AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನಭವಿಷ್ಯ | ಜನವರಿ 13, 2021

ಜನವರಿ 13, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನಭವಿಷ್ಯ.

ದಿನಭವಿಷ್ಯ | ಜನವರಿ 13, 2021
ದಿನ ಭವಿಷ್ಯ
ಆಯೇಷಾ ಬಾನು
ಆಯೇಷಾ ಬಾನು|

Updated on:Jan 13, 2021 | 6:46 AM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ದಕ್ಷಿಣಾಯನ, ಮಾರ್ಗಶಿರ ಮಾಸ, ಹೇಮಂತ ಋತು, ಕೃಷ್ಣಪಕ್ಷ, ಅಮಾವಾಸ್ಯೆ, ಬುಧವಾರ, ಜನವರಿ 13,2021. ಪೂರ್ವಾಷಾಢ ನಕ್ಷತ್ರ, ರಾಹುಕಾಲ: ಬೆಳಿಗ್ಗೆ 12.23ರಿಂದ ಮಧ್ಯಾಹ್ನ 1.46 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.49. ಸೂರ್ಯಾಸ್ತ: ಸಂಜೆ 5.59.

ತಾ.13-01-2021 ರ ಬುಧವಾರದ ಅಮಾವಾಸ್ಯೆಯ ರಾಶಿಭವಿಷ್ಯ

ಮೇಷ: ವ್ಯಾಪಾರದಲ್ಲಿ ಪ್ರಗತಿ ಇರುವುದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 5

ವೃಷಭ: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು. ಶುಭ ಸಂಖ್ಯೆ: 7

ಮಿಥುನ: ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವುದು. ಶುಭ ಸಂಖ್ಯೆ: 6

ಕಟಕ: ಧನ ಅಪವ್ಯಯವಾಗುವ ಲಕ್ಷಣಗಳಿವೆ ಆದರೆ ಸಣ್ಣ ವ್ಯಾಪಾರಿಗಳಿಗೆ ಉತ್ತಮ ಲಾಭವಾಗುವುದು. ಶ್ರಮಿಕವರ್ಗಕ್ಕೆ ಉನ್ನತಿ ಇರುವುದು. ಕೌಟುಂಬಿಕ ಸಂಬಂಧಗಳು ಫಲಿಸುವವು. ಋಣಪರಿಹಾರವಾಗುವುದು. ಶುಭ ಸಂಖ್ಯೆ: 9

ಸಿಂಹ: ತಪ್ಪುಗಳನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸುವಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಶುಭ ಸಂಖ್ಯೆ: 3

ಕನ್ಯಾ: ಸಹನೆಗೆ ತಕ್ಕ ಫಲ ದೊರೆಯುವುದು. ಬಹು ದಿನದ ಕನಸು ನನಸಾಗುವ ಕಾಲವಿದೆ. ಕೋರ್ಟ್​ನಲ್ಲಿದ್ದ ವ್ಯಾಜ್ಯಗಳಲ್ಲಿ ಜಯ ದೊರೆಯುವುದು. ಸಂತಾನಫಲದ ಅಪೇಕ್ಷೆ ಈಡೇರುವುದು. ಆರ್ಥಿಕ ವ್ಯವಹಾರಗಳ ಅದೃಷ್ಟ ಲಾಭತರುವವು. ಶುಭ ಸಂಖ್ಯೆ: 2

ತುಲಾ: ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆವಹಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 8

ವೃಶ್ಚಿಕ: ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ಮನೋಚಿಂತಿತ ಕಾರ್ಯ ಕೈಗೂಡುವುದು. ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಪರರ ಸಹಾಯದ ಅನಿವಾರ್ಯತೆ ಇರಲಾರದು. ಆರೋಗ್ಯದ ಕಾಳಜಿ ಇರಲಿ. ಶುಭ ಸಂಖ್ಯೆ: 2

ಧನು: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭ ಸಂಖ್ಯೆ: 4

ಮಕರ: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 6

ಕುಂಭ: ಅನಿರೀಕ್ಷಿತ ಸಂಚಾರ ಒದಗಿಬಂದರೂ ತೃಪ್ತಿದಾಯಕವೆನ್ನಬಹುದು. ವ್ಯಾಪಾರಾದಿ ಉದ್ಯಮಗಳಲ್ಲಿ ಅಪೇಕಿಸಿದಂತೆ ಪ್ರಗತಿ. ಲಾಭ ತೋರಿಬರುತ್ತದೆ. ಹೊಸದಾದ ಆಲೋಚನಾ ಸಿದ್ಧಿ. ವಿಪರೀತ ಖರ್ಚು. ಶುಭ ಸಂಖ್ಯೆ: 7

ಮೀನ: ಧನಾರ್ಜನೆಯ ಮಾರ್ಗವು ಶ್ರೇಷ್ಠ ಮಟ್ಟದಲ್ಲಿದ್ದು, ಐಶ್ವರ್ಯ ಸಮೃದ್ಧಿಯಾಗುತ್ತದೆ. ಸಂಸಾರಿಕ ದೃಷ್ಟಿಯಲ್ಲೂ ಸುಖ, ಸಂಭ್ರಮಗಳಿದ್ದು ತೃಪ್ತಿ ಲಭಿಸಿದರೂ ಶತ್ರುಜನರ ಪೀಡೆ ಅಧಿಕವಾಗುತ್ತದೆ. ಅನಿವಾರ್ಯ ಪ್ರವಾಸ ಸಾಧ್ಯತೆ ಇದೆ. ಶುಭ ಸಂಖ್ಯೆ: 5

ಬಸವರಾಜ ಗುರೂಜಿ

(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ: 9972848937)

Published On - 6:43 am, Wed, 13 January 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು