AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MLC ಫೈಟ್​ನಲ್ಲಿ ಗೆದ್ದ ಸವದಿ: ಪರಿಷತ್​ ಆಯ್ಕೆಯಿಂದ DCM ಪಟ್ಟ ಸುಭದ್ರ

ಬೆಂಗಳೂರು: ವಿಧಾನ ಪರಿಷತ್​ನ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಡಿಸಿಎಂ ಹಾಗೂ ಬಿಜೆಪಿ ಅಭ್ಯರ್ಥಿ ಲಕ್ಷ್ಮಣ್ ಸವದಿ ಗೆಲುವಿನ ನಗೆ ಬೀರಿದ್ದಾರೆ. ಚಲಾವಣೆಯಾಗಿದ್ದ 120 ಮತಗಳ ಪೈಕಿ ಲಕ್ಷ್ಮಣ್ ಸವದಿ 113 ಮತಗಳನ್ನು ಪಡೆದಿದ್ದು, 7 ಮತಗಳು ಅಸಿಂಧುವಾಗಿದೆ. ಈ ಮೂಲಕ ಉಪ ಮುಖ್ಯಮಂತ್ರಿ ಲಕ್ಷ್ಮಣ್​ ಸವದಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ನಂತರ ಅನಿಲ್ ಕುಮಾರ್ ನಿವೃತ್ತರಾಗಿದ್ದರು. ಹಾಗಾಗಿ ಡಿಸಿಎಂ ಲಕ್ಷ್ಮಣ ಸವದಿ ಗೆಲುವಿನ ಹಾದಿ ಸುಗಮವಾಗಿದೆ. ರಿಜ್ವಾನ್​ ಅರ್ಷದ್​ ಶಾಸಕರಾಗಿ ಆಯ್ಕೆಯಾಗಿದ್ದರಿಂದ […]

MLC ಫೈಟ್​ನಲ್ಲಿ ಗೆದ್ದ ಸವದಿ: ಪರಿಷತ್​ ಆಯ್ಕೆಯಿಂದ DCM ಪಟ್ಟ ಸುಭದ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 17, 2020 | 6:30 PM

Share

ಬೆಂಗಳೂರು: ವಿಧಾನ ಪರಿಷತ್​ನ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಡಿಸಿಎಂ ಹಾಗೂ ಬಿಜೆಪಿ ಅಭ್ಯರ್ಥಿ ಲಕ್ಷ್ಮಣ್ ಸವದಿ ಗೆಲುವಿನ ನಗೆ ಬೀರಿದ್ದಾರೆ. ಚಲಾವಣೆಯಾಗಿದ್ದ 120 ಮತಗಳ ಪೈಕಿ ಲಕ್ಷ್ಮಣ್ ಸವದಿ 113 ಮತಗಳನ್ನು ಪಡೆದಿದ್ದು, 7 ಮತಗಳು ಅಸಿಂಧುವಾಗಿದೆ.

ಈ ಮೂಲಕ ಉಪ ಮುಖ್ಯಮಂತ್ರಿ ಲಕ್ಷ್ಮಣ್​ ಸವದಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ನಂತರ ಅನಿಲ್ ಕುಮಾರ್ ನಿವೃತ್ತರಾಗಿದ್ದರು. ಹಾಗಾಗಿ ಡಿಸಿಎಂ ಲಕ್ಷ್ಮಣ ಸವದಿ ಗೆಲುವಿನ ಹಾದಿ ಸುಗಮವಾಗಿದೆ.

ರಿಜ್ವಾನ್​ ಅರ್ಷದ್​ ಶಾಸಕರಾಗಿ ಆಯ್ಕೆಯಾಗಿದ್ದರಿಂದ ತೆರವಾಗಿದ್ದ ಒಂದು ಸ್ಥಾನಕ್ಕೆ ಇಂದು ಉಪಚುನಾವಣೆ ನಡೆದಿದೆ. ಸಂಜೆ 4 ಗಂಟೆಯವರೆಗೆ ಮತದಾನ ನಡೆದಿದ್ದು, 5 ಗಂಟೆ ನಂತರ ಚುನಾವಣಾ ಅಧಿಕಾರಿ ವಿಶಾಲಾಕ್ಷಿ ನೇತೃತ್ವದಲ್ಲಿ ಮತ ಎಣಿಕೆ ಮತ ಎಣಿಕೆ ಕಾರ್ಯ ನಡೆದಿದೆ.

ಪರಿಷತ್ ಚುನಾವಣೆಯಲ್ಲಿ ಗೆಲುವು ಹಿನ್ನೆಲೆ ಡಿಸಿಎಂ ಲಕ್ಷ್ಮಣ ಸವದಿ ಪಕ್ಷದ ಮುಖಂಡರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.  ಈ ಗೆಲುವಿನಿಂದ ಪಕ್ಷ ಹಾಗೂ ಸರಕಾರದಲ್ಲಿ ಹೊಸ ಶಕ್ತಿಯಿಂದ ಕೆಲಸ ಮಾಡಲು ಅವಕಾಶ ಸಿಕ್ಕಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.

Published On - 6:05 pm, Mon, 17 February 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು