Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಕಿ ಕೆರೆ ಬಳಿ ಜಲಪಾತ ನಿರ್ಮಾಣ: ಸ್ಥಳ ಪರಿಶೀಲನೆ ಮಾಡಿದ ಡಿಸಿಎಂ

ಶಿವರಾತ್ರಿಯ ದಿನ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ಸ್ಯಾಂಕಿ ಟ್ಯಾಂಕಿನ ಬಳಿ ನಿರ್ಮಿಸುತ್ತಿರುವ ಫಾಲ್ಸ್​ನ ಕಾಮಗಾರಿ ವೀಕ್ಷಣೆ ಮಾಡಿದರು.

ಸ್ಯಾಂಕಿ ಕೆರೆ ಬಳಿ ಜಲಪಾತ ನಿರ್ಮಾಣ: ಸ್ಥಳ ಪರಿಶೀಲನೆ ಮಾಡಿದ ಡಿಸಿಎಂ
ಸ್ಯಾಂಕಿ ಕೆರೆ​ ಬಳಿ ಸಿದ್ಧವಾಗುತ್ತಿರುವ ಜಲಪಾತ
Follow us
ಡಾ. ಭಾಸ್ಕರ ಹೆಗಡೆ
| Updated By: Skanda

Updated on: Mar 11, 2021 | 9:31 PM

ಬೆಂಗಳೂರು: ಉದ್ಯಾನನಗರಿ ಬೆಂಗಳೂರಿನಲ್ಲಿ ಜಲಪಾತವೊಂದು ಸೃಷ್ಟಿಯಾಗಲಿದ್ದು, ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಮಹಾ ಶಿವರಾತ್ರಿ ದಿನ ಆ ಯೋಜನೆ ಕುರಿತು ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಮಲ್ಲೇಶ್ವರದ ಸ್ಯಾಂಕಿ ಕೆರೆಯ ಈಜುಕೊಳದ ಪಕ್ಕದಲ್ಲಿ ಜಲಪಾತ ನಿರ್ಮಿಸುವ ಸಂಬಂಧ ಗುರುವಾರ ಬೆಳಗ್ಗೆ ಡಿಸಿಎಂ ಸ್ಥಳ ಪರಿಶೀಲನೆ ನಡೆಸಿದರು. ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಿಸಿಕೊಂಡು ಕೃತಕ ಜಲಪಾತವನ್ನು ನಿರ್ಮಾಣ ಮಾಡಲಾಗುತ್ತಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ, “ಸದಾಶಿವನಗರದ ಸ್ಯಾಂಕಿ ಕೆರೆ ನವೀಕರಣ ಕಾಮಗಾರಿ‌‌‌ ನಡೆಯುತ್ತಿದ್ದು ಹೆಚ್ಚುವರಿಯಾಗಿ ಕೆರೆ ಪಕ್ಕದ ಈಜುಕೊಳಕ್ಕೆ ಹೊಂದಿಕೊಂಡಂತೆ ಜಲಪಾತದ ಗೋಡೆ‌ ನಿರ್ಮಿಸಲಾಗುವುದು. ವಾಟರ್ ಫಾಲ್ಸ್ ಜತೆಗೆ ಏರಿಯೇಟರ್ಸ್ ಕೂಡ ಅಳವಡಿಸಲಾಗುವುದು. ಇದರಿಂದ ಕೆರೆ ನೀರು ಸ್ವಚ್ಛ ಆಗಲಿದೆ. ಈಗಾಗಲೇ ಸರ್ವಋತುಗಳಲ್ಲಿಯೂ ನಳನಳಿಸುವ ಉದ್ಯಾನವನ ಬೆಳೆಸಿರುವುದರಿಂದ ಈ ಜಲಪಾತ ಮತ್ತಷ್ಟು ಮೆರಗು ನೀಡಲಿದೆ. ಮಲ್ಲೇಶ್ವರದ ಪಾರಂಪರಿಕ ವೈಭವಕ್ಕೆ ಪೂರಕವಾಗಿರಲಿದೆ. ಇದಕ್ಕೆ ಒಂದೂವರೆ ಕೋಟಿ ಖರ್ಚಾಗುವ ಅಂದಾಜಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

Sankey Tank

ಸ್ಯಾಂಕಿ ಕೆರೆ​ ಬಳಿ ಸಿದ್ಧವಾಗುತ್ತಿರುವ ಜಲಪಾತ

12ರಿಂದ 15 ಅಡಿ ಎತ್ತರ ಹಾಗೂ ಸುಮಾರು 100 ಅಡಿ ಅಗಲ ಇರಲಿರುವ ಈ ಜಲಪಾತ ನಗರದ ಪ್ರವಾಸೋದ್ಯಮಕ್ಕೂ ಪುರಕವಾಗಿರಲಿದೆ ಎಂದು ಡಿಸಿಎಂ ಮಾಹಿತಿ ನೀಡಿದರು. ಸ್ಯಾಂಕಿ ಕೆರೆಯು ಮಲ್ಲೇಶ್ವರಕ್ಕೆ ಮಾತ್ರವಲ್ಲ, ಇಡೀ ಬೆಂಗಳೂರಿಗೆ ಒಂದು ಮಹತ್ವದ ತಾಣ. ಮುಂದಿನ ದಿನಗಳಲ್ಲಿ ಕೆರೆಗೆ ಇನ್ನಷ್ಟು ಕಾಯಕಲ್ಪ ನೀಡಲಾಗುವುದು. ಪ್ರತಿಯೊಬ್ಬ ಬೆಂಗಳೂರಿನ ನಿವಾಸಿಯೂ ಇಲ್ಲಿಗೆ ಭೇಟಿ ನೀಡಲೇಬೇಕು. ಆ ರೀತಿಯಲ್ಲಿ ಇಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಹೇಳಿದರು.

ಪಾಲಿಕೆ‌ಯ ಮುಖ್ಯ ಎಂಜಿನಿಯರ್ (ಕೆರೆ) ಮೋಹನ್ ಕೃಷ್ಣ, ಪಾಲಿಕೆ ಕಾರ್ಯನಿರ್ವಾಹಕ ಎಂಜಿನಿಯರ್ ಪಾಪರೆಡ್ಡಿ, ಸಹಾಯಕ ಎಂಜಿನಿಯರ್ ಗಳಾದ ಸುಷ್ಮಾ, ಸ್ಬಪ್ನಾ, ಬಿಬಿಎಂಪಿ ಮಾಜಿ ಸದಸ್ಯರಾದ ಮಂಜುನಾಥ ರಾಜು ಸೇರಿದಂತೆ ಹಲವು ಬಿಜೆಪಿ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.

ಇದನ್ನೂ ಓದಿ:

ಮೈಸೂರು ಪ್ರವಾಸೋದ್ಯಮ ಅಭಿವೃದ್ಧಿಗೆ ರಾಜವಂಶಸ್ಥರಿಂದ ಸಲಹೆ ಪಡೆದ ಸಚಿವ ಸಿ.ಪಿ.ಯೋಗೇಶ್ವರ್ 

ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್