AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharwad road accident ಟೆಂಪೋಗೆ ಟಿಪ್ಪರ್​ ಡಿಕ್ಕಿ: ಮೃತರ ಸಂಖ್ಯೆ 13ಕ್ಕೆ ಏರಿಕೆ, ಮಾಜಿ ಶಾಸಕರ ಸೊಸೆ ದುರ್ಮರಣ

Dharwad road accident ಟೆಂಪೊ ಟ್ರಾವೆಲರ್​ಗೆ ಟಿಪ್ಪರ್​ ಡಿಕ್ಕಿಯಾಗಿ ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಬಳಿಯ ರಾ.ಹೆ.4ರಲ್ಲಿ ಅಪಘಾತ ಸಂಭವಿಸಿದ್ದು ಸಾವಿನ ಸಂಖ್ಯೆ 13ಕ್ಕೆ ಏರಿದೆ. ಸಂಕ್ರಾಂತಿ ಮುಗಿಸಿ ಇಂದು ಗೋವಾಗೆ ಹೊರಟ್ಟಿದ್ದ ಸ್ನೇಹಿತರು ಬಾರದ ಲೋಕಕ್ಕೆ ಪ್ರಯಾಣಿಸಿದ್ದಾರೆ.

Dharwad road accident ಟೆಂಪೋಗೆ ಟಿಪ್ಪರ್​ ಡಿಕ್ಕಿ: ಮೃತರ ಸಂಖ್ಯೆ 13ಕ್ಕೆ ಏರಿಕೆ, ಮಾಜಿ ಶಾಸಕರ ಸೊಸೆ ದುರ್ಮರಣ
ಟೆಂಪೋ ಟ್ರಾವೆಲರ್​ಗೆ ಟಿಪ್ಪರ್​ ಡಿಕ್ಕಿ (ಸಂಗ್ರಹ ಚಿತ್ರ)
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Feb 06, 2021 | 10:38 AM

Share

ಧಾರವಾಡ: ಬೆಳ್ಳಂಬೆಳಗ್ಗೆಯೇ ವಿಧಿಯು ರಣಕೇಕೆ ಹಾಕಿದೆ. ಟೆಂಪೊ ಟ್ರಾವೆಲರ್​ಗೆ ಟಿಪ್ಪರ್​ ಡಿಕ್ಕಿಯಾಗಿ ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಬಳಿಯ ರಾ. ಹೆ. 4ರಲ್ಲಿ ಅಪಘಾತ ಸಂಭವಿಸಿದ್ದು ಸಾವಿನ ಸಂಖ್ಯೆ 13ಕ್ಕೆ ಏರಿದೆ. ಸಂಕ್ರಾಂತಿ ಮುಗಿಸಿ ಇಂದು ಗೋವಾಗೆ ಹೊರಟಿದ್ದ ಸ್ನೇಹಿತರು ಬಾರದ ಲೋಕಕ್ಕೆ ಪ್ರಯಾಣಿಸಿದ್ದಾರೆ.

ಎಂಸಿಸಿ ಎ ಬ್ಲಾಕ್ ಮತ್ತು ಎಂಸಿಸಿ ಬಿ ಬ್ಲಾಕ್ ಅಪಾರ್ಟ್​ಮೆಂಟ್​ನ ಒಟ್ಟು 16 ಮಂದಿ ಟಿ.ಟಿ.ಯಲ್ಲಿ ಗೋವಾಗೆ ಹೊರಟ್ಟಿದ್ದರು. ಈ ಪೈಕಿ 14 ಮಂದಿ ಮಹಿಳೆಯರು ಮತ್ತು ಒಬ್ಬ ಡೈವರ್ ಹಾಗೂ ಕ್ಲೀನರ್ ಇದ್ರು. ಮಹಿಳೆಯರೆಲ್ಲರೂ ದಾವಣಗೆರೆ ಸೆಂಟ್ ಪೌಲ್ಸ್ ಕಾನ್ವೆಂಟ್​ನ ಬಂದೇ ಬ್ಯಾಚ್​ನ ಹಳೆ ವಿದ್ಯಾರ್ಥಿಗಳು. ಎಲ್ಲರೂ ಒಟ್ಟಿಗೆ ಸೇರಿ ಗೋವಾಗೆ ಹೋಗಿ ಎಂಜಾಯ್ ಮಾಡೋಣಾ ಎಂದು ಪ್ಲಾನ್ ಮಾಡಿಕೊಂಡಿದ್ರು. ಆದ್ರೆ ವಿಧಿಯಾಟ ಬೇರೆನೇ ಇತ್ತು. ಟೆಂಪೊ ಟ್ರಾವೆಲರ್​ಗೆ ಟಿಪ್ಪರ್​ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 13 ಜನ ಮೃತಪಟ್ಟಿದ್ದಾರೆ.

ಪೂರ್ಣಿಮಾ, ವೀಣಾ, ಆಶಾ ಜಗದೀಶ್, ಮಾನಸಿ, ಪರಂಜ್ಯೋತಿ, ರಾಜೇಶ್ವರಿ ಶಿವಕುಮಾರ್, ಶಕುಂತಲಾ, ಉಷಾ, ವೇದಾ, ನಿರ್ಮಲಾ, ಮಂಜುಳಾ ನಿಲೇಶ್, ಶ್ರೀನಿವಾಸ್, ಪ್ರೀತಿ ರವಿಕುಮಾರ್ ಸೇರಿ ಒಟ್ಟು 11 ಮಹಿಳೆಯರು ಹಾಗೂ ಇಬ್ಬರು ಪುರುಷರು ಮೃತಪಟ್ಟಿದ್ದಾರೆ. ಇನ್ನು ಈ ಅಪಘಾತದಲ್ಲಿ ತಾಯಿ ಪ್ರೀತಿಯವರ ಜೊತೆ ತೆರಳಿದ್ದ ಪುತ್ರಿಯೂ ಮೃತಪಟ್ಟಿದ್ದಾರೆ.

ರಸ್ತೆ ಅಪಘಾತದಲ್ಲಿ ಮಾಜಿ ಶಾಸಕರ ಸೊಸೆ ದುರ್ಮರಣ ಮಾಜಿ ಶಾಸಕ ಗುರುಸಿದ್ದನಗೌಡರ ಸೊಸೆ ಹಾಗೂ ಆರೈಕೆ ಆಸ್ಪತ್ರೆ ಡಾ. ರವಿಕುಮಾರ ಪತ್ನಿ ಪ್ರೀತಿ ರವಿಕುಮಾರ, ಸ್ತ್ರೀ ರೋಗ ತಜ್ಞ ಡಾ.ವೀಣಾ ಪ್ರಕಾಶ, ಎಸ್.ಎಸ್ ಬಡಾವಣೆಯ ಮಾನಸಿ ಹಾಗೂ ಅವರ ಪುತ್ರಿ ರಶ್ಮಿತಾ ಹಾಗೂ ಸಿದ್ದವೀರಪ್ಪ ಬಡಾವಣೆ ವರ್ಷಿತಾ, ದಾವಣಗೆರೆ ಬಾಲಾಜಿ ರೈಸ್ ಮಿಲ್ ಮಾಲೀಕರಾದ ರಜನಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಅಪಘಾತಕ್ಕೆ ಮೋದಿ ಸಂತಾಪ ಇಟ್ಟಿಗಟ್ಟಿ ಬಳಿ ನಡೆದ ಅಪಘಾತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಅಪಘಾತ ಅತ್ಯಂತ ದುರಂತವಾದ ಘಟನೆ. ಸಾವನ್ನಪ್ಪಿದವರಲ್ಲಿ ಬಹುತೇಕರು ಡಾಕ್ಟರ್​ಗಳೇ ಇದ್ದಾರೆ. 13 ಜನರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ರು.

ಟೆಂಪೋಗೆ ಟಿಪ್ಪರ್​ ಡಿಕ್ಕಿ: ಗೋವಾ ಪ್ರವಾಸಕ್ಕೆ ತೆರಳ್ತಿದ್ದ 11 ಮಂದಿ ಹಳೆ ವಿದ್ಯಾರ್ಥಿಗಳ ದುರ್ಮರಣ

Published On - 1:46 pm, Fri, 15 January 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ