AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್​ ಜತೆ 75 ದಿನ ಕಳೆಯಲಿದ್ದಾರೆ ದೀಪಿಕಾ ಪಡುಕೋಣೆ; ಕಾರಣವೇನು ಗೊತ್ತಾ?

ನಾಗ್​ ಅಶ್ವಿನ್​ ನಿರ್ದೇಶನ ಮಾಡುತ್ತಿರುವ ಚಿತ್ರಕ್ಕೆ ಪ್ರಭಾಸ್​ ನಾಯಕ. ದೀಪಿಕಾ ಚಿತ್ರದ ನಾಯಕಿ. ಅಮಿತಾಭ್​ ಬಚ್ಚನ್​ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ.

ಪ್ರಭಾಸ್​ ಜತೆ 75 ದಿನ ಕಳೆಯಲಿದ್ದಾರೆ ದೀಪಿಕಾ ಪಡುಕೋಣೆ; ಕಾರಣವೇನು ಗೊತ್ತಾ?
ಪ್ರಭಾಸ್​-ದೀಪಿಕಾ
ರಾಜೇಶ್ ದುಗ್ಗುಮನೆ
|

Updated on: Mar 11, 2021 | 7:38 PM

Share

ಬಾಲಿವುಡ್​ ನಟಿಯರು ದಕ್ಷಿಣ ಭಾರತಕ್ಕೆ ಕಾಲಿಡುವ ಟ್ರೆಂಡ್​ ಆರಂಭವಾಗಿದೆ. ಪ್ರಭಾಸ್​ ನಟನೆಯ ಸಾಹೋ ಸಿನಿಮಾ ಮೂಲಕ ಶ್ರದ್ಧಾ ಕಪೂರ್​ ಟಾಲಿವುಡ್​ಗೆ ಪರಿಚಯಗೊಂಡಿದ್ದರು. ಆರ್​ಆರ್​ಆರ್​ ಚಿತ್ರದ ಮೂಲಕ ಆಲಿಯಾ ಭಟ್​ ಕೂಡ ದಕ್ಷಿಣದತ್ತ ಮುಖ ಮಾಡಿದ್ದಾರೆ. ಈ ಸಾಲಿಗೆ ಮತ್ತೊಂದು ಸೇರ್ಪಡೆ ದೀಪಿಕಾ ಪಡುಕೋಣೆ. ಪ್ರಭಾಸ್ ನಟನೆಯ ಚಿತ್ರಕ್ಕೆ ಅವರೇ ನಾಯಕಿ. ವಿಶೇಷ ಎಂದರೆ, ಈ ಚಿತ್ರಕ್ಕಾಗಿ ದೀಪಿಕಾ ದೊಡ್ಡ ಕಾಲ್​ಶೀಟ್​ ಅನ್ನೇ ಕೊಟ್ಟಿದ್ದಾರೆ.

ನಾಗ್​ ಅಶ್ವಿನ್​ ನಿರ್ದೇಶನ ಮಾಡುತ್ತಿರುವ ಚಿತ್ರಕ್ಕೆ ಪ್ರಭಾಸ್​ ನಾಯಕ. ದೀಪಿಕಾ ಚಿತ್ರದ ನಾಯಕಿ. ಅಮಿತಾಭ್​ ಬಚ್ಚನ್​ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಈ ಚಿತ್ರದಲ್ಲಿ ನಟಿಸೋಕೆ ದೀಪಿಕಾ ಈಗ 75 ದಿನಗಳ ಕಾಲ್​ ಶೀಟ್​ ನೀಡಿದ್ದಾರಂತೆ.

ಶಾರುಖ್​ ಖಾನ್​ ನಟನೆಯ ಪಠಾಣ್​ ಚಿತ್ರದಲ್ಲಿ ದೀಪಿಕಾ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್​ ಪೂರ್ಣಗೊಳ್ಳೋಕೆ ಇನ್ನೂ ಸಾಕಷ್ಟು ಸಮಯ ಹಿಡಿಯಲಿದೆ. ಪ್ರಭಾಸ್​ ಸಲಾರ್ ಹಾಗೂ ಆದಿ ಪುರುಷ್​ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಇದ್ದು, ಇದರ ಕೆಲಸ ಜುಲೈ ವೇಳೆಗೆ ಪೂರ್ಣಗೊಳ್ಳಲಿದೆ. ಇದಾದ ನಂತರ ಇಬ್ಬರೂ ನಾಗ್​ ಅಶ್ವಿನ್​ ಚಿತ್ರದ ಶೂಟಿಂಗ್​ನಲ್ಲಿ ತೊಡಗಿಕೊಳ್ಳಲಿದ್ದಾರೆ. ಜುಲೈನಲ್ಲಿ ದೀಪಿಕಾ ಈ ಸಿನಿಮಾದ ಸೆಟ್​ ಸೇರಿಕೊಂಡರೆ 75 ದಿನಗಳ ಕಾಲ ಸಂಪೂರ್ಣವಾಗಿ ಇದೇ ಚಿತ್ರಕ್ಕಾಗಿ ಮುಡಿಪಿಡಲಿದ್ದಾರಂತೆ.

ನಾಗ್​ ಅಶ್ವಿನ್​-ಪ್ರಭಾಸ್​ ಸಿನಿಮಾ 2021ರ ಮಧ್ಯ ಅಥವಾ ಅಂತ್ಯಕ್ಕೆ ತೆರೆಗೆ ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಸಿನಿಮಾದಲ್ಲಿ ವಿಎಫ್​ಎಕ್ಸ್​ ಕೆಲಸಗಳು ತುಂಬಾನೇ ಇದ್ದು, ಹೀಗಾಗಿ, ಸಿನಿಮಾ ಶೂಟಿಂಗ್​​ ಬೇಗ ಪೂರ್ಣಗೊಂಡರೂ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಿಗೆ ಹೆಚ್ಚು ಸಮಯ ಹಿಡಿಯಲಿದೆ. ದೊಡ್ಡ ದೊಡ್ಡ ವಿಎಫ್​ಎಕ್ಸ್​ ಸಂಸ್ಥೆಗಳಿಗೆ ವಿಎಫ್​ಎಕ್ಸ್ ಕೆಲಸ ಮಾಡಿದವರು ಈ ಚಿತ್ರಕ್ಕೂ ಕೆಲಸ ಮಾಡುವ ಸಾಧ್ಯತೆ ಇದೆ. ಈ ಎಲ್ಲಾ ಕಾರಣಗಳಿಗೆ ಈ ಸಿನಿಮಾ ರಿಲೀಸ್​ ಆಗೋದು ಕೊಂಚ ವಿಳಂಬವಾಗಲಿದೆ.

ಇದನ್ನೂ ಓದಿ: ಹೃತಿಕ್​ ಜೊತೆ ರೊಮ್ಯಾನ್ಸ್​ ಮಾಡಲಿದ್ದಾರೆ ದೀಪಿಕಾ ಪಡುಕೋಣೆ: ಈ ಚಿತ್ರಕ್ಕೆ ನಿರ್ದೇಶಕರಾರು ಗೊತ್ತಾ?

Salaar Movie: ಬಜೆಟ್​ ವಿಚಾರದಲ್ಲಿ ಭಾರೀ ಟ್ರೋಲ್​ ಆದ ಪ್ರಭಾಸ್​ ನಟನೆಯ ಸಲಾರ್​ ಸಿನಿಮಾ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ