AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ಪರಿಷ್ಕೃತ ಡಿಎ ಪಾವತಿ

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಇದು. ಜುಲೈನಿಂದ ಡಿ.ಎ. ಪರಿಷ್ಕರಣೆ ಆಗಲಿದೆ. ಈ ಬಗ್ಗೆ ರಾಜ್ಯಸಭೆಯಲ್ಲಿ ಲಿಖಿತ ಉತ್ತರವನ್ನು ನೀಡಲಾಗಿದೆ. ಕೊರೊನಾ ಕಾರಣಕ್ಕೆ ಮೂರು ಕಂತು ಡಿಎ, ಡಿಆರ್ ಕಡಿತ ಮಾಡಿತ್ತು.

ಕೇಂದ್ರ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ಪರಿಷ್ಕೃತ ಡಿಎ ಪಾವತಿ
ಸಾಂದರ್ಭಿಕ ಚಿತ್ರ
Srinivas Mata
| Edited By: |

Updated on: Mar 10, 2021 | 2:42 PM

Share

ಕೇಂದ್ರ ಸರ್ಕಾರಿ ನೌಕರರಿಗೆ ಸದ್ಯದಲ್ಲೇ ಪರಿಷ್ಕೃತವಾದ ಹೆಚ್ಚಿನ ದರದ ತುಟ್ಟಿ ಭತ್ಯೆ ದೊರೆಯಲಿದೆ. ಕೇಂದ್ರ ಸರ್ಕಾರಿ ನೌಕರರಿಗೆ ಮುಂದಿನ ಕಂತಿನ ತುಟ್ಟಿ ಭತ್ಯೆ (ಡಿಎ) ಜುಲೈ 1, 2021ಕ್ಕೆ ಬಾಕಿ ಇದೆ. ಕೇಂದ್ರ ಸರ್ಕಾರವು ಈ ಬಗ್ಗೆ ರಾಜ್ಯಸಭೆಗೆ ಲಿಖಿತ ಉತ್ತರವನ್ನು ನೀಡಿದೆ. ಯಾವಾಗ ಮುಂದಿನ ಕಂತಿನ ಡಿಎ ಬಿಡುಗಡೆಯ ತೀರ್ಮಾನವನ್ನು ತೆಗೆದುಕೊಳ್ಳಲಾಗುತ್ತದೋ ಆಗ 1-1-2020, 1-7-2020 ಹಾಗೂ 1-1-2021ರ ದರವನ್ನು ಮತ್ತೆ ನೀಡಲಾಗುವುದು ಎಂದು ತಿಳಿಸಲಾಗಿದೆ.

ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಸಹ ಮಾತನಾಡಿ, ಈ ಹಿಂದಿನ ಮೂರು ದರಗಳನ್ನು ಮತ್ತೆ ನೀಡಲಾಗುವುದು. 1-7-2021ರಿಂದ ಕ್ಯುಮುಲೇಟಿವ್ ಪರಿಷ್ಕೃತ ದರದಲ್ಲಿ ಆರಂಭಿಸಲಾಗುವುದು ಎಂದಿದ್ದಾರೆ. ಇದರರ್ಥ ಏನೆಂದರೆ, ಪರಿಷ್ಕೃತ ಡಿಎ ದರವು ಕಳೆದ ವರ್ಷ ಸ್ಥಗಿತವಾಗಿದ್ದ ದರಕ್ಕಿಂತ ಹೆಚ್ಚಿನದಾಗಿರುತ್ತದೆ.

ಕೊರೊನಾ ಬಿಕ್ಕಟ್ಟಿನ ಕಾರಣಕ್ಕೆ ಕೇಂದ್ರ ಸರ್ಕಾರವು ಕಳೆದ ವರ್ಷ ಕೇಂದ್ರ ಸರ್ಕಾರಿ ನೌಕರರಿಗೆ ಹಾಗೂ ಪಿಂಚಣಿದಾರರಿಗೆ ಡಿಎ ಅಥವಾ ಡಿಯರ್​ನೆಸ್ ಅಲೋಯನ್ಸ್ ಮತ್ತು ಡಿಯರ್​ನೆಸ್ ರಿಲೀಫ್ ಮೂರು ಕಂತು 1-1-2020, 1-7-2020 ಹಾಗೂ 1-1-2021ಕ್ಕೆ ಸ್ಥಗಿತಗೊಳಿಸಿತ್ತು. ಈ ಸಂಬಂಧ ಠಾಕೂರ್ ಮಾತನಾಡಿ, ಡಿಎ, ಡಿಆರ್, ಸ್ಥಗಿತಗೊಳಿಸಿದ್ದರಿಂದ ಸರ್ಕಾರಕ್ಕೆ 37,530.08 ಕೋಟಿ ರೂಪಾಯಿ ಉಳಿತಾಯ ಮಾಡಲು ಸಾಧ್ಯವಾಯಿತು ಎಂದಿದ್ದಾರೆ. ಕೋವಿಡ್- 19 ಸನ್ನಿವೇಶದಲ್ಲಿ ಆರ್ಥಿಕತೆಗೆ ಇದರಿಂದ ನೆರವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: New Wage Code: ಏಪ್ರಿಲ್​ನಿಂದ ನಿಮ್ಮ ಕೈಗೆ ಬರುವ ಸಂಬಳದ ಲೆಕ್ಕಾಚಾರವೇ ಆಗಲಿದೆ ಬದಲು

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ