AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತಪಟ್ಟು 3 ದಿನ ಕಳೆದರೂ ಸೋಂಕಿತ ಮಹಿಳೆಯ ಮೃತದೇಹಕ್ಕೆ ಸಿಗದ ಮುಕ್ತಿ, ಕಾರಣವೇನು?

ಮಂಡ್ಯ:ಕೊರೊನಾ ಸೋಂಕಿತ ಮಹಿಳೆ ಮೃತಪಟ್ಟು ಮೂರು ದಿನಗಳಾಗಿದ್ದರೂ, ಗ್ರಾಮಸ್ಥರ ವಿರೋಧದಿಂದ ಮಹಿಳೆಯ ಅಂತ್ಯಸಂಸ್ಕಾರ ಮಾಡಲು ಜಾಗವಿಲ್ಲದೆ, ಮೃತದೇಹ ಶವಾಗಾರದಲ್ಲಿಯೇ ಇರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ನೆಲಮಾಕನಹಳ್ಳಿ ಮಹಿಳೆಗೆ ಕೊರೊನಾ ಸೋಂಕು ತಗುಲಿದೆ.ಹೀಗಾಗಿ ಮಹಿಳೆ ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸೋಮವಾರ ಮೃತಪಟ್ಟಿದ್ದಾರೆ. ಹೀಗಾಗಿ ಮಹಿಳೆಯ ಅಂತ್ಯಸಂಸ್ಕಾರ ಮಾಡಲು ಅಧಿಕಾರಿಗಳು ಮಹಿಳೆಯ ಶವವನ್ನು ಗ್ರಾಮಕ್ಕೆ ತಂದಿದ್ದಾರೆ. ಆದರೆ ಗ್ರಾಮಸ್ಥರ ವಿರೋಧದಿಂದಾಗಿ ಮಹಿಳೆಯ ಶವಸಂಸ್ಕಾರವನ್ನು ಬೇರೆಡೆ ಮಾಡಲು […]

ಮೃತಪಟ್ಟು 3 ದಿನ ಕಳೆದರೂ ಸೋಂಕಿತ ಮಹಿಳೆಯ ಮೃತದೇಹಕ್ಕೆ ಸಿಗದ ಮುಕ್ತಿ, ಕಾರಣವೇನು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 12, 2020 | 12:16 PM

Share

ಮಂಡ್ಯ:ಕೊರೊನಾ ಸೋಂಕಿತ ಮಹಿಳೆ ಮೃತಪಟ್ಟು ಮೂರು ದಿನಗಳಾಗಿದ್ದರೂ, ಗ್ರಾಮಸ್ಥರ ವಿರೋಧದಿಂದ ಮಹಿಳೆಯ ಅಂತ್ಯಸಂಸ್ಕಾರ ಮಾಡಲು ಜಾಗವಿಲ್ಲದೆ, ಮೃತದೇಹ ಶವಾಗಾರದಲ್ಲಿಯೇ ಇರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ನೆಲಮಾಕನಹಳ್ಳಿ ಮಹಿಳೆಗೆ ಕೊರೊನಾ ಸೋಂಕು ತಗುಲಿದೆ.ಹೀಗಾಗಿ ಮಹಿಳೆ ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸೋಮವಾರ ಮೃತಪಟ್ಟಿದ್ದಾರೆ. ಹೀಗಾಗಿ ಮಹಿಳೆಯ ಅಂತ್ಯಸಂಸ್ಕಾರ ಮಾಡಲು ಅಧಿಕಾರಿಗಳು ಮಹಿಳೆಯ ಶವವನ್ನು ಗ್ರಾಮಕ್ಕೆ ತಂದಿದ್ದಾರೆ.

ಆದರೆ ಗ್ರಾಮಸ್ಥರ ವಿರೋಧದಿಂದಾಗಿ ಮಹಿಳೆಯ ಶವಸಂಸ್ಕಾರವನ್ನು ಬೇರೆಡೆ ಮಾಡಲು ನಿರ್ಧರಿಸಿದ್ದಾರೆ. ಆದರೆ ಅಲ್ಲೂ ಸಹ ಅಂತ್ಯಸಂಸ್ಕಾರಕ್ಕೆ ವಿರೋಧ ವ್ಯಕ್ತವಾಗಿದೆ. ಹೀಗಾಗಿ ಅಧಿಕಾರಿಗಳು ನಿಗದಿ ಮಾಡಿದ ಮೂರು ಸ್ಥಳದಲ್ಲಿಯೂ ಸ್ಥಳೀಯರ ವಿರೋಧ ವ್ಯಕ್ತವಾಗುತ್ತಿರುವುದರಿಂದ ಮಹಿಳೆಯ ಅಂತ್ಯಕ್ರಿಯೆ ನಡೆಸಲಾಗಿಲ್ಲ.

ಇದರಿಂದ ಅಧಿಕಾರಿಗಳು ಮಹಿಳೆಯ ಮೃತದೇಹವನ್ನು ಶವಗಾರದಲ್ಲಿಯೇ ಇರಿಸುವಂತಹ ಪರಿಸ್ಥಿತಿ ಎದುರಾಗಿದೆ. ಇದರಿಂದ ಮಹಿಳೆಯ ಸಂಬಂಧಿಕರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದು, ಆದಷ್ಟು ಬೇಗ ಅಧಿಕಾರಿಗಳು ಸಮಸ್ಯೆ ಬಗೆಹರಿಸಿ ಅಂತ್ಯಕ್ರಿಯೆ ಮಾಡಬೇಕೆಂದು ವಿನಂತಿಸಿಕೊಂಡಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು