AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂ.ಪಿ. ರೇಣುಕಾಚಾರ್ಯ ಅವರನ್ನು ಬೆದರಿಸಲು ಹೋಗಿ ಬಲೆಗೆ ಬಿತ್ತು ಕೋತಿ!

ಶಾಸಕ ರೇಣುಕಾಚಾರ್ಯ ಮೇಲೆ ಕೋತಿ ಎರಗಲು ಹೋದ ನಂತರ ಅದನ್ನು ಸೆರೆ ಹಿಡಿಯಲು ವಿಶೇಷ ತಂಡ ಕರೆಸುವುದಾಗಿ ವಲಯ ಅರಣ್ಯಾಧಿಕಾರಿ ಭರವಸೆ ನೀಡಿದ್ದರು. ಕಾರ್ಯಾಚರಣೆಯ ನಂತರ ಇದೀಗ ಕೋತಿ ಬಲೆಗೆ ಬಿದ್ದಿದೆ.

ಎಂ.ಪಿ. ರೇಣುಕಾಚಾರ್ಯ ಅವರನ್ನು ಬೆದರಿಸಲು ಹೋಗಿ ಬಲೆಗೆ ಬಿತ್ತು ಕೋತಿ!
ಬಲೆಗೆ ಬಿದ್ದ ಕೋತಿ
Follow us
Skanda
|

Updated on:Dec 16, 2020 | 7:22 PM

ದಾವಣಗೆರೆ: ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ ಆಪ್ತ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕ  ಎಂ.ಪಿ.ರೇಣುಕಾಚಾರ್ಯ ಅವರನ್ನು ಬೆದರಿಸಿದ್ದ ಕೋತಿ ಬಲೆಗೆ ಬಿದ್ದಿದೆ. ನಿನ್ನೆ ಪಟ್ಟಣದ ತಾಲೂಕು ಕಚೇರಿ ಎದುರು ರೇಣುಕಾಚಾರ್ಯ ಕೋತಿ ದಾಳಿಯಿಂದ ಸ್ವಲ್ಪದರಲ್ಲೇ ಬಚಾವಾಗಿದ್ದರು.

ಸುಮಾರು 1 ತಿಂಗಳಿನಿಂದ 20ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿದ್ದ ಕೋತಿ ಸಾರ್ವಜನಿಕರ ನೆಮ್ಮದಿಗೆಡಿಸಿತ್ತು. ಅರಣ್ಯ ಇಲಾಖೆಯವರು ಬಲೆ ತಂದು ಹಿಡಿಯಲು ಎಷ್ಟೇ ಪ್ರಯತ್ನಿಸಿದರೂ ಕೋತಿ ತಪ್ಪಿಸಿಕೊಳ್ಳುತ್ತಿದೆ ಎಂದು ಸಬೂಬು ನೀಡುತ್ತಿದ್ದರು.

ಬಸ್ ನಿಲ್ದಾಣ, ಪುರಸಭೆ, ದುರ್ಗಿಗುಡಿ, ಟಿ.ಬಿ.ಸರ್ಕಲ್ ಪ್ರದೇಶದಲ್ಲಿ ಅಡ್ಡಾಡುತ್ತಿದ್ದ ಕೋತಿ ಕಂಡಕಂಡವರ ಮೇಲೆರಗುತ್ತಿತ್ತು. ಅಂತೆಯೇ, ಇಂದು ಬೆಳಗ್ಗೆ ರೇಣುಕಾಚಾರ್ಯ ಅವರ ಮೇಲೆ ಎರಗಲು ಹೋಗಿತ್ತಾದರೂ ಸಹಚರರ ಸಹಾಯದಿಂದ ಶಾಸಕರು ಬಚಾವಾಗಿದ್ದರು.

ಶಾಸಕರ ಮೇಲೆ ಕೋತಿ ಎರಗಲು ಹೋದ ನಂತರ ಅದನ್ನು ಸೆರೆ ಹಿಡಿಯಲು ವಿಶೇಷ ತಂಡ ಕರೆಸುವುದಾಗಿ ವಲಯ ಅರಣ್ಯಾಧಿಕಾರಿ ಭರವಸೆ ನೀಡಿದ್ದರು. ಕಾರ್ಯಾಚರಣೆಯ ನಂತರ ಇದೀಗ ಕೋತಿ ಬಲೆಗೆ ಬಿದ್ದಿದೆ. 20ಕ್ಕೂ ಹೆಚ್ಚು ಜನರನ್ನು ಕಾಡಿದ್ದ ಕೋತಿ ಕೊನೆಗೂ ಬಲೆಗೆ ಬಿದ್ದಿರುವುದು ಹೊನ್ನಾಳಿ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ಕೋತಿ ದಾಳಿಯಿಂದ ರೇಣುಕಾಚಾರ್ಯ ಬಚಾವ್

Published On - 5:50 pm, Wed, 16 December 20

ಕೆಆರ್ ಮಾರ್ಕೆಟ್ ರಸ್ತೆಗಳೂ ಅಧ್ವಾನ, ವಾಹನ ಓಡಿಸಲು ಕಸರತ್ತು ಬೇಕು
ಕೆಆರ್ ಮಾರ್ಕೆಟ್ ರಸ್ತೆಗಳೂ ಅಧ್ವಾನ, ವಾಹನ ಓಡಿಸಲು ಕಸರತ್ತು ಬೇಕು
ರವಿವಾರದವರೆಗೆ ಪರದಾಟ ತಪ್ಪಿದ್ದಲ್ಲ, ಹವಾಮಾನ ಇಲಾಖೆ ಮುನ್ಸೂಚನೆ
ರವಿವಾರದವರೆಗೆ ಪರದಾಟ ತಪ್ಪಿದ್ದಲ್ಲ, ಹವಾಮಾನ ಇಲಾಖೆ ಮುನ್ಸೂಚನೆ
ಕಾಳಿಂಗ ಸರ್ಪವನ್ನು ಇಷ್ಟು ಹತ್ತಿರದಿಂದ ನೋಡಿದ್ದೀರಾ?
ಕಾಳಿಂಗ ಸರ್ಪವನ್ನು ಇಷ್ಟು ಹತ್ತಿರದಿಂದ ನೋಡಿದ್ದೀರಾ?
ಸರಿಗಮಪ ಫಿನಾಲೆ ಟಿಕೆಟ್ ಪಡೆದ ಆರಾಧ್ಯಾ ರಾವ್ ಧ್ವನಿ ಅದೆಷ್ಟು ಸುಮಧುರ ಕೇಳಿ
ಸರಿಗಮಪ ಫಿನಾಲೆ ಟಿಕೆಟ್ ಪಡೆದ ಆರಾಧ್ಯಾ ರಾವ್ ಧ್ವನಿ ಅದೆಷ್ಟು ಸುಮಧುರ ಕೇಳಿ
ಪಂದ್ಯದ ಬಳಿಕವೂ ಮುಂದುವರೆದ ಅಭಿಷೇಕ್-ದಿಗ್ವೇಶ್ ವಾಗ್ಯುದ್ಧ
ಪಂದ್ಯದ ಬಳಿಕವೂ ಮುಂದುವರೆದ ಅಭಿಷೇಕ್-ದಿಗ್ವೇಶ್ ವಾಗ್ಯುದ್ಧ
ನಿನ್ನ ಜುಟ್ಟು ಹಿಡಿದು ಹೊಡಿತೀನಿ: ಕಿತ್ತಾಡಿಕೊಂಡ ಅಭಿಷೇಕ್ - ದಿಗ್ವೇಶ್
ನಿನ್ನ ಜುಟ್ಟು ಹಿಡಿದು ಹೊಡಿತೀನಿ: ಕಿತ್ತಾಡಿಕೊಂಡ ಅಭಿಷೇಕ್ - ದಿಗ್ವೇಶ್
ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ
ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ