AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನಭವಿಷ್ಯ | ಫೆಬ್ರವರಿ 01, 2021

ಫೆಬ್ರವರಿ 01,202ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನಭವಿಷ್ಯ.

ದಿನಭವಿಷ್ಯ | ಫೆಬ್ರವರಿ 01, 2021
ಫೆಬ್ರವರಿ ದಿನ ಭವಿಷ್ಯ
ರಾಜೇಶ್ ದುಗ್ಗುಮನೆ
| Edited By: |

Updated on:Feb 01, 2021 | 6:30 AM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಪುಷ್ಯಮಾಸ, ಹೇಮಂತ ಋತು, ಕೃಷ್ಣಪಕ್ಷ, ಚೌತಿ ತಿಥಿ, ಸೋಮವಾರ, ಫೆಬ್ರವರಿ 01,2021. ಉತ್ತರೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 8:13 ಗಂಟೆಯಿಂದ ರಿಂದ ರಾತ್ರಿ 09:38 ಗಂಟೆ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.48. ಸೂರ್ಯಾಸ್ತ: ಸಂಜೆ 6.11.

ತಾ.01-02-2021 ರ ಸೋಮವಾರದ ರಾಶಿಭವಿಷ್ಯ (ಪೆಬ್ರವರಿ ಮಾಸಕ್ಕೆ ಶುಭಂ)

ಮೇಷ: ಮನಸ್ಸು ಹಿಡಿತದಲ್ಲಿರಲಿ. ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಕ್ಲೇಷ ಉಂಟಾಗುವದು. ತೋರಿಕೆಯ ಸ್ವಭಾವದಿಂದ ದೃಷ್ಟಿದೋಷ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 6

ವೃಷಭ: ಎಲ್ಲವೂ ಇದ್ದಂತೆ ಇರಲಿ ಎಂಬ ಮನೋಭಾವನೆ ಇರುವದು. ಕೆಲಸದಲ್ಲಿ ಬದಲಾವಣೆ ತರಲು ಪ್ರಯತ್ನಿಸಿ. ವಿದೇಶ ಪ್ರಯಾಣದ ಯೋಗವಿದೆ.ಉದ್ಯೋಗದಲ್ಲಿ ಪ್ರಗತಿ ಮುಂದುವರೆಯುವದು. ಶುಭ ಸಂಖ್ಯೆ: 3

ಮಿಥುನ: ಎಲ್ಲವನ್ನು ಹಗುರವಾಗಿ ಕಾಣುವದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 8

ಕರ್ಕ: ಯೋಜನಾಬದ್ಧ ಕೆಲಸಗಳೂ ಕೂಡ ಮುಂದೂಡುವ ಪ್ರಸಂಗವಿದೆ. ಆಪ್ತವಲಯದಲ್ಲಿ ಸಮಾಲೋಚಿಸಿರಿ. ಅನಿವಾರ್ಯ ಕರ್ತವ್ಯಗಳಿಗೆ ಸಮಯ ಹೊಂದಾಣಿಕೆ ಮಾಡುವ ಸಾಧ್ಯತೆ ಇದೆ. ಆರ್ಥಕ ಸಂಕಷ್ಟಗಳು ಎದುರಾಗುವವು. ಶುಭ ಸಂಖ್ಯೆ: 1

ಸಿಂಹ:ಅನಾವಶ್ಯಕ ತಿರುಗಾಟದಿಂದ ಆಲಸ್ಯ. ದುರ್ಜನರ ಸಹವಾಸ ದೋಷ ಕಂಡುಬರುವದು. ಐಷಾರಾಮಿ ವಸ್ತುಗಳ ಖರೀದಿ ಸಂಭವ. ವ್ಯಾಪಾರ-ಉದ್ಯಮಗಳಲ್ಲಿ ತೃಪ್ತಿದಾಯಕ ಲಾಭವಿರುವದು. ವಿದ್ಯಾರ್ಥಿಗಳಿಗೆ ಹಿನ್ನಡೆ ಇರುವದು. ಶುಭ ಸಂಖ್ಯೆ: 4

ಕನ್ಯಾ: ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವದು. ಸಂಕಷ್ಟಗಳ ಪರಿಹಾರಕ್ಕಾಗಿ ಅಲೆದಾಡಬೇಕಾದ ಸಂಭವವಿದೆ. ಶುಭ ಸಂಖ್ಯೆ: 9

ತುಲಾ: ನಿಶ್ಚಿತ ಆರ್ಥಿಕ ಸ್ಥಿತಿ ಇರುವದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 7

ವೃಶ್ಚಿಕ: ವ್ಯಾಪಾರದಲ್ಲಿ ಪ್ರಗತಿ ಇರುವದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವದು. ಶುಭ ಸಂಖ್ಯೆ: 5

ಧನು: ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು. ಶುಭ ಸಂಖ್ಯೆ: 8

ಮಕರ: ವ್ಯವಹಾರಿಕ ಏಳ್ಗೆ ಇರುವದು. ದೂರ ಪ್ರಯಾಣದ ಸಂಭವ. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ.ವಿವಿಧ ಸೌಭಾಗ್ಯಪ್ರಾಪ್ತಿ..ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್,ವಾಹನ,ಮಶಿನರಿಗಳಿಂದ ತೊಂದರೆ. ಶುಭ ಸಂಖ್ಯೆ: 3

ಕುಂಭ: ವಾದ-ವಿವಾದ, ಹಠಸಾಧನೆ, ತಪ್ಪುಗಳ ಸಮರ್ಥನೆ, ಮತ್ತೊಬ್ಬರ ಮೇಲೆ ದೋಷಾರೋಪಣೆ ಬೇಡ. ಆಯಾಸದಿಂದ ಕೂಡಿದ ಕೆಲಸ ಇರುವದು. ಅಧಿಕಾರ ಪ್ರಾಪ್ತಿಗಾಗಿ ಅಲೆದಾಟ ಸಂಭವ. ನಿರೀಕ್ಷಿತ ಆದಾಯಕ್ಕೆ ತೊಂದರೆ ಇಲ್ಲ. ಶುಭ ಸಂಖ್ಯೆ: 7

ಮೀನ: ದಿಟ್ಟತನ, ಮನೋಸ್ಥೈರ್ಯ, ನೇರ,ನಿಷ್ಟುರ ನಡೆಗಳಿಗೆ ಉತ್ತಮ ಫಲಪಾಪ್ತವಾಗುವುದು. ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುವವು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವದು. ಶುಭ ಸಂಖ್ಯೆ: 3

ಡಾ. ಬಸವರಾಜ್ ಗುರೂಜಿ

(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ: 9972848937)

ದಿನಭವಿಷ್ಯ: ದ್ವಾದಶ ರಾಶಿಗಳ ಇಂದಿನ (31-01-2021) ಫಲಾಫಲ ಕುರಿತು ಮಾಹಿತಿ ನೀಡಿದ್ದಾರೆ ಖ್ಯಾತ ಜ್ಯೋತಿಷಿ ಡಾ.ಬಸವರಾಜ ಗುರೂಜಿ

Published On - 6:30 am, Mon, 1 February 21

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ