AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಕೀಯ ಶಿಕ್ಷಣ ಇಲಾಖೆ -ಕಾಲೇಜು ನಡುವಿನ ತಿಕ್ಕಾಟ: ವಿದ್ಯಾರ್ಥಿಗಳಿಗೆ ಎದುರಾಯ್ತು ಸಂಕಷ್ಟ

ದಾವಣಗೆರೆ: ಜಿಲ್ಲೆಯ JJM ಮೆಡಿಕಲ್ ಕಾಲೇಜಿನ ನಿವಾಸಿ ವೈದ್ಯರು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಕಷ್ಟಪಟ್ಟು ಓದಿ ಸರ್ಕಾರಿ ಕೋಟಾದಡಿ ಪ್ರವೇಶ ಗಿಟ್ಟಿಸಿಕೊಂಡರು. ಶಿಷ್ಯ ವೇತನದಿಂದಲೇ ಓದು ಮುಗಿಸಿ ವೈದ್ಯರಾಗಬೇಕು ಎಂಬ ಕನಸು ಕಂಡಿದ್ದರು. ಆದರೆ ಇವರ ಕನಸ್ಸಿನ ಮೇಲೆ ವೈದ್ಯಕೀಯ ಶಿಕ್ಷಣ ಇಲಾಖೆ ತಣ್ಣೀರು ಎರಚಿದೆ. ‘16 ತಿಂಗಳಿನಿಂದ ಶಿಷ್ಯವೇತನ ನೀಡಿಲ್ಲ’ ಹೌದು, ಶಿಷ್ಯವೇತನ ಪಾವತಿಸುವಂತೆ ಕಳೆದ 16 ತಿಂಗಳಿನಿಂದಲೂ ಹೋರಾಟ ಮಾಡುತ್ತಲೇ ಬಂದಿದ್ದೇವೆ. ಆದರೆ ನಮ್ಮ ಹೋರಾಟಕ್ಕೆ ಇಲಾಖೆ ಸ್ಪಂದಿಸುತ್ತಿಲ್ಲ ಎಂಬುದು ವೈದ್ಯಕೀಯ ವಿದ್ಯಾರ್ಥಿಗಳ ಆರೋಪ. […]

ವೈದ್ಯಕೀಯ ಶಿಕ್ಷಣ ಇಲಾಖೆ -ಕಾಲೇಜು ನಡುವಿನ ತಿಕ್ಕಾಟ: ವಿದ್ಯಾರ್ಥಿಗಳಿಗೆ ಎದುರಾಯ್ತು ಸಂಕಷ್ಟ
KUSHAL V
| Updated By: ಸಾಧು ಶ್ರೀನಾಥ್​|

Updated on:Jul 01, 2020 | 10:57 AM

Share

ದಾವಣಗೆರೆ: ಜಿಲ್ಲೆಯ JJM ಮೆಡಿಕಲ್ ಕಾಲೇಜಿನ ನಿವಾಸಿ ವೈದ್ಯರು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಕಷ್ಟಪಟ್ಟು ಓದಿ ಸರ್ಕಾರಿ ಕೋಟಾದಡಿ ಪ್ರವೇಶ ಗಿಟ್ಟಿಸಿಕೊಂಡರು. ಶಿಷ್ಯ ವೇತನದಿಂದಲೇ ಓದು ಮುಗಿಸಿ ವೈದ್ಯರಾಗಬೇಕು ಎಂಬ ಕನಸು ಕಂಡಿದ್ದರು. ಆದರೆ ಇವರ ಕನಸ್ಸಿನ ಮೇಲೆ ವೈದ್ಯಕೀಯ ಶಿಕ್ಷಣ ಇಲಾಖೆ ತಣ್ಣೀರು ಎರಚಿದೆ.

‘16 ತಿಂಗಳಿನಿಂದ ಶಿಷ್ಯವೇತನ ನೀಡಿಲ್ಲ’ ಹೌದು, ಶಿಷ್ಯವೇತನ ಪಾವತಿಸುವಂತೆ ಕಳೆದ 16 ತಿಂಗಳಿನಿಂದಲೂ ಹೋರಾಟ ಮಾಡುತ್ತಲೇ ಬಂದಿದ್ದೇವೆ. ಆದರೆ ನಮ್ಮ ಹೋರಾಟಕ್ಕೆ ಇಲಾಖೆ ಸ್ಪಂದಿಸುತ್ತಿಲ್ಲ ಎಂಬುದು ವೈದ್ಯಕೀಯ ವಿದ್ಯಾರ್ಥಿಗಳ ಆರೋಪ. ಈ ಕುರಿತು ಹಿಂದೆ ಹಲವಾರು ಬಾರಿ ಹೋರಾಟ ಸಹ ಮಾಡಿದ್ದರಂತೆ. ಆದರೆ, ಏನು ಪ್ರಯೋಜನವಾಗಿಲ್ಲ.

ಇದೀಗ ಇವರನ್ನು ಜಿಲ್ಲೆಯ ಕೊವಿಡ್​ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಲು ಸಹ ನಿಯೋಜಿಸಲಾಗಿದೆ.  ಆದರೆ, ವೈದ್ಯಕೀಯ ಶಿಕ್ಷಣ ಇಲಾಖೆ CET ಮೂಲಕ ಖಾಸಗಿ ಮೆಡಿಕಲ್ ಕಾಲೇಜ್​ಗೆ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ ಆಯಾ ಕಾಲೇಜುಗಳೇ ಶಿಷ್ಯ ವೇತನ ಕೊಡಬೇಕು ಅಂತಾ ಹೇಳಿ ನುಣುಚಿಕೊಳ್ಳಲು ಯತ್ನಿಸಿದೆ .

‘ಸರ್ಕಾರವೇ ಶಿಷ್ಟ ವೇತನ ಕೊಡಬೇಕು’ ಆದ್ರೆ ಇವರೆಲ್ಲಾ ಜಿಲ್ಲಾ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಹಾಗಾಗಿ ಇವರಿಗೆ ಸರ್ಕಾರವೇ ಶಿಷ್ಯ ವೇತನ ಕೊಡಬೇಕು ಎಂಬುದು ಕಾಲೇಜಿನ ಆಡಳಿತ ಮಂಡಳಿಯ ವಾದ. ಒಟ್ಟಾರೆ ಇಬ್ಬರ ತಿಕ್ಕಾಟದ ನಡುವೆ ಸಿಕ್ಕಿಹಾಕಿಕೊಂಡಿರುವ ನಿವಾಸಿ ವೈದ್ಯರು ಇದೀಗ ನೇರ ಬೀದಿಗಳಿದು ಪ್ರತಿಭಟನೆ ನಡೆಸಿದರು.  ಆದರೆ, ವಿದ್ಯಾರ್ಥಿಗಳನ್ನ ಭೇಟಿಯಾದ ಜಿಲ್ಲಾಧಿಕಾರಿ ಮಹಾಂತೇಶ್​ ಬೀಳಗಿ ಪ್ರತಿಭಟನೆ ಕೈಬಿಡಿ. ನಾಲ್ಕು ದಿನ ಟೈಮ್ ಕೊಡಿ. ಇಲ್ಲದಿದ್ದರೆ ಕಾನೂನು ತನ್ನ ಕೆಲಸ ಮಾಡುತ್ತದೆ ಎಂದು ಪರೋಕ್ಷವಾಗಿ ತಾಕೀತು ಮಾಡಿದ್ದಾರೆ.

ಒಟ್ನಲ್ಲಿ, ಪ್ರಾಣದ ಹಂಗನ್ನು ತೊರೆದು ಕೊವಿಡ್ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ಈ ವೈದ್ಯಕೀಯ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ನೀಡದೆ ಇಲಾಖೆ ಸತಾಯಿಸುತ್ತಿದೆ. ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸದೆ ಹೀಗೆ ಹೋರಾಟ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದು ನಿಜಕ್ಕೂ ವಿಷಾದದ ಸಂಗತಿ.

Published On - 9:32 am, Wed, 1 July 20

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ