AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್​ ಜತೆ 75 ದಿನ ಕಳೆಯಲಿದ್ದಾರೆ ದೀಪಿಕಾ ಪಡುಕೋಣೆ; ಕಾರಣವೇನು ಗೊತ್ತಾ?

ನಾಗ್​ ಅಶ್ವಿನ್​ ನಿರ್ದೇಶನ ಮಾಡುತ್ತಿರುವ ಚಿತ್ರಕ್ಕೆ ಪ್ರಭಾಸ್​ ನಾಯಕ. ದೀಪಿಕಾ ಚಿತ್ರದ ನಾಯಕಿ. ಅಮಿತಾಭ್​ ಬಚ್ಚನ್​ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ.

ಪ್ರಭಾಸ್​ ಜತೆ 75 ದಿನ ಕಳೆಯಲಿದ್ದಾರೆ ದೀಪಿಕಾ ಪಡುಕೋಣೆ; ಕಾರಣವೇನು ಗೊತ್ತಾ?
ಪ್ರಭಾಸ್​-ದೀಪಿಕಾ
ರಾಜೇಶ್ ದುಗ್ಗುಮನೆ
|

Updated on: Mar 11, 2021 | 7:38 PM

Share

ಬಾಲಿವುಡ್​ ನಟಿಯರು ದಕ್ಷಿಣ ಭಾರತಕ್ಕೆ ಕಾಲಿಡುವ ಟ್ರೆಂಡ್​ ಆರಂಭವಾಗಿದೆ. ಪ್ರಭಾಸ್​ ನಟನೆಯ ಸಾಹೋ ಸಿನಿಮಾ ಮೂಲಕ ಶ್ರದ್ಧಾ ಕಪೂರ್​ ಟಾಲಿವುಡ್​ಗೆ ಪರಿಚಯಗೊಂಡಿದ್ದರು. ಆರ್​ಆರ್​ಆರ್​ ಚಿತ್ರದ ಮೂಲಕ ಆಲಿಯಾ ಭಟ್​ ಕೂಡ ದಕ್ಷಿಣದತ್ತ ಮುಖ ಮಾಡಿದ್ದಾರೆ. ಈ ಸಾಲಿಗೆ ಮತ್ತೊಂದು ಸೇರ್ಪಡೆ ದೀಪಿಕಾ ಪಡುಕೋಣೆ. ಪ್ರಭಾಸ್ ನಟನೆಯ ಚಿತ್ರಕ್ಕೆ ಅವರೇ ನಾಯಕಿ. ವಿಶೇಷ ಎಂದರೆ, ಈ ಚಿತ್ರಕ್ಕಾಗಿ ದೀಪಿಕಾ ದೊಡ್ಡ ಕಾಲ್​ಶೀಟ್​ ಅನ್ನೇ ಕೊಟ್ಟಿದ್ದಾರೆ.

ನಾಗ್​ ಅಶ್ವಿನ್​ ನಿರ್ದೇಶನ ಮಾಡುತ್ತಿರುವ ಚಿತ್ರಕ್ಕೆ ಪ್ರಭಾಸ್​ ನಾಯಕ. ದೀಪಿಕಾ ಚಿತ್ರದ ನಾಯಕಿ. ಅಮಿತಾಭ್​ ಬಚ್ಚನ್​ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಈ ಚಿತ್ರದಲ್ಲಿ ನಟಿಸೋಕೆ ದೀಪಿಕಾ ಈಗ 75 ದಿನಗಳ ಕಾಲ್​ ಶೀಟ್​ ನೀಡಿದ್ದಾರಂತೆ.

ಶಾರುಖ್​ ಖಾನ್​ ನಟನೆಯ ಪಠಾಣ್​ ಚಿತ್ರದಲ್ಲಿ ದೀಪಿಕಾ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್​ ಪೂರ್ಣಗೊಳ್ಳೋಕೆ ಇನ್ನೂ ಸಾಕಷ್ಟು ಸಮಯ ಹಿಡಿಯಲಿದೆ. ಪ್ರಭಾಸ್​ ಸಲಾರ್ ಹಾಗೂ ಆದಿ ಪುರುಷ್​ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಇದ್ದು, ಇದರ ಕೆಲಸ ಜುಲೈ ವೇಳೆಗೆ ಪೂರ್ಣಗೊಳ್ಳಲಿದೆ. ಇದಾದ ನಂತರ ಇಬ್ಬರೂ ನಾಗ್​ ಅಶ್ವಿನ್​ ಚಿತ್ರದ ಶೂಟಿಂಗ್​ನಲ್ಲಿ ತೊಡಗಿಕೊಳ್ಳಲಿದ್ದಾರೆ. ಜುಲೈನಲ್ಲಿ ದೀಪಿಕಾ ಈ ಸಿನಿಮಾದ ಸೆಟ್​ ಸೇರಿಕೊಂಡರೆ 75 ದಿನಗಳ ಕಾಲ ಸಂಪೂರ್ಣವಾಗಿ ಇದೇ ಚಿತ್ರಕ್ಕಾಗಿ ಮುಡಿಪಿಡಲಿದ್ದಾರಂತೆ.

ನಾಗ್​ ಅಶ್ವಿನ್​-ಪ್ರಭಾಸ್​ ಸಿನಿಮಾ 2021ರ ಮಧ್ಯ ಅಥವಾ ಅಂತ್ಯಕ್ಕೆ ತೆರೆಗೆ ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಸಿನಿಮಾದಲ್ಲಿ ವಿಎಫ್​ಎಕ್ಸ್​ ಕೆಲಸಗಳು ತುಂಬಾನೇ ಇದ್ದು, ಹೀಗಾಗಿ, ಸಿನಿಮಾ ಶೂಟಿಂಗ್​​ ಬೇಗ ಪೂರ್ಣಗೊಂಡರೂ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಿಗೆ ಹೆಚ್ಚು ಸಮಯ ಹಿಡಿಯಲಿದೆ. ದೊಡ್ಡ ದೊಡ್ಡ ವಿಎಫ್​ಎಕ್ಸ್​ ಸಂಸ್ಥೆಗಳಿಗೆ ವಿಎಫ್​ಎಕ್ಸ್ ಕೆಲಸ ಮಾಡಿದವರು ಈ ಚಿತ್ರಕ್ಕೂ ಕೆಲಸ ಮಾಡುವ ಸಾಧ್ಯತೆ ಇದೆ. ಈ ಎಲ್ಲಾ ಕಾರಣಗಳಿಗೆ ಈ ಸಿನಿಮಾ ರಿಲೀಸ್​ ಆಗೋದು ಕೊಂಚ ವಿಳಂಬವಾಗಲಿದೆ.

ಇದನ್ನೂ ಓದಿ: ಹೃತಿಕ್​ ಜೊತೆ ರೊಮ್ಯಾನ್ಸ್​ ಮಾಡಲಿದ್ದಾರೆ ದೀಪಿಕಾ ಪಡುಕೋಣೆ: ಈ ಚಿತ್ರಕ್ಕೆ ನಿರ್ದೇಶಕರಾರು ಗೊತ್ತಾ?

Salaar Movie: ಬಜೆಟ್​ ವಿಚಾರದಲ್ಲಿ ಭಾರೀ ಟ್ರೋಲ್​ ಆದ ಪ್ರಭಾಸ್​ ನಟನೆಯ ಸಲಾರ್​ ಸಿನಿಮಾ

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!