Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharwad road accident ಟೆಂಪೋಗೆ ಟಿಪ್ಪರ್​ ಡಿಕ್ಕಿ: ಮೃತರ ಸಂಖ್ಯೆ 13ಕ್ಕೆ ಏರಿಕೆ, ಮಾಜಿ ಶಾಸಕರ ಸೊಸೆ ದುರ್ಮರಣ

Dharwad road accident ಟೆಂಪೊ ಟ್ರಾವೆಲರ್​ಗೆ ಟಿಪ್ಪರ್​ ಡಿಕ್ಕಿಯಾಗಿ ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಬಳಿಯ ರಾ.ಹೆ.4ರಲ್ಲಿ ಅಪಘಾತ ಸಂಭವಿಸಿದ್ದು ಸಾವಿನ ಸಂಖ್ಯೆ 13ಕ್ಕೆ ಏರಿದೆ. ಸಂಕ್ರಾಂತಿ ಮುಗಿಸಿ ಇಂದು ಗೋವಾಗೆ ಹೊರಟ್ಟಿದ್ದ ಸ್ನೇಹಿತರು ಬಾರದ ಲೋಕಕ್ಕೆ ಪ್ರಯಾಣಿಸಿದ್ದಾರೆ.

Dharwad road accident ಟೆಂಪೋಗೆ ಟಿಪ್ಪರ್​ ಡಿಕ್ಕಿ: ಮೃತರ ಸಂಖ್ಯೆ 13ಕ್ಕೆ ಏರಿಕೆ, ಮಾಜಿ ಶಾಸಕರ ಸೊಸೆ ದುರ್ಮರಣ
ಟೆಂಪೋ ಟ್ರಾವೆಲರ್​ಗೆ ಟಿಪ್ಪರ್​ ಡಿಕ್ಕಿ (ಸಂಗ್ರಹ ಚಿತ್ರ)
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Feb 06, 2021 | 10:38 AM

ಧಾರವಾಡ: ಬೆಳ್ಳಂಬೆಳಗ್ಗೆಯೇ ವಿಧಿಯು ರಣಕೇಕೆ ಹಾಕಿದೆ. ಟೆಂಪೊ ಟ್ರಾವೆಲರ್​ಗೆ ಟಿಪ್ಪರ್​ ಡಿಕ್ಕಿಯಾಗಿ ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಬಳಿಯ ರಾ. ಹೆ. 4ರಲ್ಲಿ ಅಪಘಾತ ಸಂಭವಿಸಿದ್ದು ಸಾವಿನ ಸಂಖ್ಯೆ 13ಕ್ಕೆ ಏರಿದೆ. ಸಂಕ್ರಾಂತಿ ಮುಗಿಸಿ ಇಂದು ಗೋವಾಗೆ ಹೊರಟಿದ್ದ ಸ್ನೇಹಿತರು ಬಾರದ ಲೋಕಕ್ಕೆ ಪ್ರಯಾಣಿಸಿದ್ದಾರೆ.

ಎಂಸಿಸಿ ಎ ಬ್ಲಾಕ್ ಮತ್ತು ಎಂಸಿಸಿ ಬಿ ಬ್ಲಾಕ್ ಅಪಾರ್ಟ್​ಮೆಂಟ್​ನ ಒಟ್ಟು 16 ಮಂದಿ ಟಿ.ಟಿ.ಯಲ್ಲಿ ಗೋವಾಗೆ ಹೊರಟ್ಟಿದ್ದರು. ಈ ಪೈಕಿ 14 ಮಂದಿ ಮಹಿಳೆಯರು ಮತ್ತು ಒಬ್ಬ ಡೈವರ್ ಹಾಗೂ ಕ್ಲೀನರ್ ಇದ್ರು. ಮಹಿಳೆಯರೆಲ್ಲರೂ ದಾವಣಗೆರೆ ಸೆಂಟ್ ಪೌಲ್ಸ್ ಕಾನ್ವೆಂಟ್​ನ ಬಂದೇ ಬ್ಯಾಚ್​ನ ಹಳೆ ವಿದ್ಯಾರ್ಥಿಗಳು. ಎಲ್ಲರೂ ಒಟ್ಟಿಗೆ ಸೇರಿ ಗೋವಾಗೆ ಹೋಗಿ ಎಂಜಾಯ್ ಮಾಡೋಣಾ ಎಂದು ಪ್ಲಾನ್ ಮಾಡಿಕೊಂಡಿದ್ರು. ಆದ್ರೆ ವಿಧಿಯಾಟ ಬೇರೆನೇ ಇತ್ತು. ಟೆಂಪೊ ಟ್ರಾವೆಲರ್​ಗೆ ಟಿಪ್ಪರ್​ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 13 ಜನ ಮೃತಪಟ್ಟಿದ್ದಾರೆ.

ಪೂರ್ಣಿಮಾ, ವೀಣಾ, ಆಶಾ ಜಗದೀಶ್, ಮಾನಸಿ, ಪರಂಜ್ಯೋತಿ, ರಾಜೇಶ್ವರಿ ಶಿವಕುಮಾರ್, ಶಕುಂತಲಾ, ಉಷಾ, ವೇದಾ, ನಿರ್ಮಲಾ, ಮಂಜುಳಾ ನಿಲೇಶ್, ಶ್ರೀನಿವಾಸ್, ಪ್ರೀತಿ ರವಿಕುಮಾರ್ ಸೇರಿ ಒಟ್ಟು 11 ಮಹಿಳೆಯರು ಹಾಗೂ ಇಬ್ಬರು ಪುರುಷರು ಮೃತಪಟ್ಟಿದ್ದಾರೆ. ಇನ್ನು ಈ ಅಪಘಾತದಲ್ಲಿ ತಾಯಿ ಪ್ರೀತಿಯವರ ಜೊತೆ ತೆರಳಿದ್ದ ಪುತ್ರಿಯೂ ಮೃತಪಟ್ಟಿದ್ದಾರೆ.

ರಸ್ತೆ ಅಪಘಾತದಲ್ಲಿ ಮಾಜಿ ಶಾಸಕರ ಸೊಸೆ ದುರ್ಮರಣ ಮಾಜಿ ಶಾಸಕ ಗುರುಸಿದ್ದನಗೌಡರ ಸೊಸೆ ಹಾಗೂ ಆರೈಕೆ ಆಸ್ಪತ್ರೆ ಡಾ. ರವಿಕುಮಾರ ಪತ್ನಿ ಪ್ರೀತಿ ರವಿಕುಮಾರ, ಸ್ತ್ರೀ ರೋಗ ತಜ್ಞ ಡಾ.ವೀಣಾ ಪ್ರಕಾಶ, ಎಸ್.ಎಸ್ ಬಡಾವಣೆಯ ಮಾನಸಿ ಹಾಗೂ ಅವರ ಪುತ್ರಿ ರಶ್ಮಿತಾ ಹಾಗೂ ಸಿದ್ದವೀರಪ್ಪ ಬಡಾವಣೆ ವರ್ಷಿತಾ, ದಾವಣಗೆರೆ ಬಾಲಾಜಿ ರೈಸ್ ಮಿಲ್ ಮಾಲೀಕರಾದ ರಜನಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಅಪಘಾತಕ್ಕೆ ಮೋದಿ ಸಂತಾಪ ಇಟ್ಟಿಗಟ್ಟಿ ಬಳಿ ನಡೆದ ಅಪಘಾತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಅಪಘಾತ ಅತ್ಯಂತ ದುರಂತವಾದ ಘಟನೆ. ಸಾವನ್ನಪ್ಪಿದವರಲ್ಲಿ ಬಹುತೇಕರು ಡಾಕ್ಟರ್​ಗಳೇ ಇದ್ದಾರೆ. 13 ಜನರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ರು.

ಟೆಂಪೋಗೆ ಟಿಪ್ಪರ್​ ಡಿಕ್ಕಿ: ಗೋವಾ ಪ್ರವಾಸಕ್ಕೆ ತೆರಳ್ತಿದ್ದ 11 ಮಂದಿ ಹಳೆ ವಿದ್ಯಾರ್ಥಿಗಳ ದುರ್ಮರಣ

Published On - 1:46 pm, Fri, 15 January 21

Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !