AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನಭವಿಷ್ಯ | ಜನವರಿ 17, 2021

ಜನವರಿ 17, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನಭವಿಷ್ಯ.

ದಿನಭವಿಷ್ಯ | ಜನವರಿ 17, 2021
ದಿನ ಭವಿಷ್ಯ
ಪೃಥ್ವಿಶಂಕರ
|

Updated on: Jan 17, 2021 | 7:13 AM

Share

ತಾ.17-1-2021 ರ ಭಾನುವಾರದ ರಾಶಿಭವಿಷ್ಯ

ಮೇಷ: ಉದ್ಯೋಗ ಬದಲಿ ಮಾಡುವದು ಸದ್ಯ ಬೇಡ.ಹಣದ ಕೊರತೆ ಇರಲಾರದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವದು. ಪಿತ್ರಾರ್ಜಿತ ಆಸ್ತಿ ದೊರೆಯುವ ಯೋಗವಿದೆ. ತಂದೆತಾಯಿಯ ವಿಷಯದಲ್ಲಿ ಚಿಂತೆ ಇರುವದು. ಶುಭ ಸಂಖ್ಯೆ: 9

ವೃಷಭ: ಧನ ಅಪವ್ಯಯವಾಗುವ ಲಕ್ಷಣಗಳಿವೆ ಆದರೆ ಸಣ್ಣ ವ್ಯಾಪಾರಿಗಳಿಗೆ ಉತ್ತಮ ಲಾಭವಾಗುವದು. ಶ್ರಮಿಕವರ್ಗಕ್ಕೆ ಉನ್ನತಿ ಇರುವದು. ಕೌಟುಂಬಿಕ ಸಂಬಂಧಗಳು ಫಲಿಸುವವು. ಋಣಪರಿಹಾರವಾಗುವದು. ಶುಭ ಸಂಖ್ಯೆ: 5

ಮಿಥುನ: ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ. ಶುಭ ಸಂಖ್ಯೆ: 8

ಕರ್ಕ: ಮಹಿಳೆಯರ ಇಷ್ಟಾರ್ಥ ಸಿದ್ಧಿಸುವದು.ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ.ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು.ನ್ಯಾಯಾಲಯದಲ್ಲಿ ಜಯ ದೊರೆಯುವದು. ವಿದ್ಯೆಯಲ್ಲಿ ಸಾಧನೆ ಇರುವದು. ಶುಭ ಸಂಖ್ಯೆ: 6

ಸಿಂಹ: ಸ್ವೀಕೃತ ಕಾರ್ಯವು ಫಲಪ್ರದವಾಗಿ ಗೌರವ ಆದರಗಳು ಪ್ರಾಪ್ತವಾಗುವವು. ಈ ಸಮಯದಲ್ಲಿ ಉತ್ತಮ ಧನಾರ್ಜನೆ ಯಾಗುವುದು ವಿದೇಶಪ್ರಯಾಣ, ಪ್ರೇಮಸಂಭಾಷಣೆ, ದೇವ ಬ್ರ್ರಾಹ್ಮಣ,ಧರ್ಮಕಾರ್ಯಗಳು ನಡೆಯುವವು. ಸ್ಥಿರಾಸ್ತಿಗೆ ಸಂಬಂಧಿಸಿದ ವ್ಯಾಜ್ಯ ಪರಿಹಾರವಾಗುವವು. ಶುಭ ಸಂಖ್ಯೆ: 7

ಕನ್ಯಾ: ಎಲ್ಲವೂ ಇದ್ದಂತೆ ಇರಲಿ ಎಂಬ ಮನೋಭಾವನೆ ಇರುವದು. ಕೆಲಸದಲ್ಲಿ ಬದಲಾವಣೆ ತರಲು ಪ್ರಯತ್ನಿಸಿ. ವಿದೇಶ ಪ್ರಯಾಣದ ಯೋಗವಿದೆ.ಉದ್ಯೋಗದಲ್ಲಿ ಪ್ರಗತಿ ಮುಂದುವರೆಯುವದು. ಶುಭ ಸಂಖ್ಯೆ: 4

ತುಲಾ: ವ್ಯಾಪಾರಾದಿ ಉದ್ಯಮಗಳಲ್ಲಿ ಪ್ರಗತಿಯಿದ್ದು ಧನಲಾಭ, ಐಶ್ವರ್ಯವೃದ್ಧಿಯಿದೆ. ಆದರೆ ವ್ಯವಹಾರಿಕ ಕಿರಿಕಿರಿ ಇರುವದು. ಅನಿರೀಕ್ಷಿತ ಧನಲಾಭವೂ ಇದೆ. ಕೈಗೊಂಡ ಕಾರ್ಯಗಳಿಗೆ ವಿಘ್ನ ತೋರಿದರೂ ನೆರವೇರುತ್ತದೆ. ಶುಭ ಸಂಖ್ಯೆ: 2

ವೃಶ್ಚಿಕ: ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವದು. ವ್ಯಾಪಾರದಲ್ಲಿ ಅಭಿವೃದ್ಧಿಯಾಗುವದು. ವಿವಾಹ ಅಪೇಕ್ಷಿತರಿಗೆ ಕಂಕಣಬಲ ಕೂಡಿಬರುವದು. ಶುಭ ಸಂಖ್ಯೆ: 1

ಧನು: ಸಮಾಧಾನಕರ ಜೀವನವಿದೆ. ಅಧಿಕಾರಿಗಳ ಸಹಕಾರ ದೊರೆಯುವದು. ಮನೆ ಕಟ್ಟುವ ಆಸೆ ಕೈಗೂಡುವ ಸಮಯ. ಬಂಧುಮಿತ್ರರ ಹಾರೈಕೆ ತಮ್ಮೊಂದಿಗಿದೆ.ದೂರಪ್ರಯಾಣ ಯೋಗವಿದೆ. ಶುಭ ಸಂಖ್ಯೆ: 5

ಮಕರ: ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವದು. ಶುಭ ಸಂಖ್ಯೆ: 3

ಕುಂಭ: ದೈಹಿಕ ಸಮಸ್ಯೆಗಳು ಉಲ್ಬಣವಾಗಿ ಕೆಲಸಕ್ಕೆ ತೊಂದರೆ ಉಂಟುಮಾಡುವ ಸಾಧ್ಯತೆ ಇದೆ. ಮನೆಯಲ್ಲಿ ಕಾರ್ಯ ವಿರೋಧ ಇರುವದು. ಹಣಕಾಸಿನ ವಿಷಯದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಮಾತಿಗಿಂತ ಕೃತಿಗೆ ಮಹತ್ವ ಕೊಡಿ. ಶುಭ ಸಂಖ್ಯೆ: 6

ಮೀನ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವದು. ಶುಭ ಸಂಖ್ಯೆ: 9

ಡಾ.ಬಸವರಾಜ್ ಗುರೂಜಿ

(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ: 9972848937)

ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಮುಂಬೈನಲ್ಲಿ ಟೆಸ್ಲಾ ಕಾರು ಚಲಾಯಿಸಿದ ಡಿಸಿಎಂ ಏಕನಾಥ್ ಶಿಂಧೆ
ಮುಂಬೈನಲ್ಲಿ ಟೆಸ್ಲಾ ಕಾರು ಚಲಾಯಿಸಿದ ಡಿಸಿಎಂ ಏಕನಾಥ್ ಶಿಂಧೆ