AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೂನಿವರ್ಸಿಟಿ ರ‍್ಯಾಂಕ್‌ ವಿದ್ಯಾರ್ಥಿಗಳ ಪರದಾಟ.. ಕಣ್ತೆರೆದು ನೋಡಬಾರದೇ ಸರ್ಕಾರ!?

ಬೆಳಗಾವಿ: ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ನಡೆಯಬೇಕಿದ್ದ ಘಟಿಕೋತ್ಸವವನ್ನ ಕೊರೊನಾ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಆದ್ರೆ ಹೀಗೆ ಘಟಿಕೋತ್ಸವ ಮುಂದೂಡಿದ ಪರಿಣಾಮ ನೂರಾರು ರ‍್ಯಾಂಕ್‌ ವಿದ್ಯಾರ್ಥಿಗಳು ತಮಗೆ ಬರಬೇಕಿದ್ದ ಪ್ರೋತ್ಸಾಹ ಧನ ಸಿಗದೆ ಒದ್ದಾಡಬೇಕಾದ ಪರಿಸ್ಥಿತಿ ಬಂದಿದೆ. ಹೌದು ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯಿಂದ ಸ್ನಾತಕೋತ್ತರ ಪದವಿಯಲ್ಲಿ 1ರಿಂದ 3ನೇ ರ‍್ಯಾಂಕ್‌ ಪಡೆದ 300ಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಗೆ ನೀಡಲಾಗುವ ಪ್ರೋತ್ಸಾಹ ಧನಕ್ಕೆ ಕೊರೊನಾ ವೈರಸ್ ಕಂಟಕವಾಗಿದೆ. ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ನಡೆಯಬೇಕಿದ್ದ ಘಟಿಕೋತ್ಸವವನ್ನ ಕೊರೊನಾ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಇದರಿಂದಾಗಿ […]

ಯೂನಿವರ್ಸಿಟಿ ರ‍್ಯಾಂಕ್‌ ವಿದ್ಯಾರ್ಥಿಗಳ ಪರದಾಟ.. ಕಣ್ತೆರೆದು ನೋಡಬಾರದೇ ಸರ್ಕಾರ!?
Guru
| Edited By: |

Updated on:Jul 10, 2020 | 10:39 PM

Share

ಬೆಳಗಾವಿ: ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ನಡೆಯಬೇಕಿದ್ದ ಘಟಿಕೋತ್ಸವವನ್ನ ಕೊರೊನಾ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಆದ್ರೆ ಹೀಗೆ ಘಟಿಕೋತ್ಸವ ಮುಂದೂಡಿದ ಪರಿಣಾಮ ನೂರಾರು ರ‍್ಯಾಂಕ್‌ ವಿದ್ಯಾರ್ಥಿಗಳು ತಮಗೆ ಬರಬೇಕಿದ್ದ ಪ್ರೋತ್ಸಾಹ ಧನ ಸಿಗದೆ ಒದ್ದಾಡಬೇಕಾದ ಪರಿಸ್ಥಿತಿ ಬಂದಿದೆ.

ಹೌದು ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯಿಂದ ಸ್ನಾತಕೋತ್ತರ ಪದವಿಯಲ್ಲಿ 1ರಿಂದ 3ನೇ ರ‍್ಯಾಂಕ್‌ ಪಡೆದ 300ಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಗೆ ನೀಡಲಾಗುವ ಪ್ರೋತ್ಸಾಹ ಧನಕ್ಕೆ ಕೊರೊನಾ ವೈರಸ್ ಕಂಟಕವಾಗಿದೆ. ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ನಡೆಯಬೇಕಿದ್ದ ಘಟಿಕೋತ್ಸವವನ್ನ ಕೊರೊನಾ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಇದರಿಂದಾಗಿ ಬಡ ಮತ್ತು ಗ್ರಾಮೀಣ ಭಾಗದ ಸ್ನಾತಕೋತ್ತರ ಪದವಿ ಮುಗಿಸಿದ ರ‍್ಯಾಂಕ್‌ ವಿದ್ಯಾರ್ಥಿಗಳು ಮುಂದಿನ ಶಿಕ್ಷಣ ಮುಂದುವರಿಸಲು ಸಾಧ್ಯವಾಗದೇ ತೀವ್ರ ತೊಂದರೆ ಎದುರಿಸುತ್ತಿದ್ದಾರೆ.

ಟಾಪ್‌ ರ‍್ಯಾಂಕ್‌ ವಿದ್ಯಾರ್ಥಿಗಳಿಗೆ ನೀಡುವ ಪ್ರೋತ್ಸಾಹ ಧನ ಇನ್ನೂ ನೀಡಿಲ್ಲ ವಿವಿಗಳಲ್ಲಿ ಒಂದರಿಂದ ಮೂರನೆ ರ‍್ಯಾಂಕ್‌ ಪಡೆದ ಪರಿಶಿಷ್ಟ ಜಾತಿಯ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 50 ಸಾವಿರ ಮೊತ್ತದ ಪ್ರೋತ್ಸಾಹ ಧನ ನೀಡಲಾಗುತ್ತದೆ. ಆದ್ರೆ ಈ ಬಾರಿ ಬೆಳಗಾವಿಯ ಚೆನ್ನಮ್ಮ ವಿಶ್ವವಿದ್ಯಾಲಯ, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಮೈಸೂರು ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದ ವಿವಿಧ ವಿವಿಗಳಲ್ಲಿ ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಿಗಬೇಕಾಗಿದ್ದ ಪ್ರೋತ್ಸಾಹ ಧನ ಇನ್ನೂ ಸಿಕ್ಕಿಲ್ಲ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರ್ಯಾಯ ವ್ಯವಸ್ಥೆ ಮಾಡಬೇಕಿದ್ದ ವಿಶ್ವವಿದ್ಯಾಲಯಗಳು, ಕೊರೊನಾ ವೈರಸ್ ನೆಪವೊಡ್ಡಿ ಪ್ರೋತ್ಸಾಹ ಧನವನ್ನ ನೀಡುತ್ತಿಲ್ಲ.

ಸಮಾಜ ಕಲ್ಯಾಣ ಇಲಾಖೆಯ ತಗಾದೆ ಈಗಾಗಲೇ ಪ್ರೋತ್ಸಾಹ ಧನಕ್ಕೆ ಅರ್ಹರಾದ ವಿದ್ಯಾರ್ಥಿಗಳ ಮನೆಗಳಿಗೆ 50 ಸಾವಿರ ರೂ. ಮೊತ್ತದ ಪ್ರೋತ್ಸಾಹ ಧನದ ಪತ್ರಗಳನ್ನು ಕಳುಹಿಸಲಾಗಿದೆ. ಘಟಿಕೋತ್ಸವದಲ್ಲಿ ನೀಡಲಾಗುವ ರ‍್ಯಾಂಕ್‌ ಪ್ರಮಾಣ ಪತ್ರವನ್ನು ನೀಡಿದ್ರೆ ಮಾತ್ರ ಹಣ ಮಂಜೂರು ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹೇಳುತ್ತಿದ್ದಾರೆ. ಇದರಿಂದಾಗಿ ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲ ಎಂಬಂತಾಗಿದೆ ವಿದ್ಯಾರ್ಥಿಗಳ ಪರಿಸ್ಥಿತಿ.

ತೊಂದರೆಯಲ್ಲಿ ವಿದ್ಯಾರ್ಥಿಗಳು ಪ್ರೋತ್ಸಾಹ ಧನ ನೀಡಲು ವಿಶ್ವವಿದ್ಯಾಲಯಗಳ ಘಟಿಕೋತ್ಸವದಲ್ಲಿ ನೀಡುವ ಸ್ನಾತಕೋತ್ತರ ಪದವಿ ರ‍್ಯಾಂಕ್‌ ಪ್ರಮಾಣ ಪತ್ರ ಕಡ್ಡಾಯ. ಆದ್ರೇ ಇದೀಗ ಕೊರೊನಾ ಹಿನ್ನೆಲೆಯಲ್ಲಿ ಘಟಿಕೋತ್ಸವ ಮಾಡುವ ಸ್ಥಿತಿಯಲ್ಲಿ ವಿವಿಗಳು ಇಲ್ಲ. ಈ ಕಾರಣಕ್ಕೆ ಸದ್ಯದ ನಿಯಮಾವಳಿಗಳನ್ನು ಬದಿಗೊತ್ತಿ ರ‍್ಯಾಂಕ್‌ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುವ ಕೆಲಸವನ್ನ ಸರ್ಕಾರ ಮತ್ತು ಇಲಾಖೆ ಮಾಡಬೇಕಿದೆ. ಇಲ್ಲದಿದ್ರೆ ಹೆಚ್ಚಿನ ವ್ಯಾಸಂಗ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡುವ ಬಡ ವಿದ್ಯಾರ್ಥಿಗಳಿಗೆ ಕಷ್ಟವಾಗಲಿದೆ ಅನ್ನೋದು ಬಹುತೇಕ ವಿದ್ಯಾರ್ಥಿಗಳ ಅಳಲು. -ಸಹದೇವ ಮಾನೆ

Published On - 8:14 pm, Fri, 10 July 20

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!