AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿಯ ಐಪಿಎಲ್​ ಸೀಸನ್​ನಲ್ಲಿ ಡೇಲ್ ಸ್ಟೀನ್ ಆರ್​ಸಿಬಿ ಪರ ಆಡುವುದಿಲ್ಲ!

ತಮ್ಮ ಕರೀಯರ್​ನ ಉತ್ತುಂಗದಲ್ಲಿ ಬ್ಯಾಟ್ಸ್​ಮನ್​ಗಳ ಎದೆಯಲ್ಲಿ ಭೀತಿ ಹುಟ್ಟಿಸುತ್ತಿದ್ದ ಡೇಲ್ ಸ್ಟೀನ್ ಸ್ವಲ್ಪ ಸಮಯದವರೆಗೆ ಕ್ರಿಕೆಟ್​ನಿಂದ ಬ್ರೇಕ್ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಈ ವರ್ಷದ ಐಪಿಎಲ್ ಸೀಸನ್​ನಲ್ಲಿ ಅವರು ಅಡುವುದಿಲ್ಲವಂತೆ.

ಈ ಬಾರಿಯ ಐಪಿಎಲ್​ ಸೀಸನ್​ನಲ್ಲಿ ಡೇಲ್ ಸ್ಟೀನ್ ಆರ್​ಸಿಬಿ ಪರ ಆಡುವುದಿಲ್ಲ!
ಡೇಲ್ ಸ್ಟೀನ್
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Jan 02, 2021 | 7:08 PM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಡುವ ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಡೇಲ್ ಸ್ಟೀನ್ ಅಭಿಮಾನಿಗಳಿಗೆ ಒಂದು ನಿರಾಶಾದಾಯಕ ಸುದ್ದಿ. ಭಯಂಕರ ವೇಗ ಮತ್ತು ನಿಖರತೆಯಿದ ಬೌಲರ್​ಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸ್ಟೀನ್ ಈ ವರ್ಷ ನಡೆಯುವ ಇಂಡಿಯನ್ ಪ್ರಿಮೀಯರ್ ಲೀಗ್​ನಲ್ಲಿ ಆಡುವುದಿಲ್ಲ.

ಸರಣಿ ಟ್ವೀಟ್​ಗಳ ಮೂಲಕ ತಮ್ಮ ನಿರ್ಧಾರವನ್ನು ತಿಳಿಸಿರುವ 37ರ ಪ್ರಾಯದ ಸ್ಟೀನ್ ಸ್ವಲ್ಪ ಸಮಯದವರೆಗೆ ಕ್ರೀಡೆಯಿಂದ ದೂರವಿರಲು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ.

‘ಚಿಕ್ಕ ಸಂದೇಶದ ಮೂಲಕ ಒಂದು ವಿಷಯವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಇಷ್ಟಪಡುತ್ತೇನೆ. ಈ ಬಾರಿಯ ಐಪಿಎಲ್ ಸೀಸನ್​ನಲ್ಲಿ ನಾನು ಆರ್​ಸಿಬಿ ಪರ ಆಡುತ್ತಿಲ್ಲ. ಹಾಗಂತ ನಾನು ಬೇರೆ ಟೀಮಿಗೆ ಆಡಬೇಕೆನ್ನುವ ನಿರ್ಧಾರ ಮಾಡಿಲ್ಲ. ಸ್ವಲ್ಪ ಸಮಯದವರೆಗೆ ಕ್ರಿಕೆಟ್​ನಿಂದ ದೂರವಿರಲು ನಿಶ್ಚಯಿಸಿಕೊಂಡಿದ್ದೇನೆ,’ ಅಂತ ಸ್ಟೀನ್ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್​ನಲ್ಲಿ ಸ್ಟಿನ್, ‘ಖಂಡಿತವಾಗಿಯೂ ಬೇರೆ ಲೀಗ್​ಗಳಲ್ಲಿ ಆಡುವ ಇಚ್ಛೆ ನನಗಿಲ್ಲ. ಕ್ರೀಡೆಯಿಂದ ಒಂದು ಬ್ರೇಕ್ ತೆಗೆದುಕೊಳ್ಳುತ್ತಿದ್ದೇನೆ, ಅಷ್ಟೆ. ನನ್ನನ್ನು ಅರ್ಥಮಾಡಿಕೊಂಡಿರುವುದಕ್ಕೆ ಆರ್​ಸಿಬಿಗೆ ಧನ್ಯವಾದಗಳು,’ ಎಂದು ಬರೆದುಕೊಂಡಿದ್ದಾರೆ.

ಊಟ ಮಾಡುವಾಗ ಸೆಲ್ಫಿ ತೆಗೆದುಕೊಂಡಿರುವ ಸ್ಟೀನ್

ಸೀಮಿತ ಓವರ್​ಗಳ ಕ್ರಿಕೆಟ್ ಮೇಲೆ ಹೆಚ್ಚು ಗಮನ ಕೇಂದ್ರೀಕರಿಸಲು ಸ್ಟೀನ್ 2019 ರಲ್ಲಿ ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳಿದರು. ಕೊವಿಡ್-19 ಪಿಡುಗಿನಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್​ಗೆ ಸ್ಥಳಾಂತರಗೊಂಡ ಐಪಿಎಲ್ 2020 ಸೀಸನ್​ನಲ್ಲಿ ಸ್ಟೀನ್ ಕಳಾಹೀನ ಬೌಲಿಂಗ್ ಪ್ರದರ್ಶನ ನೀಡಿದರು. ಆಡಿದ 3 ಪಂದ್ಯಗಳಲ್ಲಿ ಅವರು ಕೇವಲ ಒಂದು ವಿಕೆಟ್ ಮಾತ್ರ ಪಡೆದರು. ಹಾಗಂತ ಎಲ್ಲಾ ಫಾರ್ಮಾಟ್​ಗಳಿಂದ ಕ್ರಿಕೆಟ್​ನಿಂದ ಸನ್ಯಾಸ ತೆಗೆದುಕೊಳ್ಳುವ ನಿರ್ಧಾರಕ್ಕೇನೂ ಸ್ಟೀನ್ ಬಂದಿಲ್ಲ.

‘ಕ್ರಮೇಣವಾಗಿ ಮತ್ತು ಹಂತಹಂತವಾಗಿ ನಾನು ಬೇರೆ ಬೇರೆ ಲೀಗ್​ಗಳಲ್ಲಿ ಆಡುತ್ತೇನೆ. ನಾನು ಕ್ರಿಕೆಟ್​ನಿಂದ ಸನ್ಯಾಸ ತೆಗೆದುಕೊಳ್ಳುತ್ತಿದ್ದೇನೆ ಅಂತ ಯಾರೂ ಭಾವಿಸಬಾರದು’ ಎಂದು ಇನ್ನೊಂದು ಟ್ವೀಟ್​ನಲ್ಲಿ ಸ್ಟೀನ್ ಹೇಳಿದ್ದಾರೆ.

ವೈಫಲ್ಯದ ಹೊಣೆಗಾರಿಕೆ ಹೊತ್ತು ಕೊಹ್ಲಿ ಆರ್​ಸಿಬಿಯ ನಾಯಕತ್ವ ತ್ಯಜಿಸಬೇಕು: ಗಂಭೀರ್ | Time for Kohli to step down from RCB captaincy: Gambhir

Published On - 7:04 pm, Sat, 2 January 21

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ