AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಬ್ಲಿಘಿಗಳ ಸಂಗ: ಮಳವಳ್ಳಿಯಲ್ಲಿ ಇಬ್ಬರಿಗೆ ಕೊರೊನಾ ಸೋಂಕು ದೃಢ

ಮಂಡ್ಯ: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ದೆಹಲಿಯ ಅನಾಹುತಕಾರಿ ತಬ್ಲಿಘಿಗಳ ಸಂಪರ್ಕದಲ್ಲಿದ್ದ ಇಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಮಂಡ್ಯದಲ್ಲಿ ಜಿಲ್ಲಾಧಿಕಾರಿ ಡಾ‌ ಎಂ‌ ವಿ ವೆಂಕಟೇಶ್ ಹೇಳಿದ್ದಾರೆ. ಇಂದು ಮಳವಳ್ಳಿಯಲ್ಲಿ ಇಬ್ಬರು ಕೊರೊನಾ ಸೋಂಕು ಪಾಸಿಟಿವ್ ವ್ಯಕ್ತಿಗಳು ಪತ್ತೆಯಾಗಿದ್ದಾರೆ ಎಂದು ತಿಳಿಸಿರುವ ಜಿಲ್ಲಾಧಿಕಾರಿ ವೆಂಕಟೇಶ್ ಅವರ ಟ್ರಾವಲ್ ಹಿಸ್ಟರಿ ವಿವರಣೆ ನೀಡಿದ್ದಾರೆ. ಸೋಂಕಿತ ಇಬ್ಬರೂ ಮಳವಳ್ಳಿ ನಿವಾಸಿಗಳು. ಪೇಶೇಂಟ್ ನಂ. 442 ರ ವ್ಯಕ್ತಿ 47 ವರ್ಷದವನಾಗಿದ್ದು, ಮಳವಳ್ಳಿ ಪಟ್ಟಣದಲ್ಲಿ ಟೀ ಅಂಗಡಿ ನಡೆಸುತ್ತಿದ್ದ. ಈತ […]

ತಬ್ಲಿಘಿಗಳ ಸಂಗ: ಮಳವಳ್ಳಿಯಲ್ಲಿ ಇಬ್ಬರಿಗೆ ಕೊರೊನಾ ಸೋಂಕು ದೃಢ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 23, 2020 | 2:33 PM

Share

ಮಂಡ್ಯ: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ದೆಹಲಿಯ ಅನಾಹುತಕಾರಿ ತಬ್ಲಿಘಿಗಳ ಸಂಪರ್ಕದಲ್ಲಿದ್ದ ಇಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಮಂಡ್ಯದಲ್ಲಿ ಜಿಲ್ಲಾಧಿಕಾರಿ ಡಾ‌ ಎಂ‌ ವಿ ವೆಂಕಟೇಶ್ ಹೇಳಿದ್ದಾರೆ.

ಇಂದು ಮಳವಳ್ಳಿಯಲ್ಲಿ ಇಬ್ಬರು ಕೊರೊನಾ ಸೋಂಕು ಪಾಸಿಟಿವ್ ವ್ಯಕ್ತಿಗಳು ಪತ್ತೆಯಾಗಿದ್ದಾರೆ ಎಂದು ತಿಳಿಸಿರುವ ಜಿಲ್ಲಾಧಿಕಾರಿ ವೆಂಕಟೇಶ್ ಅವರ ಟ್ರಾವಲ್ ಹಿಸ್ಟರಿ ವಿವರಣೆ ನೀಡಿದ್ದಾರೆ.

ಸೋಂಕಿತ ಇಬ್ಬರೂ ಮಳವಳ್ಳಿ ನಿವಾಸಿಗಳು. ಪೇಶೇಂಟ್ ನಂ. 442 ರ ವ್ಯಕ್ತಿ 47 ವರ್ಷದವನಾಗಿದ್ದು, ಮಳವಳ್ಳಿ ಪಟ್ಟಣದಲ್ಲಿ ಟೀ ಅಂಗಡಿ ನಡೆಸುತ್ತಿದ್ದ. ಈತ ಪೇಶೇಂಟ್ ನಂಬರ್ 171, 371 ರ ಜೊತೆ ನಿಕಟ ಸಂಪರ್ಕ ಹೊಂದಿದ್ದು ಜೊತೆಯಲ್ಲೇ ನಮಾಜ್ ಮಾಡುತ್ತಿದ್ದ.

ಹೀಗಾಗಿ ಇವರನ್ನ ಏಪ್ರಿಲ್ 11 ರಂದು ಕ್ವಾರಂಟೈನ್ ನಲ್ಲಿಟ್ಟು, ಪರೀಕ್ಷಿಸಲ್ಪಟ್ಟಾಗ ಮೊದಲ ಬಾರಿಗೆ ಫಲಿತಾಂಶ ಬಂದಿರಲಿಲ್ಲ. ಈಗ ಎರಡನೇ ಬಾರಿಗೆ ಪಾಸಿಟಿವ್ ಬಂದಿದೆ. ಈತನಿಗೆ 9 ಜನ ಪ್ರೈಮರಿ ಕಾಂಟಾಕ್ಟ್ ವ್ಯಕ್ತಿಗಳನ್ನ ಗುರ್ತಿಸಿ ಕ್ವಾರಂಟೈನ್ ನಲ್ಲಿ ಇಡಲಾಗಿದೆ.

ಇನ್ನು ಪೇಶೇಂಟ್ ನಂ 443ಗೆ ಸಂಬಂಧಪಟ್ಟಂತೆ.. ಈಕೆ 28 ವರ್ಷದವನಾಗಿದ್ದು, ಕೋಟೆ ಬೀದಿಯ ನಿವಾಸಿ. ಈಕೆ 179ರ ವ್ಯಕ್ತಿ ಜೊತೆ ನಿಕಟ ಸಂಪರ್ಕ ಹೊಂದಿದ್ದರು. ಈಕೆಗೆ ಗಂಡ, ಅತ್ತೆ ಮಾವ ಹಾಗೂ ಮಕ್ಕಳಿದ್ದಾರೆ. ಈಕೆಯನ್ನ ಹೊರತುಪಡಿಸಿ ಉಳಿದವರಿಗೆ ನೆಗಿಟಿವ್ ಬಂದಿದೆ. ಆದ್ರೂ ಇವರ ಕುಟುಂಬಸ್ಥರನ್ನ ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಸ್ಪಷ್ಟಪಡಿಸಿದ್ದಾರೆ.

Published On - 2:20 pm, Thu, 23 April 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್