ನಟ ದರ್ಶನ್ (Darshan) ಅವರು ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿದ್ದಾರೆ. ಸದ್ಯ ಈ ಪ್ರಕರಣದ ವಿಚಾರಣೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಅವರ ಮತ್ತೊಂದು ಪ್ರಕರಣ ಹೊರಬಿದ್ದಿದೆ. ಟಿ. ನರಸೀಪುರ ಸಮೀಪದ ತೂಗುದೀಪ ಫಾರ್ಮ್ಹೌಸ್ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಕಥೆ ಇದು. ಮಹೇಶ್ ಎಂಬುವವರ ಮೇಲೆ ದರ್ಶನ್ಫಾರ್ಮ್ಹೌಸ್ನ ಎತ್ತು ದಾಳಿ ಮಾಡಿತ್ತು. ಆ ಬಳಿಕ ಮಹೇಶ್ ಹಾಸಿಗೆ ಹಿಡಿದರು. ದರ್ಶನ್ ಕಡೆಯಿಂದ ಪರಿಹಾರವೂ ಸಿಕ್ಕಿಲ್ಲ. ಈ ಬಗ್ಗೆ ಫಾರ್ಮ್ಹೌಸ್ನ ಮಾಜಿ ನೌಕರ, ಮಹೇಶ್ ಸಂಬಂಧಿ ಮಾತನಾಡಿದ್ದಾರೆ. ‘ಮಹೇಶ್ಗೆ ಜೀವ ಒಂದಿದೆ ಅಷ್ಟೇ. ಮಲಗಿದ್ದ ಜಾಗದಲ್ಲೇ ಇದ್ದಾನೆ. ತಿಂಗಳಿಗೆ 2-3 ಸಾವಿರ ರೂಪಾಯಿ ಖರ್ಚಾಗುತ್ತಿದೆ. ದರ್ಶನ್ ಯಾವುದೇ ಸಹಾಯ ಮಾಡಿಲ್ಲ. ಕೇಳಿದ್ದಕ್ಕೆ ಬೆದರಿಕೆ ಹಾಕಿದ್ದಾರೆ. ಅವರು ಓರ್ವ ರೌಡಿ, 10 ವರ್ಷಗಳ ಹಿಂದೆಯೇ ಅವರ ಮುಖ ನೋಡಿದ್ದೇವೆ’ ಎಂದಿದ್ದಾರೆ ಅವರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.