AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ ಮುಳ್ಳು ಗದ್ದುಗೆ ಉತ್ಸವದಲ್ಲಿ ಸಾವಿರಾರು ಭಕ್ತರು ಭಾಗಿ

ಪೊಲೀಸ್​ ವಾರ್ಷಿಕ ಕ್ರೀಡಾಕೂಟದ ಪ್ರಯುಕ್ತ ದಾವಣಗೆರೆ ಪೊಲೀಸರು ವಿಶಿಷ್ಟ ಮ್ಯಾರಥಾನ್​ ಆಯೋಜಿಸಿದ್ದಾರೆ. ರನ್​ ವಿತ್​ ಪೊಲೀಸ್​ ಎಂಬ ಹೆಸರಿನಡಿ ಈ ಓಟವನ್ನು ಆಯೋಜನೆ ಮಾಡಲಾಗಿದೆ. ಇನ್ನೊಂದೆಡೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹರನಹಳ್ಳಿ ಕೆಂಗಾಪುರದಲ್ಲಿ ರಾಮಲಿಂಗೇಶ್ವರ ಸ್ವಾಮೀಜಿ ಮುಳ್ಳು ಗದ್ದುಗೆ ಉತ್ಸವ ನಡೆಯಿತು.

ದಾವಣಗೆರೆ ಮುಳ್ಳು ಗದ್ದುಗೆ ಉತ್ಸವದಲ್ಲಿ ಸಾವಿರಾರು ಭಕ್ತರು ಭಾಗಿ
ಮುಳ್ಳುಗದ್ದುಗೆ ಉತ್ಸವ
Skanda
|

Updated on:Mar 13, 2021 | 10:01 AM

Share

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಹರನಹಳ್ಳಿ ಕೆಂಗಾಪುರದಲ್ಲಿ ರಾಮಲಿಂಗೇಶ್ವರ ಸ್ವಾಮೀಜಿ ಮುಳ್ಳು ಗದ್ದುಗೆ ಉತ್ಸವ ನಡೆಯಿತು. ಮುಳ್ಳುಗದ್ದುಗೆ ಉತ್ಸವದಲ್ಲಿ ಸಾವಿರಾರು ಭಕ್ತರು ಭಾಗಿಯಾಗಿ ಭಕ್ತಿ ಮೆರೆದರು. ರಾಮಲಿಂಗೇಶ್ವರ ಸ್ವಾಮೀಜಿ ಅವರ ಮುಳ್ಳು ಗದ್ದುಗೆ ಉತ್ಸವ ಮಠದಿಂದ ಸುಮಾರು ಎರಡು ಕಿಲೋ ಮೀಟರ್ ದೂರದ ತನಕ ಸಾಗುವುದಾಗಿದ್ದು, ಕಳೆದ 45 ವರ್ಷಗಳಿಂದ ನಡೆಯುತ್ತಿರುವ ಉತ್ಸವಕ್ಕೆ ರಾಜ್ಯದ ವಿವಿಧ ಕಡೆಯಿಂದ ಭಕ್ತರು ಆಗಮಿಸುತ್ತಾರೆ.

ಈ ಉತ್ಸವದಲ್ಲಿ ಮೆರೆದಿದ್ದ ಜನ ಸ್ವಾಮೀಜಿಯನ್ನು ಪಲ್ಲಕ್ಕಿಯಲ್ಲಿ ಕುಳ್ಳಿರಿಸಿ, ನಂತರ ಹೊತ್ತು ಮೆರೆಯುವ ಮೂಲಕ ಭಕ್ತಿ ಪ್ರದರ್ಶಿಸಿದರು. ಕೊರೊನಾ ನಂತರ ಆಯೋಜಿಸಲಾಗಿದ್ದ ಊರ ಉತ್ಸವಕ್ಕೆ ಸ್ಥಳೀಯರು ಬಹು ಸಂಭ್ರಮದಿಂದ ಕೈ ಜೋಡಿಸಿದರು. ಪರ ಊರುಗಳ ಭಕ್ತಾದಿಗಳು ಸಹ ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಭಕ್ತಿಯಿಂದ ಭಾಗವಹಿಸಿದರು.

ಪೊಲೀಸರ ಜೊತೆ ಸಾರ್ವಜನಿಕರ ಓಟ ಪೊಲೀಸ್​ ವಾರ್ಷಿಕ ಕ್ರೀಡಾಕೂಟದ ಪ್ರಯುಕ್ತ ದಾವಣಗೆರೆ ಪೊಲೀಸರು ವಿಶಿಷ್ಟ ಮ್ಯಾರಥಾನ್​ ಆಯೋಜಿಸಿದ್ದಾರೆ. ರನ್​ ವಿತ್​ ಪೊಲೀಸ್​ ಎಂಬ ಹೆಸರಿನಡಿ ಈ ಓಟವನ್ನು ಆಯೋಜನೆ ಮಾಡಲಾಗಿದ್ದು, ಸುಮಾರು 10 ಕಿಲೋ ಮೀಟರ್​ ದೂರ ಪೊಲೀಸರು ಹಾಗೂ ಸಾರ್ವಜನಿಕರು ಜೊತೆಯಾಗಿ ಓಡಿದ್ದಾರೆ. ಪೂರ್ವ ವಲಯ ಐಜಿಪಿ ರವಿ.ಎಸ್ ಹಾಗೂ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮ್ಯಾರಥಾನ್​ಗೆ ಚಾಲನೆ ನೀಡಿದ್ದು ಸಾರ್ವಜನಿಕರು ಅತ್ಯತ್ಸಾಹದಿಂದ ಭಾಗಿಯಾಗಿದ್ದಾರೆ.

ದಾವಣಗೆರೆ ನಗರದ ಜಯದೇವ ವೃತ್ತದಿಂದ ಸುಮಾರು ಹತ್ತು ಕಿಲೋ ಮೀಟರ್ ದೂರದ ತನಕ ಆಯೋಜಿಸಲಾಗಿದ್ದ ಈ ಮ್ಯಾರಥಾನ್​ನಲ್ಲಿ ಪುರುಷರು ಹಾಗೂ ಮಹಿಳೆಯರಿಗಾಗಿ ಪ್ರತ್ಯೇಕ ಸ್ಪರ್ಧೆ ಏರ್ಪಡಿಸಲಾಗಿತ್ತು. ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಪ್ರಯುಕ್ತ ಇಂಥದ್ದೊಂದು ಪ್ರಯತ್ನಕ್ಕೆ ಪೊಲೀಸರು ಕೈ ಹಾಕಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಾರ್ವಜನಿಕರು ಪೊಲೀಸರೊಂದಿಗೆ ಓಡುವ ಮೂಲಕ ಮ್ಯಾರಥಾನ್​ನಲ್ಲಿ ಭಾಗಿಯಾದರು.

Davanagere News

ದಾವಣಗೆರೆಯಲ್ಲಿ ನಡೆದ ಕಾರ್ಯಕ್ರಮಗಳು

ಇದನ್ನೂ ಓದಿ: ದಾವಣಗೆರೆಯಲ್ಲಿ ಭಕ್ತರ ಜತೆ ಮಾತನಾಡುವ ದೇವರು… ಏನಿದರ ವಿಶೇಷತೆ? 

ದಾವಣಗೆರೆಯಲ್ಲಿ ವೀರಭದ್ರ ದೇವರ ಉತ್ಸವ: ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು ಎಂಬ ಅಲಿಖಿತ ನಿಯಮ; ಹರಿದು ಬಂದ ಭಕ್ತ ಸಾಗರ

Published On - 9:59 am, Sat, 13 March 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!