AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಕಿ ಕೆರೆ ಬಳಿ ಜಲಪಾತ ನಿರ್ಮಾಣ: ಸ್ಥಳ ಪರಿಶೀಲನೆ ಮಾಡಿದ ಡಿಸಿಎಂ

ಶಿವರಾತ್ರಿಯ ದಿನ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ಸ್ಯಾಂಕಿ ಟ್ಯಾಂಕಿನ ಬಳಿ ನಿರ್ಮಿಸುತ್ತಿರುವ ಫಾಲ್ಸ್​ನ ಕಾಮಗಾರಿ ವೀಕ್ಷಣೆ ಮಾಡಿದರು.

ಸ್ಯಾಂಕಿ ಕೆರೆ ಬಳಿ ಜಲಪಾತ ನಿರ್ಮಾಣ: ಸ್ಥಳ ಪರಿಶೀಲನೆ ಮಾಡಿದ ಡಿಸಿಎಂ
ಸ್ಯಾಂಕಿ ಕೆರೆ​ ಬಳಿ ಸಿದ್ಧವಾಗುತ್ತಿರುವ ಜಲಪಾತ
ಡಾ. ಭಾಸ್ಕರ ಹೆಗಡೆ
| Edited By: |

Updated on: Mar 11, 2021 | 9:31 PM

Share

ಬೆಂಗಳೂರು: ಉದ್ಯಾನನಗರಿ ಬೆಂಗಳೂರಿನಲ್ಲಿ ಜಲಪಾತವೊಂದು ಸೃಷ್ಟಿಯಾಗಲಿದ್ದು, ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಮಹಾ ಶಿವರಾತ್ರಿ ದಿನ ಆ ಯೋಜನೆ ಕುರಿತು ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಮಲ್ಲೇಶ್ವರದ ಸ್ಯಾಂಕಿ ಕೆರೆಯ ಈಜುಕೊಳದ ಪಕ್ಕದಲ್ಲಿ ಜಲಪಾತ ನಿರ್ಮಿಸುವ ಸಂಬಂಧ ಗುರುವಾರ ಬೆಳಗ್ಗೆ ಡಿಸಿಎಂ ಸ್ಥಳ ಪರಿಶೀಲನೆ ನಡೆಸಿದರು. ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಿಸಿಕೊಂಡು ಕೃತಕ ಜಲಪಾತವನ್ನು ನಿರ್ಮಾಣ ಮಾಡಲಾಗುತ್ತಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ, “ಸದಾಶಿವನಗರದ ಸ್ಯಾಂಕಿ ಕೆರೆ ನವೀಕರಣ ಕಾಮಗಾರಿ‌‌‌ ನಡೆಯುತ್ತಿದ್ದು ಹೆಚ್ಚುವರಿಯಾಗಿ ಕೆರೆ ಪಕ್ಕದ ಈಜುಕೊಳಕ್ಕೆ ಹೊಂದಿಕೊಂಡಂತೆ ಜಲಪಾತದ ಗೋಡೆ‌ ನಿರ್ಮಿಸಲಾಗುವುದು. ವಾಟರ್ ಫಾಲ್ಸ್ ಜತೆಗೆ ಏರಿಯೇಟರ್ಸ್ ಕೂಡ ಅಳವಡಿಸಲಾಗುವುದು. ಇದರಿಂದ ಕೆರೆ ನೀರು ಸ್ವಚ್ಛ ಆಗಲಿದೆ. ಈಗಾಗಲೇ ಸರ್ವಋತುಗಳಲ್ಲಿಯೂ ನಳನಳಿಸುವ ಉದ್ಯಾನವನ ಬೆಳೆಸಿರುವುದರಿಂದ ಈ ಜಲಪಾತ ಮತ್ತಷ್ಟು ಮೆರಗು ನೀಡಲಿದೆ. ಮಲ್ಲೇಶ್ವರದ ಪಾರಂಪರಿಕ ವೈಭವಕ್ಕೆ ಪೂರಕವಾಗಿರಲಿದೆ. ಇದಕ್ಕೆ ಒಂದೂವರೆ ಕೋಟಿ ಖರ್ಚಾಗುವ ಅಂದಾಜಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

Sankey Tank

ಸ್ಯಾಂಕಿ ಕೆರೆ​ ಬಳಿ ಸಿದ್ಧವಾಗುತ್ತಿರುವ ಜಲಪಾತ

12ರಿಂದ 15 ಅಡಿ ಎತ್ತರ ಹಾಗೂ ಸುಮಾರು 100 ಅಡಿ ಅಗಲ ಇರಲಿರುವ ಈ ಜಲಪಾತ ನಗರದ ಪ್ರವಾಸೋದ್ಯಮಕ್ಕೂ ಪುರಕವಾಗಿರಲಿದೆ ಎಂದು ಡಿಸಿಎಂ ಮಾಹಿತಿ ನೀಡಿದರು. ಸ್ಯಾಂಕಿ ಕೆರೆಯು ಮಲ್ಲೇಶ್ವರಕ್ಕೆ ಮಾತ್ರವಲ್ಲ, ಇಡೀ ಬೆಂಗಳೂರಿಗೆ ಒಂದು ಮಹತ್ವದ ತಾಣ. ಮುಂದಿನ ದಿನಗಳಲ್ಲಿ ಕೆರೆಗೆ ಇನ್ನಷ್ಟು ಕಾಯಕಲ್ಪ ನೀಡಲಾಗುವುದು. ಪ್ರತಿಯೊಬ್ಬ ಬೆಂಗಳೂರಿನ ನಿವಾಸಿಯೂ ಇಲ್ಲಿಗೆ ಭೇಟಿ ನೀಡಲೇಬೇಕು. ಆ ರೀತಿಯಲ್ಲಿ ಇಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಹೇಳಿದರು.

ಪಾಲಿಕೆ‌ಯ ಮುಖ್ಯ ಎಂಜಿನಿಯರ್ (ಕೆರೆ) ಮೋಹನ್ ಕೃಷ್ಣ, ಪಾಲಿಕೆ ಕಾರ್ಯನಿರ್ವಾಹಕ ಎಂಜಿನಿಯರ್ ಪಾಪರೆಡ್ಡಿ, ಸಹಾಯಕ ಎಂಜಿನಿಯರ್ ಗಳಾದ ಸುಷ್ಮಾ, ಸ್ಬಪ್ನಾ, ಬಿಬಿಎಂಪಿ ಮಾಜಿ ಸದಸ್ಯರಾದ ಮಂಜುನಾಥ ರಾಜು ಸೇರಿದಂತೆ ಹಲವು ಬಿಜೆಪಿ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.

ಇದನ್ನೂ ಓದಿ:

ಮೈಸೂರು ಪ್ರವಾಸೋದ್ಯಮ ಅಭಿವೃದ್ಧಿಗೆ ರಾಜವಂಶಸ್ಥರಿಂದ ಸಲಹೆ ಪಡೆದ ಸಚಿವ ಸಿ.ಪಿ.ಯೋಗೇಶ್ವರ್ 

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!