AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂ.ಪಿ. ರೇಣುಕಾಚಾರ್ಯ ಅವರನ್ನು ಬೆದರಿಸಲು ಹೋಗಿ ಬಲೆಗೆ ಬಿತ್ತು ಕೋತಿ!

ಶಾಸಕ ರೇಣುಕಾಚಾರ್ಯ ಮೇಲೆ ಕೋತಿ ಎರಗಲು ಹೋದ ನಂತರ ಅದನ್ನು ಸೆರೆ ಹಿಡಿಯಲು ವಿಶೇಷ ತಂಡ ಕರೆಸುವುದಾಗಿ ವಲಯ ಅರಣ್ಯಾಧಿಕಾರಿ ಭರವಸೆ ನೀಡಿದ್ದರು. ಕಾರ್ಯಾಚರಣೆಯ ನಂತರ ಇದೀಗ ಕೋತಿ ಬಲೆಗೆ ಬಿದ್ದಿದೆ.

ಎಂ.ಪಿ. ರೇಣುಕಾಚಾರ್ಯ ಅವರನ್ನು ಬೆದರಿಸಲು ಹೋಗಿ ಬಲೆಗೆ ಬಿತ್ತು ಕೋತಿ!
ಬಲೆಗೆ ಬಿದ್ದ ಕೋತಿ
Skanda
|

Updated on:Dec 16, 2020 | 7:22 PM

Share

ದಾವಣಗೆರೆ: ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ ಆಪ್ತ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕ  ಎಂ.ಪಿ.ರೇಣುಕಾಚಾರ್ಯ ಅವರನ್ನು ಬೆದರಿಸಿದ್ದ ಕೋತಿ ಬಲೆಗೆ ಬಿದ್ದಿದೆ. ನಿನ್ನೆ ಪಟ್ಟಣದ ತಾಲೂಕು ಕಚೇರಿ ಎದುರು ರೇಣುಕಾಚಾರ್ಯ ಕೋತಿ ದಾಳಿಯಿಂದ ಸ್ವಲ್ಪದರಲ್ಲೇ ಬಚಾವಾಗಿದ್ದರು.

ಸುಮಾರು 1 ತಿಂಗಳಿನಿಂದ 20ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿದ್ದ ಕೋತಿ ಸಾರ್ವಜನಿಕರ ನೆಮ್ಮದಿಗೆಡಿಸಿತ್ತು. ಅರಣ್ಯ ಇಲಾಖೆಯವರು ಬಲೆ ತಂದು ಹಿಡಿಯಲು ಎಷ್ಟೇ ಪ್ರಯತ್ನಿಸಿದರೂ ಕೋತಿ ತಪ್ಪಿಸಿಕೊಳ್ಳುತ್ತಿದೆ ಎಂದು ಸಬೂಬು ನೀಡುತ್ತಿದ್ದರು.

ಬಸ್ ನಿಲ್ದಾಣ, ಪುರಸಭೆ, ದುರ್ಗಿಗುಡಿ, ಟಿ.ಬಿ.ಸರ್ಕಲ್ ಪ್ರದೇಶದಲ್ಲಿ ಅಡ್ಡಾಡುತ್ತಿದ್ದ ಕೋತಿ ಕಂಡಕಂಡವರ ಮೇಲೆರಗುತ್ತಿತ್ತು. ಅಂತೆಯೇ, ಇಂದು ಬೆಳಗ್ಗೆ ರೇಣುಕಾಚಾರ್ಯ ಅವರ ಮೇಲೆ ಎರಗಲು ಹೋಗಿತ್ತಾದರೂ ಸಹಚರರ ಸಹಾಯದಿಂದ ಶಾಸಕರು ಬಚಾವಾಗಿದ್ದರು.

ಶಾಸಕರ ಮೇಲೆ ಕೋತಿ ಎರಗಲು ಹೋದ ನಂತರ ಅದನ್ನು ಸೆರೆ ಹಿಡಿಯಲು ವಿಶೇಷ ತಂಡ ಕರೆಸುವುದಾಗಿ ವಲಯ ಅರಣ್ಯಾಧಿಕಾರಿ ಭರವಸೆ ನೀಡಿದ್ದರು. ಕಾರ್ಯಾಚರಣೆಯ ನಂತರ ಇದೀಗ ಕೋತಿ ಬಲೆಗೆ ಬಿದ್ದಿದೆ. 20ಕ್ಕೂ ಹೆಚ್ಚು ಜನರನ್ನು ಕಾಡಿದ್ದ ಕೋತಿ ಕೊನೆಗೂ ಬಲೆಗೆ ಬಿದ್ದಿರುವುದು ಹೊನ್ನಾಳಿ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ಕೋತಿ ದಾಳಿಯಿಂದ ರೇಣುಕಾಚಾರ್ಯ ಬಚಾವ್

Published On - 5:50 pm, Wed, 16 December 20

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?