AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗಲಿ ಮೇಲೆ ಶವ! ಗ್ರಾಮಸ್ಥರಿಗೆ ಆವರಿಸಿತು ಭೀತಿ, ಆಮೇಲೆ ಫಜೀತಿ

ಮಂಡ್ಯ: ಕೊರೊನಾದಿಂದ ಜನರ ಜೀವಕ್ಕೆ ಬೆಲೆಯೇ ಇಲ್ಲದಂತಾಗಿದೆ. ಇದಕ್ಕೊಂದು ನಿದರ್ಶನ ಜಿಲ್ಲೆಯ ಮಳವಳ್ಳಿ ತಾಲೂಕಿನ ಹೊನಗನಹಳ್ಳಿಯಲ್ಲಿ ನಡೆದಿದೆ. ಮೂಲತಃ ಮೈಸೂರಿನ T ನರಸಿಪುರ ತಾಲೂಕಿನ ಮುಸುಕನಕೊಪ್ಪಲು ನಿವಾಸಿಯಾಗಿದ್ದ ಮೃತ, ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಿದ್ದರು. ನಿನ್ನೆ ಬೆಂಗಳೂರಿನಿಂದ ಹೊನಗನಹಳ್ಳಿಗೆ ಬಂದಿದ್ದರು. ಅಂದು ರಾತ್ರಿ ಉಸಿರಾಟದ ಸಮಸ್ಯೆ ಎದುರಾಗಿ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾರೆ. ಹೀಗಾಗಿ, ಮೃತದೇಹವನ್ನ ತಮ್ಮ ಮೂಲ ನಿವಾಸ ಮುಸುಕನಕೊಪ್ಪಲಿಗೆ ರವಾನಿಸಲು ಅಧಿಕಾರಿಗಳು ಮುಂದಾದರು. ಈ ಮಧ್ಯೆ ಮುಸುಕನಕೊಪ್ಪಲು ಗ್ರಾಮಸ್ಥರು […]

ಜಗಲಿ ಮೇಲೆ ಶವ! ಗ್ರಾಮಸ್ಥರಿಗೆ ಆವರಿಸಿತು ಭೀತಿ, ಆಮೇಲೆ ಫಜೀತಿ
KUSHAL V
| Edited By: |

Updated on:Jul 08, 2020 | 10:28 PM

Share

ಮಂಡ್ಯ: ಕೊರೊನಾದಿಂದ ಜನರ ಜೀವಕ್ಕೆ ಬೆಲೆಯೇ ಇಲ್ಲದಂತಾಗಿದೆ. ಇದಕ್ಕೊಂದು ನಿದರ್ಶನ ಜಿಲ್ಲೆಯ ಮಳವಳ್ಳಿ ತಾಲೂಕಿನ ಹೊನಗನಹಳ್ಳಿಯಲ್ಲಿ ನಡೆದಿದೆ.

ಮೂಲತಃ ಮೈಸೂರಿನ T ನರಸಿಪುರ ತಾಲೂಕಿನ ಮುಸುಕನಕೊಪ್ಪಲು ನಿವಾಸಿಯಾಗಿದ್ದ ಮೃತ, ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಿದ್ದರು. ನಿನ್ನೆ ಬೆಂಗಳೂರಿನಿಂದ ಹೊನಗನಹಳ್ಳಿಗೆ ಬಂದಿದ್ದರು. ಅಂದು ರಾತ್ರಿ ಉಸಿರಾಟದ ಸಮಸ್ಯೆ ಎದುರಾಗಿ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾರೆ.

ಹೀಗಾಗಿ, ಮೃತದೇಹವನ್ನ ತಮ್ಮ ಮೂಲ ನಿವಾಸ ಮುಸುಕನಕೊಪ್ಪಲಿಗೆ ರವಾನಿಸಲು ಅಧಿಕಾರಿಗಳು ಮುಂದಾದರು. ಈ ಮಧ್ಯೆ ಮುಸುಕನಕೊಪ್ಪಲು ಗ್ರಾಮಸ್ಥರು ಶವವನ್ನ ಹಳ್ಳಿಗೆ ಬಿಟ್ಟುಕೊಳ್ಳಲು ಹಿಂದೇಟು ಹಾಕಿದ್ದಾರೆ. ಇದರಿಂದ ಪೇಚಿಗೆ ಸಿಲುಕಿದ ಅಧಿಕಾರಿಗಳು ಕೊನೆಗೆ ವ್ಯಕ್ತಿಯ ಮೃತದೇಹವನ್ನ ಮನೆಯೊಂದರ ಜಗಲಿಯ ಮೇಲೆ ಇರಿಸಿದರು. ಹೀಗಾಗಿ, ಮನೆ ಮುಂದೆ ಶವವನ್ನು ಕಂಡ ಗ್ರಾಮಸ್ಥರಿಗೆ ಗುಂಡಿಗೆ ಬಾಯಿಗೆ ಬಂದಂತಾಯಿತು.

ಕೊನೆಗೆ ಅಂತೂ ಇಂತೂ ಮುಸುಕನಕೊಪ್ಪಲಿನ ಗ್ರಾಮಸ್ಥರ ಮನವೊಲಿಸಲಾಯಿತು. ಊರಿನ ಹೊರಗಡೆ ಅಂತ್ಯ ಸಂಸ್ಕಾರ ಮಾಡಲು ಒಪ್ಪಿಗೆಯೂ ಸಿಕ್ಕಿತು. ಆದರೆ, ಈ ನಡುವೆ ಹೊನಗನಹಳ್ಳಿಯಿಂದ ಮುಸುಕನಕೊಪ್ಪಲಿಗೆ ಶವ ರವಾನಿಸುವ ವೇಳೆ ಅಧಿಕಾರಿಗಳ ಮತ್ತೊಂದು ಯಡವಟ್ಟು ಮಾಡಿದ್ದಾರೆ. ಮೃತದೇಹವನ್ನ ರವಾನಿಸಲು ಆಂಬ್ಯುಲೆನ್ಸ್‌ ಹಾಗೂ ಸಿಬ್ಬಂದಿಯನ್ನು ಕಳಿಸಿಕೊಡಲಿಲ್ಲ.

ಬದಲಿಗೆ, ಕುಟುಂಬಸ್ಥರಿಗೇ ಎರಡು PPE ಕಿಟ್ ನೀಡಿ ನೀವೇ ಶವವನ್ನ ಸಾಗಿಸಿಕೊಳ್ಳಿ ಎಂದು ಹೇಳಿ ಕೈತೊಳೆದುಕೊಂಡುಬಿಟ್ಟರು. ಕೊನೆಗೆ, ಮೃತನ ಕುಟುಂಬದವರೇ ಕಿಟ್ ಹಾಕಿಕೊಂಡು ಖಾಸಗಿ ವಾಹನದಲ್ಲಿ ಶವ ತೆಗೆದುಕೊಂಡು ಮುಸುಕನಕೊಪ್ಪಲಿನತ್ತ ತೆರಳಬೇಕಾಯಿತು.

Published On - 6:10 pm, Wed, 8 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ