AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನಭವಿಷ್ಯ | ಜನವರಿ 30, 2021

ಜನವರಿ 30, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನಭವಿಷ್ಯ.

ದಿನಭವಿಷ್ಯ | ಜನವರಿ 30, 2021
ದಿನ ಭವಿಷ್ಯ
ಆಯೇಷಾ ಬಾನು
|

Updated on: Jan 30, 2021 | 6:27 AM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಪುಷ್ಯಮಾಸ, ಹೇಮಂತ ಋತು, ಕೃಷ್ಣಪಕ್ಷ, ಬಿದಿಗೆ ತಿಥಿ, ಶನಿವಾರ, ಜನವರಿ 30, 2021. ಮಖೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 9.38 ರಿಂದ ಇಂದು ಬೆಳಿಗ್ಗೆ 11.3. ಬೆಂಗಳೂರು ಸೂರ್ಯೋದ: ಬೆಳಿಗ್ಗೆ 6.48. ಸೂರ್ಯಾಸ್ತ: ಸಂಜೆ 6.9.

ತಾ.30-01-2021 ರ ಶನಿವಾರದ ರಾಶಿಭವಿಷ್ಯ

ಮೇಷ: ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವುದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 6

ವೃಷಭ: ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ಆರ್ಥಿಕ ಸಂಕಷ್ಟಗಳು ಪರಿಹಾರವಾಗುವವು. ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವುದು. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 8

ಮಿಥುನ: ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅರ್ಧಕ್ಕೆನಿಂತ ಕೆಲಸಗಳು ಮುಂದುವರೆಯುವುದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಶುಭ ಸಂಖ್ಯೆ: 3

ಕಟಕ: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 1

ಸಿಂಹ: ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯುವುದು. ಮಾನಸಿಕ ಉತ್ಸಾಹ ಕಂಡುಬರುವುದು. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುವುದು. ಕಾರಣಾಂತರ ಅಧಿಕ ಖರ್ಚುಬರಬಹುದು. ಶುಭ ಸಂಖ್ಯೆ: 9

ಕನ್ಯಾ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ. ಶುಭ ಸಂಖ್ಯೆ: 4

ತುಲಾ: ಜವಾಬ್ದಾರಿಯ ನಿಮಿತ್ತ ದೂರ ಪ್ರಯಾಣದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಇರುವದು. ಅಹಂಭಾವದಿಂದ ಕಠಿಣ ಪರಿಸ್ಥಿತಿಯನ್ನು ಎದುರಿಸುವ ಪ್ರಸಂಗವಿದೆ ಎಚ್ಚರಿಕೆ ವಹಿಸಿರಿ. ನಮೃತೆಗೆ ಯೋಗ್ಯ ಸಮ್ಮಾನ ದೊರೆಯುವದು. ಶುಭ ಸಂಖ್ಯೆ: 2

ವೃಶ್ಚಿಕ: ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 7

ಧನು: ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು. ಶುಭ ಸಂಖ್ಯೆ: 5

ಮಕರ: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ. ಶುಭ ಸಂಖ್ಯೆ: 9

ಕುಂಭ: ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಾಜ್ಞರ ಮಾರ್ಗದರ್ಶನ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು. ಶುಭ ಸಂಖ್ಯೆ: 4

ಮೀನ: ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ. ಆಕರ್ಷಕ ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ. ಶುಭ ಸಂಖ್ಯೆ: 8

ಬಸವರಾಜ ಗುರೂಜಿ

(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ: 9972848937)

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ