ಮಹಾಮಾರಿಗೆ ವಿಜಯಪುರ ಜಿಲ್ಲೆಯಲ್ಲಿ 4ನೇ ಬಲಿ

ಸಾಧು ಶ್ರೀನಾಥ್​

|

Updated on:May 19, 2020 | 2:13 PM

ವಿಜಯಪುರ: ಮಹಾಮಾರಿ ಕೊರೊನಾಗೆ ಜಿಲ್ಲೆಯಲ್ಲಿ ನಾಲ್ಕನೇ ಬಲಿಯಾಗಿದೆ. ಪೇಶಂಟ್ ನಂಬರ್ 1291 ಎಂದು ಗುರುತಿಸಲಾಗಿರುವ 65 ವರ್ಷದ ಪುರುಷ ಇಂದು ಮಾರಕ ಸೋಂಕಿಗೆ ಬಲಿಯಾಗಿದ್ದಾರೆ. ಈಗಾಗಲೇ ಕಂಟೇನಮೆಂಟ್ ಏರಿಯಾದಲ್ಲಿ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಉಸಿರಾಟ ತೊಂದರೆ ಹಾಗೂ ಹೃದಯ ಸಂಬಂಧಿ ಖಾಯಿಲೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಜಿಲ್ಲಾಸ್ಪತ್ರೆಗೆ ಕರೆ ತರುವ ವೇಳೆ ಮೃತಪಟ್ಟಿದ್ದಾರೆ. ಮೃತನ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ಮೃತನಲ್ಲಿ ಸೋಂಕು‌ ದೃಢಪಟ್ಟಿದೆ. ಇದರಿಂದ ಕಂಟೇನಮೆಂಟ್ ಏರಿಯಾದಲ್ಲಿ ಮತ್ತಷ್ಟು ಭಯದ ವಾತಾವರಣ […]

ಮಹಾಮಾರಿಗೆ ವಿಜಯಪುರ ಜಿಲ್ಲೆಯಲ್ಲಿ 4ನೇ ಬಲಿ

ವಿಜಯಪುರ: ಮಹಾಮಾರಿ ಕೊರೊನಾಗೆ ಜಿಲ್ಲೆಯಲ್ಲಿ ನಾಲ್ಕನೇ ಬಲಿಯಾಗಿದೆ. ಪೇಶಂಟ್ ನಂಬರ್ 1291 ಎಂದು ಗುರುತಿಸಲಾಗಿರುವ 65 ವರ್ಷದ ಪುರುಷ ಇಂದು ಮಾರಕ ಸೋಂಕಿಗೆ ಬಲಿಯಾಗಿದ್ದಾರೆ.

ಈಗಾಗಲೇ ಕಂಟೇನಮೆಂಟ್ ಏರಿಯಾದಲ್ಲಿ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಉಸಿರಾಟ ತೊಂದರೆ ಹಾಗೂ ಹೃದಯ ಸಂಬಂಧಿ ಖಾಯಿಲೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಜಿಲ್ಲಾಸ್ಪತ್ರೆಗೆ ಕರೆ ತರುವ ವೇಳೆ ಮೃತಪಟ್ಟಿದ್ದಾರೆ.

ಮೃತನ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ಮೃತನಲ್ಲಿ ಸೋಂಕು‌ ದೃಢಪಟ್ಟಿದೆ. ಇದರಿಂದ ಕಂಟೇನಮೆಂಟ್ ಏರಿಯಾದಲ್ಲಿ ಮತ್ತಷ್ಟು ಭಯದ ವಾತಾವರಣ ಮೂಡಿದೆ. ಈಗಾಗಲೇ ಜಿಲ್ಲೆಯಲ್ಲಿ ಓರ್ವ ಮಹಿಳೆ ಮತ್ತು ಇಬ್ಬರು ಪುರುಷರು‌ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾಕ್ಕೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada