪಾಯಿ ಹೆಚ್ಚಾಗಿ ಬಿಲ್ ಹಾಕಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ಹೋಟೆಲ್ ಮಾಲೀಕ ಮತ್ತು ಸಿಬ್ಬಂದಿ ಸೇರಿ […]

ಬಿಲ್ ಹೆಚ್ಚಾಗಿ ಹಾಕಿದ್ದೀರೆಂದು ಪ್ರಶ್ನಿಸಿದ್ದಕ್ಕೆ ಗ್ರಾಹಕರ ಮೇಲೆ ರಾಡ್​ನಿಂದ ಹಲ್ಲೆ
ಸಾಧು ಶ್ರೀನಾಥ್​

Updated on: Jan 07, 2020 | 8:40 AM

ಹುಬ್ಬಳ್ಳಿ: 60 ರೂಪಾಯಿ ಬಿಲ್ ಹೆಚ್ಚಾಗಿ ಹಾಕಿದ್ದೀರೆಂದು ಪ್ರಶ್ನಿಸಿದ್ದಕ್ಕೆ ಹೋಟೆಲ್ ಮಾಲೀಕ ಮತ್ತು ಸಿಬ್ಬಂದಿ ಸೇರಿ ಗ್ರಾಹಕರ ಮೇಲೆ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದ ಪಿಬಿ ರಸ್ತೆಯಲ್ಲಿರುವ ಹೋಟೆಲ್‌ನಲ್ಲಿ ನಡೆದಿದೆ. ನಿನ್ನೆ ತಡ ರಾತ್ರಿ ಊಟ ಮಾಡಲು ಬಂದಿದ್ದ ಪ್ರಕಾಶ ಬಿದರಕುಂದಿ ಮತ್ತು ಮುತ್ತಪ್ಪ ಬಿದರಕುಂದಿ ಎಂಬ ಇಬ್ಬರು ಗ್ರಾಹಕರು ಊಟ ಮಾಡಿದ ಬಳಿಕ ಬಿಲ್ ಕೇಳಿದ್ದಾರೆ.

ಬಿಲ್​ನಲ್ಲಿ 60 ರೂಪಾಯಿ ಹೆಚ್ಚಾಗಿ ಬಿಲ್ ಹಾಕಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ಹೋಟೆಲ್ ಮಾಲೀಕ ಮತ್ತು ಸಿಬ್ಬಂದಿ ಸೇರಿ ನೀರಿನ ಜಗ್ ಹಾಗೂ ಕಬ್ಬಿಣದ ರಾಡ್‌ನಿಂದ ಗ್ರಾಹಕರ ಮೇಲೆ ಹಲ್ಲೆ ಮಾಡಿದ್ದಾರೆ. ಗಾಯಾಳುಗಳಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us