
ಬಾಗಲಕೋಟೆ: ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿ ಬಾಗಲಕೋಟೆಯಲ್ಲಿ ಡಿಸಿಎಂ ಗೋವಿಂದ ಕಾರಜೋಳ ಸ್ವಾರಸ್ಯಕರ ಹೇಳಿಕೆ ನೀಡಿದ್ದಾರೆ.
ಈ ನಡುವೆ, ಡ್ರಗ್ಸ್ ಮಾಫಿಯಾ ಹಣದಿಂದ ಸರ್ಕಾರ ರಚನೆಯಾಗಿದೆ ಎಂಬು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಕಾರಜೋಳ ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿಯವರ ಆರೋಪ ಕೇವಲ ರಾಜಕೀಯ ಆರೋಪ. ಆರೋಪದಲ್ಲಿ ಸತ್ಯಾಂಶವಿಲ್ಲ. ಹಾಗಾಗಿ, ಗಂಭೀರವಾಗಿ ಪರಿಗಣಿಸೋದು ಬೇಡ ಎಂದು ತಿರುಗೇಟು ನೀಡಿದರು.
‘ಸಂಪುಟ ವಿಸ್ತರಣೆ ಮುನ್ನ ಕಾರ್ಡ್ ಛಾಪಿಸಿ ನಿಮಗೂ ಕೊಡುತ್ತೇವೆ’
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಡಿಸಿಎಂ ಕಾರಜೋಳ ಸಚಿವ ಸಂಪುಟ ವಿಸ್ತರಣೆ ಮುನ್ನ ಕಾರ್ಡ್ ಛಾಪಿಸಿ ನಿಮಗೂ ಕೊಡುತ್ತೇವೆ ಎಂದು ನಗೆ ಚಟಾಕಿ ಹಾರಿಸಿದರು. ಸಚಿವರ ಬದಲಾವಣೆ ಕುರಿತು ಅಂತಹ ಯಾವುದೇ ಬೆಳವಣಿಗೆ ನಡೆದಿಲ್ಲ. ಅದು ಕೇವಲ ಗಾಳಿ ಸುದ್ದಿ. ಅದಕ್ಕೆ ಹೆಚ್ಚು ಮಹತ್ವ ಕೊಡುವ ಅವಶ್ಯಕತೆ ಇಲ್ಲ ಎಂದು ಹೇಳಿದರು.
Published On - 2:01 pm, Sat, 5 September 20