AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope ದಿನ ಭವಿಷ್ಯ: ಸಿಂಹ ರಾಶಿಯವರಿಗೆ ಆರ್ಥಿಕ ಸಂಕಷ್ಟಗಳು ಪರಿಹಾರ

ದಿನ ಭವಿಷ್ಯ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಷಷ್ಠಿ ತಿಥಿ, ಗುರುವಾರ, 4 ಮಾರ್ಚ್​​ 2021. ವಿಶಾಖ ನಕ್ಷತ್ರ.

Daily Horoscope ದಿನ ಭವಿಷ್ಯ: ಸಿಂಹ ರಾಶಿಯವರಿಗೆ ಆರ್ಥಿಕ ಸಂಕಷ್ಟಗಳು ಪರಿಹಾರ
ದಿನ ಭವಿಷ್ಯ
ರಾಜೇಶ್ ದುಗ್ಗುಮನೆ
| Edited By: |

Updated on:Mar 04, 2021 | 8:42 AM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಷಷ್ಠಿ ತಿಥಿ, ಗುರುವಾರ, 4 ಮಾರ್ಚ್​​ 2021. ವಿಶಾಖ ನಕ್ಷತ್ರ, ರಾಹುಕಾಲ: ಮಧ್ಯಾಹ್ನ 1:56 ಮಧ್ಯಾಹ್ನ ಸಂಜೆ 3:24 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.32. ಸೂರ್ಯಾಸ್ತ: ಸಂಜೆ 6.23.

ದಿನಾಂಕ04-03-2021 ರ ಗುರುವಾರದ ರಾಶಿಭವಿಷ್ಯ ಮೇಷ: ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ. ಶುಭ ಸಂಖ್ಯೆ: 7

ವೃಷಭ:ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವದು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 2

ಮಿಥುನ:ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು.ಉದ್ಯೋಗದ ಸ್ಥಾನ ಬದಲಾವಣೆಯ ವಿಚಾರವಾಗಿ ಚಿಂತೆ ಇರುವದು. ಶುಭ ಸಂಖ್ಯೆ: 9

ಕರ್ಕ: ಅಪಮಾನ,ಅಪವಾದದಂತಹ ಸಮಸ್ಸೆಗೆ ಸಿಲುಕದಂತೆ ಜಾಗರೂಕರಾಗಿರಿ.ಈ ಸಮಯದಲ್ಲಿ ಮಾತನಾಡುವ ಬದಲು ಮಾತು ಕೇಳುವದು ಉತ್ತಮ.ಮಕ್ಕಳು ಶಾಲಾ ಕಾಲೇಜುಗಳಲ್ಲಿ ಸಾಧನೆ ತೋರುವರು. ಶುಭ ಸಂಖ್ಯೆ: 4

ಸಿಂಹ: ವ್ಯಾಪಾರದಲ್ಲಿ ಅಭಿವೃದ್ಧಿಯಾಗುವದು. ಆರ್ಥಿಕ ಸಂಕಷ್ಟಗಳು ಪರಿಹಾರವಾಗುವವು. ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವದು.ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 1

ಕನ್ಯಾ: ಅಗೌರವ ಆಗುವ ಸಂಭವ ಇರುವದರಿಂದ ಸೂಕ್ಷ್ಮವಾಗಿರುವದು ಉತ್ತಮ. ಅನಪೇಕ್ಷಿತರಿಗೆ ಉಪಕಾರ ಮಾಡುವದು ಸರಿಯಲ್ಲ. ಮಕ್ಕಳ ಚಿಂತೆ ಇರುವದು. ವಧುವರರಿಗೆ ಮದುವೆಯ ಯೋಗ ಕೂಡಿಬರುವದು. ಶುಭ ಸಂಖ್ಯೆ: 6

ತುಲಾ: ಉದ್ಯೋಗ ಬದಲಿ ಮಾಡುವದು ಸದ್ಯ ಬೇಡ.ಹಣದ ಕೊರತೆ ಇರಲಾರದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವದು. ಪಿತ್ರಾರ್ಜಿತ ಆಸ್ತಿ ದೊರೆಯುವ ಯೋಗವಿದೆ. ತಂದೆತಾಯಿಯ ವಿಷಯದಲ್ಲಿ ಚಿಂತೆ ಇರುವದು. ಶುಭ ಸಂಖ್ಯೆ: 5

ವೃಶ್ಚಿಕ: ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ಡಿಟ್ಟತನದಿಂದ ಕೆಲಸ ನಿರ್ವಹಿಸಿ.ವ್ಯಾಪಾರವೃದ್ಧಿಯಾಗುವದು. ಆರ್ಥಿಕ ಸಂಕಷ್ಟ ದೂರಾಗುವದು. ಶುಭ ಸಂಖ್ಯೆ: 8

ಧನು: ಮಾನಸಮ್ಮಾನಗಳು ದೊರೆಯುವವು. ಕಂಕಣಬಲ ಕೂಡಿಬರುವದು. ಮನೋಭಿಲಾಷೆಗಳು ಈಡೇರುವವು. ಆದರೆ ಉದ್ಯೋಗದಲ್ಲಿ ನಿರಾಸಕ್ತಿಯನ್ನು ಇರುವದು ಮತ್ತು ವ್ಯವಹಾರದಲ್ಲಿ ಅಸಮಾಧಾನ ಕಂಡುಬರುವದು. ಶುಭ ಸಂಖ್ಯೆ: 3

ಮಕರ: ಒಂದೇ ಮನಸಿನ ಕ್ರೀಯಾಶೀಲವಾದ ಬದುಕು ಸಾಧನೆಗೆ ಕಾರಣವಾಗುವದು. ಅಡೆತಡೆಗಳ ನಿವಾರಣೆ ಯಾಗುವದು. ನಿಶ್ಚಿತ ಅವಧಿಯ ಪರೀಕ್ಷೆಗಳು ಎದುರಾದರೂ ಬಲಗುಂದುವದಿಲ್ಲ. ಹಿರಿಯರ ಸಲಹೆ ದೊರೆಯುವದು. ಶುಭ ಸಂಖ್ಯೆ: 7

ಕುಂಭ: ಹೊಸ ಯೋಜನೆಗೆ ಸಂಬಂಧಿಸಿದಂತೆ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಶುಭ ಸಂಖ್ಯೆ: 2

ಮೀನ: ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಕರ್ತವ್ಯಕ್ಕೆ ಚ್ಯುತಿಯಾಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡುವಿರಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಶುಭ ಸಂಖ್ಯೆ: 9

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 6:27 am, Thu, 4 March 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ