AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನಭವಿಷ್ಯ | ಜನವರಿ 22, 2021

ಜನವರಿ 22, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನಭವಿಷ್ಯ.

ದಿನಭವಿಷ್ಯ | ಜನವರಿ 22, 2021
ದಿನ ಭವಿಷ್ಯ
ಆಯೇಷಾ ಬಾನು
|

Updated on: Jan 22, 2021 | 6:56 AM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಪುಷ್ಯಮಾಸ, ಹೇಮಂತ ಋತು, ಶುಕ್ಲಪಕ್ಷ, ನವಮಿ ತಿಥಿ, ಶುಕ್ರವಾರ, ಜನವರಿ 22, 2021. ಭರಣಿ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 11.2 ರಿಂದ ಬೆಳಿಗ್ಗೆ 12.26. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.49. ಸೂರ್ಯಾಸ್ತ: ಸಂಜೆ 6.5 .

ತಾ.22-01-2021 ರ ಶುಕ್ರವಾರದ ರಾಶಿಭವಿಷ್ಯ

ಮೇಷ: ಎಲ್ಲವನ್ನು ಹಗುರವಾಗಿ ಕಾಣುವುದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವುದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 1

ವೃಷಭ: ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ. ವ್ಯವಹಾರ ಚತುರತೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ: 6

ಮಿಥುನ: ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ನೆಮ್ಮದಿಯ ವಾತಾವರಣ ಇರುವುದು. ಶುಭ ಸಂಖ್ಯೆ: 9

ಕಟಕ: ತಪ್ಪುಗಳನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಶುಭ ಸಂಖ್ಯೆ: 5

ಸಿಂಹ: ಅನಿಸಿಕೆಗಿಂತ ವಾಸ್ತವ ಬೇರೆ ಇರುವದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷ್ಮತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವದು ಒಳ್ಳೆಯದು. ಧನಹಾನಿಯ ಸಂಭವವಿದೆ. ಶುಭ ಸಂಖ್ಯೆ: 4

ಕನ್ಯಾ: ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು. ಶುಭ ಸಂಖ್ಯೆ: 2

ತುಲಾ: ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ. ಶುಭ ಸಂಖ್ಯೆ: 7

ವೃಶ್ಚಿಕ: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಸ್ವಸಾಮರ್ಥ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 3

ಧನು: ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು. ಶುಭ ಸಂಖ್ಯೆ: 4

ಮಕರ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 7

ಕುಂಭ: ಕೈಹಾಕಿದ ಕೆಲಸಗಳು ನಿರಾತಂಕವಾಗಿ ಮುಂದುವರೆಯುವವು. ಉತ್ತಮವಾದ ಸಮಯ ಇರುವುದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು. ಶುಭ ಸಂಖ್ಯೆ: 9

ಮೀನ: ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವುದು. ಸತತ ಪ್ರಯತ್ನವಿಲ್ಲದೇ ಫಲ ದೊರೆಯಲಾರದು. ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬುದ್ದಿಯಿಂದ ತಾಳ್ಮೆಕಳೆದುಕೊಳ್ಳದೇ ಮುಂದುವರೆಯಿರಿ. ಶುಭ ಸಂಖ್ಯೆ: 8

ಡಾ. ಬಸವರಾಜ್ ಗುರೂಜಿ

(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ: 9972848937)

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್