AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಕೀಯ ಶಿಕ್ಷಣ ಇಲಾಖೆ -ಕಾಲೇಜು ನಡುವಿನ ತಿಕ್ಕಾಟ: ವಿದ್ಯಾರ್ಥಿಗಳಿಗೆ ಎದುರಾಯ್ತು ಸಂಕಷ್ಟ

ದಾವಣಗೆರೆ: ಜಿಲ್ಲೆಯ JJM ಮೆಡಿಕಲ್ ಕಾಲೇಜಿನ ನಿವಾಸಿ ವೈದ್ಯರು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಕಷ್ಟಪಟ್ಟು ಓದಿ ಸರ್ಕಾರಿ ಕೋಟಾದಡಿ ಪ್ರವೇಶ ಗಿಟ್ಟಿಸಿಕೊಂಡರು. ಶಿಷ್ಯ ವೇತನದಿಂದಲೇ ಓದು ಮುಗಿಸಿ ವೈದ್ಯರಾಗಬೇಕು ಎಂಬ ಕನಸು ಕಂಡಿದ್ದರು. ಆದರೆ ಇವರ ಕನಸ್ಸಿನ ಮೇಲೆ ವೈದ್ಯಕೀಯ ಶಿಕ್ಷಣ ಇಲಾಖೆ ತಣ್ಣೀರು ಎರಚಿದೆ. ‘16 ತಿಂಗಳಿನಿಂದ ಶಿಷ್ಯವೇತನ ನೀಡಿಲ್ಲ’ ಹೌದು, ಶಿಷ್ಯವೇತನ ಪಾವತಿಸುವಂತೆ ಕಳೆದ 16 ತಿಂಗಳಿನಿಂದಲೂ ಹೋರಾಟ ಮಾಡುತ್ತಲೇ ಬಂದಿದ್ದೇವೆ. ಆದರೆ ನಮ್ಮ ಹೋರಾಟಕ್ಕೆ ಇಲಾಖೆ ಸ್ಪಂದಿಸುತ್ತಿಲ್ಲ ಎಂಬುದು ವೈದ್ಯಕೀಯ ವಿದ್ಯಾರ್ಥಿಗಳ ಆರೋಪ. […]

ವೈದ್ಯಕೀಯ ಶಿಕ್ಷಣ ಇಲಾಖೆ -ಕಾಲೇಜು ನಡುವಿನ ತಿಕ್ಕಾಟ: ವಿದ್ಯಾರ್ಥಿಗಳಿಗೆ ಎದುರಾಯ್ತು ಸಂಕಷ್ಟ
KUSHAL V
| Edited By: |

Updated on:Jul 01, 2020 | 10:57 AM

Share

ದಾವಣಗೆರೆ: ಜಿಲ್ಲೆಯ JJM ಮೆಡಿಕಲ್ ಕಾಲೇಜಿನ ನಿವಾಸಿ ವೈದ್ಯರು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಕಷ್ಟಪಟ್ಟು ಓದಿ ಸರ್ಕಾರಿ ಕೋಟಾದಡಿ ಪ್ರವೇಶ ಗಿಟ್ಟಿಸಿಕೊಂಡರು. ಶಿಷ್ಯ ವೇತನದಿಂದಲೇ ಓದು ಮುಗಿಸಿ ವೈದ್ಯರಾಗಬೇಕು ಎಂಬ ಕನಸು ಕಂಡಿದ್ದರು. ಆದರೆ ಇವರ ಕನಸ್ಸಿನ ಮೇಲೆ ವೈದ್ಯಕೀಯ ಶಿಕ್ಷಣ ಇಲಾಖೆ ತಣ್ಣೀರು ಎರಚಿದೆ.

‘16 ತಿಂಗಳಿನಿಂದ ಶಿಷ್ಯವೇತನ ನೀಡಿಲ್ಲ’ ಹೌದು, ಶಿಷ್ಯವೇತನ ಪಾವತಿಸುವಂತೆ ಕಳೆದ 16 ತಿಂಗಳಿನಿಂದಲೂ ಹೋರಾಟ ಮಾಡುತ್ತಲೇ ಬಂದಿದ್ದೇವೆ. ಆದರೆ ನಮ್ಮ ಹೋರಾಟಕ್ಕೆ ಇಲಾಖೆ ಸ್ಪಂದಿಸುತ್ತಿಲ್ಲ ಎಂಬುದು ವೈದ್ಯಕೀಯ ವಿದ್ಯಾರ್ಥಿಗಳ ಆರೋಪ. ಈ ಕುರಿತು ಹಿಂದೆ ಹಲವಾರು ಬಾರಿ ಹೋರಾಟ ಸಹ ಮಾಡಿದ್ದರಂತೆ. ಆದರೆ, ಏನು ಪ್ರಯೋಜನವಾಗಿಲ್ಲ.

ಇದೀಗ ಇವರನ್ನು ಜಿಲ್ಲೆಯ ಕೊವಿಡ್​ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಲು ಸಹ ನಿಯೋಜಿಸಲಾಗಿದೆ.  ಆದರೆ, ವೈದ್ಯಕೀಯ ಶಿಕ್ಷಣ ಇಲಾಖೆ CET ಮೂಲಕ ಖಾಸಗಿ ಮೆಡಿಕಲ್ ಕಾಲೇಜ್​ಗೆ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ ಆಯಾ ಕಾಲೇಜುಗಳೇ ಶಿಷ್ಯ ವೇತನ ಕೊಡಬೇಕು ಅಂತಾ ಹೇಳಿ ನುಣುಚಿಕೊಳ್ಳಲು ಯತ್ನಿಸಿದೆ .

‘ಸರ್ಕಾರವೇ ಶಿಷ್ಟ ವೇತನ ಕೊಡಬೇಕು’ ಆದ್ರೆ ಇವರೆಲ್ಲಾ ಜಿಲ್ಲಾ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಹಾಗಾಗಿ ಇವರಿಗೆ ಸರ್ಕಾರವೇ ಶಿಷ್ಯ ವೇತನ ಕೊಡಬೇಕು ಎಂಬುದು ಕಾಲೇಜಿನ ಆಡಳಿತ ಮಂಡಳಿಯ ವಾದ. ಒಟ್ಟಾರೆ ಇಬ್ಬರ ತಿಕ್ಕಾಟದ ನಡುವೆ ಸಿಕ್ಕಿಹಾಕಿಕೊಂಡಿರುವ ನಿವಾಸಿ ವೈದ್ಯರು ಇದೀಗ ನೇರ ಬೀದಿಗಳಿದು ಪ್ರತಿಭಟನೆ ನಡೆಸಿದರು.  ಆದರೆ, ವಿದ್ಯಾರ್ಥಿಗಳನ್ನ ಭೇಟಿಯಾದ ಜಿಲ್ಲಾಧಿಕಾರಿ ಮಹಾಂತೇಶ್​ ಬೀಳಗಿ ಪ್ರತಿಭಟನೆ ಕೈಬಿಡಿ. ನಾಲ್ಕು ದಿನ ಟೈಮ್ ಕೊಡಿ. ಇಲ್ಲದಿದ್ದರೆ ಕಾನೂನು ತನ್ನ ಕೆಲಸ ಮಾಡುತ್ತದೆ ಎಂದು ಪರೋಕ್ಷವಾಗಿ ತಾಕೀತು ಮಾಡಿದ್ದಾರೆ.

ಒಟ್ನಲ್ಲಿ, ಪ್ರಾಣದ ಹಂಗನ್ನು ತೊರೆದು ಕೊವಿಡ್ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ಈ ವೈದ್ಯಕೀಯ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ನೀಡದೆ ಇಲಾಖೆ ಸತಾಯಿಸುತ್ತಿದೆ. ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸದೆ ಹೀಗೆ ಹೋರಾಟ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದು ನಿಜಕ್ಕೂ ವಿಷಾದದ ಸಂಗತಿ.

Published On - 9:32 am, Wed, 1 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ