AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿಯ ಐಪಿಎಲ್​ ಸೀಸನ್​ನಲ್ಲಿ ಡೇಲ್ ಸ್ಟೀನ್ ಆರ್​ಸಿಬಿ ಪರ ಆಡುವುದಿಲ್ಲ!

ತಮ್ಮ ಕರೀಯರ್​ನ ಉತ್ತುಂಗದಲ್ಲಿ ಬ್ಯಾಟ್ಸ್​ಮನ್​ಗಳ ಎದೆಯಲ್ಲಿ ಭೀತಿ ಹುಟ್ಟಿಸುತ್ತಿದ್ದ ಡೇಲ್ ಸ್ಟೀನ್ ಸ್ವಲ್ಪ ಸಮಯದವರೆಗೆ ಕ್ರಿಕೆಟ್​ನಿಂದ ಬ್ರೇಕ್ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಈ ವರ್ಷದ ಐಪಿಎಲ್ ಸೀಸನ್​ನಲ್ಲಿ ಅವರು ಅಡುವುದಿಲ್ಲವಂತೆ.

ಈ ಬಾರಿಯ ಐಪಿಎಲ್​ ಸೀಸನ್​ನಲ್ಲಿ ಡೇಲ್ ಸ್ಟೀನ್ ಆರ್​ಸಿಬಿ ಪರ ಆಡುವುದಿಲ್ಲ!
ಡೇಲ್ ಸ್ಟೀನ್
ಅರುಣ್​ ಕುಮಾರ್​ ಬೆಳ್ಳಿ
|

Updated on:Jan 02, 2021 | 7:08 PM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಡುವ ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಡೇಲ್ ಸ್ಟೀನ್ ಅಭಿಮಾನಿಗಳಿಗೆ ಒಂದು ನಿರಾಶಾದಾಯಕ ಸುದ್ದಿ. ಭಯಂಕರ ವೇಗ ಮತ್ತು ನಿಖರತೆಯಿದ ಬೌಲರ್​ಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸ್ಟೀನ್ ಈ ವರ್ಷ ನಡೆಯುವ ಇಂಡಿಯನ್ ಪ್ರಿಮೀಯರ್ ಲೀಗ್​ನಲ್ಲಿ ಆಡುವುದಿಲ್ಲ.

ಸರಣಿ ಟ್ವೀಟ್​ಗಳ ಮೂಲಕ ತಮ್ಮ ನಿರ್ಧಾರವನ್ನು ತಿಳಿಸಿರುವ 37ರ ಪ್ರಾಯದ ಸ್ಟೀನ್ ಸ್ವಲ್ಪ ಸಮಯದವರೆಗೆ ಕ್ರೀಡೆಯಿಂದ ದೂರವಿರಲು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ.

‘ಚಿಕ್ಕ ಸಂದೇಶದ ಮೂಲಕ ಒಂದು ವಿಷಯವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಇಷ್ಟಪಡುತ್ತೇನೆ. ಈ ಬಾರಿಯ ಐಪಿಎಲ್ ಸೀಸನ್​ನಲ್ಲಿ ನಾನು ಆರ್​ಸಿಬಿ ಪರ ಆಡುತ್ತಿಲ್ಲ. ಹಾಗಂತ ನಾನು ಬೇರೆ ಟೀಮಿಗೆ ಆಡಬೇಕೆನ್ನುವ ನಿರ್ಧಾರ ಮಾಡಿಲ್ಲ. ಸ್ವಲ್ಪ ಸಮಯದವರೆಗೆ ಕ್ರಿಕೆಟ್​ನಿಂದ ದೂರವಿರಲು ನಿಶ್ಚಯಿಸಿಕೊಂಡಿದ್ದೇನೆ,’ ಅಂತ ಸ್ಟೀನ್ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್​ನಲ್ಲಿ ಸ್ಟಿನ್, ‘ಖಂಡಿತವಾಗಿಯೂ ಬೇರೆ ಲೀಗ್​ಗಳಲ್ಲಿ ಆಡುವ ಇಚ್ಛೆ ನನಗಿಲ್ಲ. ಕ್ರೀಡೆಯಿಂದ ಒಂದು ಬ್ರೇಕ್ ತೆಗೆದುಕೊಳ್ಳುತ್ತಿದ್ದೇನೆ, ಅಷ್ಟೆ. ನನ್ನನ್ನು ಅರ್ಥಮಾಡಿಕೊಂಡಿರುವುದಕ್ಕೆ ಆರ್​ಸಿಬಿಗೆ ಧನ್ಯವಾದಗಳು,’ ಎಂದು ಬರೆದುಕೊಂಡಿದ್ದಾರೆ.

ಊಟ ಮಾಡುವಾಗ ಸೆಲ್ಫಿ ತೆಗೆದುಕೊಂಡಿರುವ ಸ್ಟೀನ್

ಸೀಮಿತ ಓವರ್​ಗಳ ಕ್ರಿಕೆಟ್ ಮೇಲೆ ಹೆಚ್ಚು ಗಮನ ಕೇಂದ್ರೀಕರಿಸಲು ಸ್ಟೀನ್ 2019 ರಲ್ಲಿ ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳಿದರು. ಕೊವಿಡ್-19 ಪಿಡುಗಿನಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್​ಗೆ ಸ್ಥಳಾಂತರಗೊಂಡ ಐಪಿಎಲ್ 2020 ಸೀಸನ್​ನಲ್ಲಿ ಸ್ಟೀನ್ ಕಳಾಹೀನ ಬೌಲಿಂಗ್ ಪ್ರದರ್ಶನ ನೀಡಿದರು. ಆಡಿದ 3 ಪಂದ್ಯಗಳಲ್ಲಿ ಅವರು ಕೇವಲ ಒಂದು ವಿಕೆಟ್ ಮಾತ್ರ ಪಡೆದರು. ಹಾಗಂತ ಎಲ್ಲಾ ಫಾರ್ಮಾಟ್​ಗಳಿಂದ ಕ್ರಿಕೆಟ್​ನಿಂದ ಸನ್ಯಾಸ ತೆಗೆದುಕೊಳ್ಳುವ ನಿರ್ಧಾರಕ್ಕೇನೂ ಸ್ಟೀನ್ ಬಂದಿಲ್ಲ.

‘ಕ್ರಮೇಣವಾಗಿ ಮತ್ತು ಹಂತಹಂತವಾಗಿ ನಾನು ಬೇರೆ ಬೇರೆ ಲೀಗ್​ಗಳಲ್ಲಿ ಆಡುತ್ತೇನೆ. ನಾನು ಕ್ರಿಕೆಟ್​ನಿಂದ ಸನ್ಯಾಸ ತೆಗೆದುಕೊಳ್ಳುತ್ತಿದ್ದೇನೆ ಅಂತ ಯಾರೂ ಭಾವಿಸಬಾರದು’ ಎಂದು ಇನ್ನೊಂದು ಟ್ವೀಟ್​ನಲ್ಲಿ ಸ್ಟೀನ್ ಹೇಳಿದ್ದಾರೆ.

ವೈಫಲ್ಯದ ಹೊಣೆಗಾರಿಕೆ ಹೊತ್ತು ಕೊಹ್ಲಿ ಆರ್​ಸಿಬಿಯ ನಾಯಕತ್ವ ತ್ಯಜಿಸಬೇಕು: ಗಂಭೀರ್ | Time for Kohli to step down from RCB captaincy: Gambhir

Published On - 7:04 pm, Sat, 2 January 21

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು