ಈ ಬಾರಿಯ ಐಪಿಎಲ್​ ಸೀಸನ್​ನಲ್ಲಿ ಡೇಲ್ ಸ್ಟೀನ್ ಆರ್​ಸಿಬಿ ಪರ ಆಡುವುದಿಲ್ಲ!

ತಮ್ಮ ಕರೀಯರ್​ನ ಉತ್ತುಂಗದಲ್ಲಿ ಬ್ಯಾಟ್ಸ್​ಮನ್​ಗಳ ಎದೆಯಲ್ಲಿ ಭೀತಿ ಹುಟ್ಟಿಸುತ್ತಿದ್ದ ಡೇಲ್ ಸ್ಟೀನ್ ಸ್ವಲ್ಪ ಸಮಯದವರೆಗೆ ಕ್ರಿಕೆಟ್​ನಿಂದ ಬ್ರೇಕ್ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಈ ವರ್ಷದ ಐಪಿಎಲ್ ಸೀಸನ್​ನಲ್ಲಿ ಅವರು ಅಡುವುದಿಲ್ಲವಂತೆ.

ಈ ಬಾರಿಯ ಐಪಿಎಲ್​ ಸೀಸನ್​ನಲ್ಲಿ ಡೇಲ್ ಸ್ಟೀನ್ ಆರ್​ಸಿಬಿ ಪರ ಆಡುವುದಿಲ್ಲ!
ಡೇಲ್ ಸ್ಟೀನ್
ಅರುಣ್​ ಕುಮಾರ್​ ಬೆಳ್ಳಿ

Updated on: Jan 02, 2021 | 7:08 PM

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಡುವ ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಡೇಲ್ ಸ್ಟೀನ್ ಅಭಿಮಾನಿಗಳಿಗೆ ಒಂದು ನಿರಾಶಾದಾಯಕ ಸುದ್ದಿ. ಭಯಂಕರ ವೇಗ ಮತ್ತು ನಿಖರತೆಯಿದ ಬೌಲರ್​ಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸ್ಟೀನ್ ಈ ವರ್ಷ ನಡೆಯುವ ಇಂಡಿಯನ್ ಪ್ರಿಮೀಯರ್ ಲೀಗ್​ನಲ್ಲಿ ಆಡುವುದಿಲ್ಲ.

ಸರಣಿ ಟ್ವೀಟ್​ಗಳ ಮೂಲಕ ತಮ್ಮ ನಿರ್ಧಾರವನ್ನು ತಿಳಿಸಿರುವ 37ರ ಪ್ರಾಯದ ಸ್ಟೀನ್ ಸ್ವಲ್ಪ ಸಮಯದವರೆಗೆ ಕ್ರೀಡೆಯಿಂದ ದೂರವಿರಲು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ.

‘ಚಿಕ್ಕ ಸಂದೇಶದ ಮೂಲಕ ಒಂದು ವಿಷಯವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಇಷ್ಟಪಡುತ್ತೇನೆ. ಈ ಬಾರಿಯ ಐಪಿಎಲ್ ಸೀಸನ್​ನಲ್ಲಿ ನಾನು ಆರ್​ಸಿಬಿ ಪರ ಆಡುತ್ತಿಲ್ಲ. ಹಾಗಂತ ನಾನು ಬೇರೆ ಟೀಮಿಗೆ ಆಡಬೇಕೆನ್ನುವ ನಿರ್ಧಾರ ಮಾಡಿಲ್ಲ. ಸ್ವಲ್ಪ ಸಮಯದವರೆಗೆ ಕ್ರಿಕೆಟ್​ನಿಂದ ದೂರವಿರಲು ನಿಶ್ಚಯಿಸಿಕೊಂಡಿದ್ದೇನೆ,’ ಅಂತ ಸ್ಟೀನ್ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್​ನಲ್ಲಿ ಸ್ಟಿನ್, ‘ಖಂಡಿತವಾಗಿಯೂ ಬೇರೆ ಲೀಗ್​ಗಳಲ್ಲಿ ಆಡುವ ಇಚ್ಛೆ ನನಗಿಲ್ಲ. ಕ್ರೀಡೆಯಿಂದ ಒಂದು ಬ್ರೇಕ್ ತೆಗೆದುಕೊಳ್ಳುತ್ತಿದ್ದೇನೆ, ಅಷ್ಟೆ. ನನ್ನನ್ನು ಅರ್ಥಮಾಡಿಕೊಂಡಿರುವುದಕ್ಕೆ ಆರ್​ಸಿಬಿಗೆ ಧನ್ಯವಾದಗಳು,’ ಎಂದು ಬರೆದುಕೊಂಡಿದ್ದಾರೆ.

ಊಟ ಮಾಡುವಾಗ ಸೆಲ್ಫಿ ತೆಗೆದುಕೊಂಡಿರುವ ಸ್ಟೀನ್

ಸೀಮಿತ ಓವರ್​ಗಳ ಕ್ರಿಕೆಟ್ ಮೇಲೆ ಹೆಚ್ಚು ಗಮನ ಕೇಂದ್ರೀಕರಿಸಲು ಸ್ಟೀನ್ 2019 ರಲ್ಲಿ ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳಿದರು. ಕೊವಿಡ್-19 ಪಿಡುಗಿನಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್​ಗೆ ಸ್ಥಳಾಂತರಗೊಂಡ ಐಪಿಎಲ್ 2020 ಸೀಸನ್​ನಲ್ಲಿ ಸ್ಟೀನ್ ಕಳಾಹೀನ ಬೌಲಿಂಗ್ ಪ್ರದರ್ಶನ ನೀಡಿದರು. ಆಡಿದ 3 ಪಂದ್ಯಗಳಲ್ಲಿ ಅವರು ಕೇವಲ ಒಂದು ವಿಕೆಟ್ ಮಾತ್ರ ಪಡೆದರು. ಹಾಗಂತ ಎಲ್ಲಾ ಫಾರ್ಮಾಟ್​ಗಳಿಂದ ಕ್ರಿಕೆಟ್​ನಿಂದ ಸನ್ಯಾಸ ತೆಗೆದುಕೊಳ್ಳುವ ನಿರ್ಧಾರಕ್ಕೇನೂ ಸ್ಟೀನ್ ಬಂದಿಲ್ಲ.

‘ಕ್ರಮೇಣವಾಗಿ ಮತ್ತು ಹಂತಹಂತವಾಗಿ ನಾನು ಬೇರೆ ಬೇರೆ ಲೀಗ್​ಗಳಲ್ಲಿ ಆಡುತ್ತೇನೆ. ನಾನು ಕ್ರಿಕೆಟ್​ನಿಂದ ಸನ್ಯಾಸ ತೆಗೆದುಕೊಳ್ಳುತ್ತಿದ್ದೇನೆ ಅಂತ ಯಾರೂ ಭಾವಿಸಬಾರದು’ ಎಂದು ಇನ್ನೊಂದು ಟ್ವೀಟ್​ನಲ್ಲಿ ಸ್ಟೀನ್ ಹೇಳಿದ್ದಾರೆ.

ವೈಫಲ್ಯದ ಹೊಣೆಗಾರಿಕೆ ಹೊತ್ತು ಕೊಹ್ಲಿ ಆರ್​ಸಿಬಿಯ ನಾಯಕತ್ವ ತ್ಯಜಿಸಬೇಕು: ಗಂಭೀರ್ | Time for Kohli to step down from RCB captaincy: Gambhir

Published On - 7:04 pm, Sat, 2 January 21

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us