AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನಭವಿಷ್ಯ | ಜನವರಿ 09, 2021

ಜನವರಿ 9, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನಭವಿಷ್ಯ.

ದಿನಭವಿಷ್ಯ | ಜನವರಿ 09, 2021
ದಿನ ಭವಿಷ್ಯ
ಆಯೇಷಾ ಬಾನು
| Updated By: ಪೃಥ್ವಿಶಂಕರ|

Updated on: Jan 09, 2021 | 6:30 AM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ದಕ್ಷಿಣಾಯನ, ಮಾರ್ಗಶಿರ ಮಾಸ, ಹೇಮಂತ ಋತು, ಕೃಷ್ಣಪಕ್ಷ, ಏಕಾದಶಿ, ಶನಿವಾರ, ಜನವರಿ 9,2021. ವಿಶಾಖ ನಕ್ಷತ್ರ, ರಾಹುಕಾಲ: ಬೆಳಿಗ್ಗೆ 9.35 ರಿಂದ 10.58ರ ವೆರೆಗೆ. ಬೆಂಗಳೂರು ಸೂರ್ಯೋದಯ :ಬೆಳಿಗ್ಗೆ 6.48. ಸೂರ್ಯಾಸ್ತ: 5.57.

ತಾ.09-01-2021 ರ ಶನಿವಾರದ ರಾಶಿಭವಿಷ್ಯ

ಮೇಷ: ಶಾಂತಚಿತ್ತರಾಗಿ ಕೆಲಸ ನಿರ್ವಹಿಸಿರಿ. ಹೊಸ ವ್ಯಾಪಾರ, ಉದ್ಯೋಗದ ಅವಕಾಶಗಳು ಕೂಡಿ ಬರುವವು. ಹಳೆಯ ಸಮಸ್ಯೆಗಳು ಪರಿಹಾರವಾಗುವವು. ಶುಭಕಾರ್ಯದಲ್ಲಿ ಪಾಲ್ಗೊಳ್ಳುವಿರಿ. ಶುಭ ಸಂಖ್ಯೆ: 8

ವೃಷಭ: ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 4

ಮಿಥುನ: ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಅನವಶ್ಯಕ ಭಯ ಅಗತ್ಯವಿಲ್ಲ, ನಿಮ್ಮ ಸೇವೆ ಫಲ ನೀಡುವದು. ಸಂಕಷ್ಟದ ಮಧ್ಯೆಯೂ ಸಂತೋಷದ ದಿನಗಳಿವೆ. ಆಗಂತುಕರೊಂದಿಗೆ ಜಾಗೃತೆ ಅಗತ್ಯ. ಶುಭ ಸಂಖ್ಯೆ: 3

ಕಟಕ: ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅರ್ಧಕ್ಕೆ ನಿಂತ ಕೆಲಸಗಳು ಮುಂದುವರೆಯುವದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಶುಭ ಸಂಖ್ಯೆ: 1

ಸಿಂಹ: ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಸಹೋದರ ಸಂಬಂಧದಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ. ಪರಸ್ಪರ ದೋಷಾರೋಪ ಬೇಡ. ಮಿತ್ರರ ಸಹಾಯ ದೊರೆಯುವದು. ಶುಭ ಸಂಖ್ಯೆ: 9

ಕನ್ಯಾ: ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವದು. ಸಮತೋಲಿತ ಜೀವನವಿರುವದು. ಶುಭ ಸಂಖ್ಯೆ: 6

ತುಲಾ: ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವದು. ಉನ್ನತ ವ್ಯಾಸಂಗದ ಯೋಗವಿದೆ. ವ್ಯವಹಾರಿಕ ತಿರುಗಾಟದ ಸಾಧ್ಯತೆ ಇದೆ. ಶತ್ರುಬಾಧೆ ಕಂಡುಬರುವದು. ಆರೋಗ್ಯದ ಮೇಲೆ ನಿಗಾ ಇರಲಿ. ಶುಭ ಸಂಖ್ಯೆ: 7

ವೃಶ್ಚಿಕ: ಅಂತಃಶತ್ರುಗಳ ಕಾಟ ಹೆಚ್ಚಾಗುವ ಲಕ್ಷಣವಿದೆ. ಹಳೆಯ ಸಮಸ್ಯೆಗಳು ಮತ್ತೆ ಎದುರಾಗುವ ಸಂಭವವಿದೆ. ಚಂಚಲತೆ ಬೇಡ, ಹಿಡಿದ ಕಾರ್ಯವನ್ನು ಪೂರ್ಣಗೊಳಿಸಿ. ಆರ್ಥಿಕ ಲಾಭವಿದೆ ಆದರೆ ವಿದ್ಯೆಯಲ್ಲಿ ಹಿನ್ನಡೆ ಕಂಡುಬರುವದು. ಶುಭ ಸಂಖ್ಯೆ: 5

ಧನು: ಸಂಗಡಿಗರು ಸಹಕಾರ ತೋರುವದರಿಂದ ನಿರಾತಂಕ ಜೀವನ ಇರುವದು. ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವದು. ಉನ್ನತ ಶಿಕ್ಷಣದ ಕನಸು ಈಡೇರುವದು. ಶುಭ ಸಂಖ್ಯೆ: 8

ಮಕರ: ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ. ಶುಭ ಸಂಖ್ಯೆ: 2

ಕುಂಭ: ತಾಪತ್ರಯಗಳೆಲ್ಲ ದೂರವಾಗಿದ್ದು ಆರ್ಥಿಕ ಸ್ಥಿತಿ ಸುಧಾರಣೆಯಾಗುತ್ತದೆ. ವ್ಯಾಪಾರಾದಿ ಉದ್ಯಮಗಳು ಇಷ್ಟದಂತೆ ನಡೆಯುತ್ತದೆ. ಕೆಲವೊಮ್ಮೆ ಸಣ್ಣ ವಿಷಯಗಳಿಗೂ ಭಯ ತೋರಿದರೂ ಹಾನಿಯಿಲ್ಲ. ಶುಭ ಸಂಖ್ಯೆ: 6

ಮೀನ: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ. ಶುಭ ಸಂಖ್ಯೆ: 3

ಬಸವರಾಜ ಗುರೂಜಿ

(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ: 9972848937)

ಸಾಂಪ್ರದಾಯಿಕ ಡ್ರೆಸ್ ತೊಟ್ಟು ಓಣಂ ಹಬ್ಬದೂಟ ಮಾಡಿದ ಮುದ್ದು ನಾಯಿ
ಸಾಂಪ್ರದಾಯಿಕ ಡ್ರೆಸ್ ತೊಟ್ಟು ಓಣಂ ಹಬ್ಬದೂಟ ಮಾಡಿದ ಮುದ್ದು ನಾಯಿ
ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ
ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ
ಇಂದೋರ್​​ನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಚ್ಚಿ 2 ಶಿಶುಗಳು ಸಾವು
ಇಂದೋರ್​​ನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಚ್ಚಿ 2 ಶಿಶುಗಳು ಸಾವು
ದರ್ಶನ್ ಆ ರೀತಿ ವ್ಯಕ್ತಿ ಅಲ್ಲ, ಯಾಕೆ ಹೀಗಾಯ್ತೋ ಗೊತ್ತಿಲ್ಲ: ಎಂಡಿ ಶ್ರೀಧರ್
ದರ್ಶನ್ ಆ ರೀತಿ ವ್ಯಕ್ತಿ ಅಲ್ಲ, ಯಾಕೆ ಹೀಗಾಯ್ತೋ ಗೊತ್ತಿಲ್ಲ: ಎಂಡಿ ಶ್ರೀಧರ್
ಗಣೇಶ ವಿಸರ್ಜನೆ ವೇಳೆ DJ ಬಂದ್ ಮಾಡಿಸಿದ ಪೊಲೀಸರು, ಗ್ರಾಮಸ್ಥರು ಮಾಡಿದ್ದೇನು
ಗಣೇಶ ವಿಸರ್ಜನೆ ವೇಳೆ DJ ಬಂದ್ ಮಾಡಿಸಿದ ಪೊಲೀಸರು, ಗ್ರಾಮಸ್ಥರು ಮಾಡಿದ್ದೇನು
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ
ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ