AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಂಪ್ ವಕೀಲನಿಗೆ ಪಜೀತಿ ತಂದಿಟ್ಟ ಹೇರ್ ಡೈ; ಕೆನ್ನೆಮೇಲೆ ಇಳಿದು ಬಂತು ಡೈ-ಮಿಶ್ರಿತ ಬೆವರು | Dark streaks on Trump Lawyer’s Face during a press conference

ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಖಾಸಗಿ ವಕೀಲ ರೂಡಿ ಗಿಯುಲಿಯಾನಿ ಇಂದು ನಡೆದ ಸುದ್ದಿಗೋಷ್ಠಿಯೊಂದರಲ್ಲಿ ತೀವ್ರ ಮುಜುಗರಕ್ಕೆ ಒಳಗಾಗುವ ಪ್ರಸಂಗ ಎದುರಿಸಬೇಕಾಯಿತು. ಅದಕ್ಕೆ ಕಾರಣ ಅವರ ತಲೆಯ ಬೆವರಿನೊಂದಿಗೆ ಬೆರೆತ ಹೇರ್ ಡೈ ಮುಖದ ಮೇಲೆ ಇಳಿದು ಸೃಷ್ಟಿಸಿದ ಅವಾಂತರ! ಇಂದು ಡೊನಾಲ್ಡ್ ಟ್ರಂಪ್ ಅವರ ಕಾನೂನು ಸಲಹೆಗಾರರ ತಂಡ ಸುದ್ದಿಗೋಷ್ಠಿಯೊದನ್ನು ಕರೆದಿತ್ತು. ಸದರಿ ಗೋಷ್ಠಿಯಲ್ಲಿ ಮಾತನಾಡಿದ ವಕೀಲ ರೂಡಿ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ನಡೆದ ಮತದಾನ ಮತ್ತು ಎಣಿಕೆಯಲ್ಲಿ ವಂಚನೆ […]

ಟ್ರಂಪ್ ವಕೀಲನಿಗೆ ಪಜೀತಿ ತಂದಿಟ್ಟ ಹೇರ್ ಡೈ; ಕೆನ್ನೆಮೇಲೆ ಇಳಿದು ಬಂತು ಡೈ-ಮಿಶ್ರಿತ ಬೆವರು | Dark streaks on Trump Lawyer’s Face during a press conference
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 20, 2020 | 7:20 PM

Share

ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಖಾಸಗಿ ವಕೀಲ ರೂಡಿ ಗಿಯುಲಿಯಾನಿ ಇಂದು ನಡೆದ ಸುದ್ದಿಗೋಷ್ಠಿಯೊಂದರಲ್ಲಿ ತೀವ್ರ ಮುಜುಗರಕ್ಕೆ ಒಳಗಾಗುವ ಪ್ರಸಂಗ ಎದುರಿಸಬೇಕಾಯಿತು. ಅದಕ್ಕೆ ಕಾರಣ ಅವರ ತಲೆಯ ಬೆವರಿನೊಂದಿಗೆ ಬೆರೆತ ಹೇರ್ ಡೈ ಮುಖದ ಮೇಲೆ ಇಳಿದು ಸೃಷ್ಟಿಸಿದ ಅವಾಂತರ!

ಇಂದು ಡೊನಾಲ್ಡ್ ಟ್ರಂಪ್ ಅವರ ಕಾನೂನು ಸಲಹೆಗಾರರ ತಂಡ ಸುದ್ದಿಗೋಷ್ಠಿಯೊದನ್ನು ಕರೆದಿತ್ತು. ಸದರಿ ಗೋಷ್ಠಿಯಲ್ಲಿ ಮಾತನಾಡಿದ ವಕೀಲ ರೂಡಿ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ನಡೆದ ಮತದಾನ ಮತ್ತು ಎಣಿಕೆಯಲ್ಲಿ ವಂಚನೆ ನಡೆದಿದೆ ಎಂದು ಆರೋಪಿಸುತ್ತಿದ್ದರು. ಆದರೆ ಸ್ವಲ್ಪ ಸಮಯದ ನಂತರ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡವರ ಗಮನವೆಲ್ಲ ವಕೀಲರ ಮಾತಿನ ಬದಲು ಕೆನ್ನೆಯ ಮೇಲೆಯೇ ನೆಟ್ಟುಬಿಟ್ಟಿತ್ತು. ಯಾಕೆ ಗೊತ್ತಾ?

ರೂಡಿ, ಪ್ರೆಸ್ ಕಾನ್ಫರೆನ್ಸ್​ಗೆ ಆಗಮಿಸುವ ಸ್ವಲ್ಪ ಮೊದಲು ಅದಾಗಲೇ ಬೋಳಾಗುತ್ತಿರುವ ತಮ್ಮ ತಲೆಗೆ ಹೇರ್ ಡೈ ಮಾಡಿಸಿಕೊಂಡಿದ್ದರೆಂದು ಕಾಣುತ್ತದೆ. ಗೋಷ್ಠಿ ನಡೆಯುತ್ತಿದ್ದಾಗ ಅವರು ಅದ್ಯಾವ ಒತ್ತಡದಲ್ಲಿದ್ದರೋ? ತಲೆಯ ಮೇಲೆ ಜಿನುಗುತ್ತಿದ್ದ ಬೆವರು ಕಪ್ಪು ಹೇರ್ ಡೈನೊಂದಿಗೆ ಬೆರೆತು ಕೆನ್ನೆಗಳ ಮೇಲೆ ಇಳಿದು ಅವರ ಬೆಳ್ಳಗಿನ ಮುಖವನ್ನು ಕಪ್ಪು ಮಾಡಲಾರಂಭಿಸಿತ್ತು. ಅದನ್ನು ರೂಡಿ ಕೂಡಲೇ ಗಮನಿಸಿದರಾದರೂ ಪ್ರೆಸ್ಸರನ್ನು ಅರ್ಧಕ್ಕೆ ನಿಲ್ಲಿಸ ಹೋಗುವಂತಿರಲಿಲ್ಲವಲ್ಲ?

ತಮ್ಮ ಹ್ಯಾಂಕೀಯಿಂದ ಅವರು ಪದೇಪದೆ ಮುಖ ಒರೆಸಿಕೊಳ್ಳುತ್ತಿದ್ದಿದ್ದು ವೈರಲ್ ಅಗಿಬಿಟ್ಟಿದೆ ಮತ್ತು ಬಗೆಬಗೆಯ ಮೀಮ್ಸ್​ಗಳೂ ಸಹ ಸೃಷ್ಟಿಯಾಗಿವೆ.

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು