AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಕಿ ಟ್ಯಾಂಕ್​ಗೆ ಭೇಟಿ ನೀಡಿ ಫಾಲ್ಸ್​ ಕೆಲಸ ಪರಿಶೀಲಿಸಿದ ಡಿಸಿಎಂ ಅಶ್ವತ್ಥ ನಾರಾಯಣ್

ಸಾರ್ವಜನಿಕರ ವಾಯುವಿಹಾರಕ್ಕೆ, ಪಾದಚಾರಿಗಳ ವಾಕಿಂಗ್​ಗೆ ಅನುಕೂಲಕರವಾಗಿರುವ ಸ್ಯಾಂಕಿ ಟ್ಯಾಂಕ್​ನ ಕೆಲ ಭಾಗಗಳನ್ನು ತಮ್ಮ ತಂಡದ ಜತೆ ಪರಿಶೀಲಿಸಿ ಆದ್ಯತೆಯ ಮೇರೆಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ಸ್ಯಾಂಕಿ ಟ್ಯಾಂಕ್​ಗೆ ಭೇಟಿ ನೀಡಿ ಫಾಲ್ಸ್​ ಕೆಲಸ ಪರಿಶೀಲಿಸಿದ ಡಿಸಿಎಂ ಅಶ್ವತ್ಥ ನಾರಾಯಣ್
ಸ್ಯಾಂಕಿ ಟ್ಯಾಂಕ್ ಪರಿಶೀಲನೆ
Follow us
guruganesh bhat
|

Updated on:Mar 11, 2021 | 6:58 PM

ಬೆಂಗಳೂರು: ನಗರದ ಮಲ್ಲೇಶ್ವರಂನಲ್ಲಿರುವ ಪ್ರಸಿದ್ಧ ಸ್ಯಾಂಕಿ ಕೆರೆ ಬಳಿ ಹೊಸದಾಗಿ ಸೃಷ್ಟಿಸಲು ಹೊರಟಿರುವ ಫಾಲ್ಸ್​ನ ಕೆಲಸದ ಪ್ರಗತಿಯನ್ನು ಉಪ ಮುಖ್ಯಮಂತ್ರಿ, ಮಲ್ಲೇಶ್ವರಂ ಕ್ಷೇತ್ರದ ಶಾಸಕ ಡಾ.ಅಶ್ವತ್ಥ್ ನಾರಾಯಣ್ ಭೇಟಿ ನೀಡಿ ವೀಕ್ಷಣೆ ನಡೆಸಿದರು.  ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಪ್ರಸಿದ್ಧ ಜಲಮೂಲವಾದ ಸ್ಯಾಂಕಿ ಕೆರೆ ಸ್ಯಾಂಕಿ ಟ್ಯಾಂಕ್ ಎಂದೇ ಹೆಸರು ಗಳಿಸಿದೆ. ದಿನೇ ದಿನೇ ಸ್ಯಾಂಕಿ ಟ್ಯಾಂಕ್​ನ ಜನಪ್ರಿಯತೆ ಹೆಚ್ಚುತ್ತಿದ್ದು, ಈ ಪ್ರದೇಶದಲ್ಲಿ ಹೆಚ್ಚಿನ ಮೂಲಸೌಕರ್ಯದ ಅವಶ್ಯಕತೆ ಅರಿತ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ್​ ನಾರಾಯಣ ದಿಢೀರ್ ಭೇಟಿ ನೀಡಿ ಕೆರೆಯ ಪ್ರದೇಶವನ್ನು ವೀಕ್ಷಿಸಿದರು. ಸಾರ್ವಜನಿಕರ ವಾಯುವಿಹಾರಕ್ಕೆ, ಪಾದಚಾರಿಗಳ ವಾಕಿಂಗ್​ಗೆ ಅನುಕೂಲಕರವಾಗಿರುವ ಸ್ಯಾಂಕಿ ಟ್ಯಾಂಕ್​ನ ಕೆಲ ಭಾಗಗಳನ್ನು ತಮ್ಮ ತಂಡದ ಜತೆ ಪರಿಶೀಲಿಸಿ ಆದ್ಯತೆಯ ಮೇರೆಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸೂಚನೆ ನೀಡಿದರು. ಅಷ್ಟೇ ಅಲ್ಲ ಬಳಿ ಹೊಸದಾಗಿ ಸೃಷ್ಟಿಸಲು ಹೊರಟಿರುವ ಫಾಲ್ಸ್​ನ ಕೆಲಸದ ಪ್ರಗತಿಯ ಬಗ್ಗೆ ಚರ್ಚಿಸಿದರು.   

Sanky Tank Falls

ಸ್ಯಾಂಕಿ ಟ್ಯಾಂಕ್​ನಲ್ಲಿ ಸೃಷ್ಟಿಸಲಾಗುತ್ತಿರುವ ಕೃತಕ ಜಲಪಾತ

Sanky Tank Falls

ಕೃತಕ ಜಲಪಾತದ ಒಂದು ನೋಟ

Dr ASHWATH NNARAYAN AT SANKY TANK

sanky tank DCM ASHWATH NARAYAN

ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ್ ಸ್ಯಾಂಕಿ ಟ್ಯಾಂಕ್​ಗೆ ಭೇಟಿ ನೀಡಿದರು.

ಕೆರೆಯನ್ನು ಅಭಿವೃದ್ಧಿಪಡಿಸಲು ಹಲವು ಕೆಲಸಗಳು ನಡಿಯುತ್ತಿದ್ದು, ಪಾದಚಾರಿ ಮಾರ್ಗ ಅಭಿವೃದ್ಧಿಪಡುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಿದರು.  ಸಾರ್ವಜನಿಕರು ಸ್ಯಾಂಕಿ ಟ್ಯಾಂಕ್​ ಪಕ್ಕ ಸೃಷ್ಟಿಸುತ್ತಿರುವ ಫಾಲ್ಸ್​ ನಿರ್ಮಾಣದ ಕಾಮಗಾರಿಯ ಪ್ರಗತಿ ಕುರಿತು ಚರ್ಚಿಸಿದರು.

ಪ್ರಸ್ತುತ ಇವರು ಉನ್ನತ ಶಿಕ್ಷಣ, ಮಾಹಿತಿ ಮತ್ತು ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲ ಮತ್ತು ಜೀವನೋಪಾಯ ಸಚಿವರಾಗಿದ್ದಾರೆ. ಹಾಗೂ ಮಲ್ಲೇಶ್ವರಂ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷವನ್ನು(ಬಿಜೆಪಿ) ಪ್ರತಿನಿಧಿಸುವ ಕರ್ನಾಟಕ ವಿಧಾನಸಭೆಯ ಸದಸ್ಯರು. 20 ಆಗಸ್ಟ್​ 2019ರಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರದಲ್ಲಿ ಕ್ಯಾಬಿನೆಟ್​ ಸಚಿವರಾಗಿ ಆಯ್ಕೆಯಾದ್ದರು.

ಅಶ್ವತ್ ನಾರಾಯಣ್​ ಅವರು ಟಿ.ಕೆ ನಾರಾಯಣಪ್ಪ ಮತ್ತು ವಿ.ಎಲ್​ ಪದ್ಮಮ್ಮ ಅವರ ಪುತ್ರ. ಫೆಬ್ರವರಿ 02, 1969ರಂದು ಜನಿಸಿದರು. ಹಾಗೂ ಇವರು ಎಮ್​ಬಿಬಿಎಸ್​ ಪದವೀಧರರು. 2004ರಲ್ಲಿ ರಾಜಕೀಯ ರಂಗಕ್ಕೆ ಪ್ರವೇಶಿಸಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿ, ಪೋಷಕರ ಒತ್ತಾಯಕ್ಕೆ ಕಾಲೇಜು ಓಪನ್ ಮಾಡಿದ್ದೇವೆ -DCM ಡಾ. ಅಶ್ವತ್ಥ್ ನಾರಾಯಣ

CN Ashwath Narayan Birthday ಇಂದು ಡಾ. ಸಿ.ಎನ್. ಅಶ್ವತ್ ನಾರಾಯಣ್​ಗೆ​ ಹುಟ್ಟುಹಬ್ಬದ ಸಂಭ್ರಮ

Published On - 5:48 pm, Thu, 11 March 21

VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು