AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ಪರಿಷ್ಕೃತ ಡಿಎ ಪಾವತಿ

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಇದು. ಜುಲೈನಿಂದ ಡಿ.ಎ. ಪರಿಷ್ಕರಣೆ ಆಗಲಿದೆ. ಈ ಬಗ್ಗೆ ರಾಜ್ಯಸಭೆಯಲ್ಲಿ ಲಿಖಿತ ಉತ್ತರವನ್ನು ನೀಡಲಾಗಿದೆ. ಕೊರೊನಾ ಕಾರಣಕ್ಕೆ ಮೂರು ಕಂತು ಡಿಎ, ಡಿಆರ್ ಕಡಿತ ಮಾಡಿತ್ತು.

ಕೇಂದ್ರ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ಪರಿಷ್ಕೃತ ಡಿಎ ಪಾವತಿ
ಸಾಂದರ್ಭಿಕ ಚಿತ್ರ
Srinivas Mata
| Edited By: |

Updated on: Mar 10, 2021 | 2:42 PM

Share

ಕೇಂದ್ರ ಸರ್ಕಾರಿ ನೌಕರರಿಗೆ ಸದ್ಯದಲ್ಲೇ ಪರಿಷ್ಕೃತವಾದ ಹೆಚ್ಚಿನ ದರದ ತುಟ್ಟಿ ಭತ್ಯೆ ದೊರೆಯಲಿದೆ. ಕೇಂದ್ರ ಸರ್ಕಾರಿ ನೌಕರರಿಗೆ ಮುಂದಿನ ಕಂತಿನ ತುಟ್ಟಿ ಭತ್ಯೆ (ಡಿಎ) ಜುಲೈ 1, 2021ಕ್ಕೆ ಬಾಕಿ ಇದೆ. ಕೇಂದ್ರ ಸರ್ಕಾರವು ಈ ಬಗ್ಗೆ ರಾಜ್ಯಸಭೆಗೆ ಲಿಖಿತ ಉತ್ತರವನ್ನು ನೀಡಿದೆ. ಯಾವಾಗ ಮುಂದಿನ ಕಂತಿನ ಡಿಎ ಬಿಡುಗಡೆಯ ತೀರ್ಮಾನವನ್ನು ತೆಗೆದುಕೊಳ್ಳಲಾಗುತ್ತದೋ ಆಗ 1-1-2020, 1-7-2020 ಹಾಗೂ 1-1-2021ರ ದರವನ್ನು ಮತ್ತೆ ನೀಡಲಾಗುವುದು ಎಂದು ತಿಳಿಸಲಾಗಿದೆ.

ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಸಹ ಮಾತನಾಡಿ, ಈ ಹಿಂದಿನ ಮೂರು ದರಗಳನ್ನು ಮತ್ತೆ ನೀಡಲಾಗುವುದು. 1-7-2021ರಿಂದ ಕ್ಯುಮುಲೇಟಿವ್ ಪರಿಷ್ಕೃತ ದರದಲ್ಲಿ ಆರಂಭಿಸಲಾಗುವುದು ಎಂದಿದ್ದಾರೆ. ಇದರರ್ಥ ಏನೆಂದರೆ, ಪರಿಷ್ಕೃತ ಡಿಎ ದರವು ಕಳೆದ ವರ್ಷ ಸ್ಥಗಿತವಾಗಿದ್ದ ದರಕ್ಕಿಂತ ಹೆಚ್ಚಿನದಾಗಿರುತ್ತದೆ.

ಕೊರೊನಾ ಬಿಕ್ಕಟ್ಟಿನ ಕಾರಣಕ್ಕೆ ಕೇಂದ್ರ ಸರ್ಕಾರವು ಕಳೆದ ವರ್ಷ ಕೇಂದ್ರ ಸರ್ಕಾರಿ ನೌಕರರಿಗೆ ಹಾಗೂ ಪಿಂಚಣಿದಾರರಿಗೆ ಡಿಎ ಅಥವಾ ಡಿಯರ್​ನೆಸ್ ಅಲೋಯನ್ಸ್ ಮತ್ತು ಡಿಯರ್​ನೆಸ್ ರಿಲೀಫ್ ಮೂರು ಕಂತು 1-1-2020, 1-7-2020 ಹಾಗೂ 1-1-2021ಕ್ಕೆ ಸ್ಥಗಿತಗೊಳಿಸಿತ್ತು. ಈ ಸಂಬಂಧ ಠಾಕೂರ್ ಮಾತನಾಡಿ, ಡಿಎ, ಡಿಆರ್, ಸ್ಥಗಿತಗೊಳಿಸಿದ್ದರಿಂದ ಸರ್ಕಾರಕ್ಕೆ 37,530.08 ಕೋಟಿ ರೂಪಾಯಿ ಉಳಿತಾಯ ಮಾಡಲು ಸಾಧ್ಯವಾಯಿತು ಎಂದಿದ್ದಾರೆ. ಕೋವಿಡ್- 19 ಸನ್ನಿವೇಶದಲ್ಲಿ ಆರ್ಥಿಕತೆಗೆ ಇದರಿಂದ ನೆರವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: New Wage Code: ಏಪ್ರಿಲ್​ನಿಂದ ನಿಮ್ಮ ಕೈಗೆ ಬರುವ ಸಂಬಳದ ಲೆಕ್ಕಾಚಾರವೇ ಆಗಲಿದೆ ಬದಲು

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ