AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪು ತೊಗರಿಗೆ ವಿದೇಶದಲ್ಲೂ ಡಿಮ್ಯಾಂಡ್: ಕಲ್ಯಾಣ ಕರ್ನಾಟಕ ರೈತರ ಮೊಗದಲ್ಲಿ ಮಂದಹಾಸ

ರಾಯಚೂರು: ಕೆಂಪು ತೊಗರಿ.. ಕರುನಾಡ ಜನರ ಪಂಚಪ್ರಾಣ. ಇದರ ಸಾಂಬಾರ್ ಅಂದ್ರೆ ಬಾಯಲ್ಲಿ ನೀರೂರುತ್ತೆ. ಇಂಥ ಕೆಂಪು ತೊಗರಿಯನ್ನ ಕಲಬುರಗಿ, ರಾಯಚೂರು ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲೇ ಹೆಚ್ಚಾಗಿ ಬೆಳೆಯಲಾಗುತ್ತೆ. ಇಂಥ ತೊಗರಿಗೆ ಈಗಾಗಲೇ ದೇಶಾದ್ಯಂತ ಭಾರಿ ಡಿಮ್ಯಾಂಡ್ ಇದೆ. ಪ್ರತಿವರ್ಷ ಸಾವಿರಾರು ಟನ್​ನಷ್ಟು ತೊಗರಿ ದೇಶದ ವಿವಿಧ ರಾಜ್ಯಗಳಿಗೆ ಸರಬರಾಜು ಆಗುತ್ತಿದೆ. ಇದರ ನಡುವೆಯೇ ಕೆಂಪು ತೊಗರಿಗೆ ಅಂತಾರಾಷ್ಟ್ರೀಯ ಮಾನ್ಯತೆ ಸಿಕ್ಕಿದೆ. ವಿದೇಶಕ್ಕೆ ರಫ್ತು ಮಾಡಲು ಪ್ಲ್ಯಾನ್: ಈ ಹಿನ್ನೆಲೆಯಲ್ಲಿ ತೊಗರಿಯನ್ನ ವಿದೇಶಕ್ಕೆ ರಫ್ತು ಮಾಡಲು […]

ಕೆಂಪು ತೊಗರಿಗೆ ವಿದೇಶದಲ್ಲೂ ಡಿಮ್ಯಾಂಡ್: ಕಲ್ಯಾಣ ಕರ್ನಾಟಕ ರೈತರ ಮೊಗದಲ್ಲಿ ಮಂದಹಾಸ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 24, 2020 | 8:17 PM

Share

ರಾಯಚೂರು: ಕೆಂಪು ತೊಗರಿ.. ಕರುನಾಡ ಜನರ ಪಂಚಪ್ರಾಣ. ಇದರ ಸಾಂಬಾರ್ ಅಂದ್ರೆ ಬಾಯಲ್ಲಿ ನೀರೂರುತ್ತೆ. ಇಂಥ ಕೆಂಪು ತೊಗರಿಯನ್ನ ಕಲಬುರಗಿ, ರಾಯಚೂರು ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲೇ ಹೆಚ್ಚಾಗಿ ಬೆಳೆಯಲಾಗುತ್ತೆ. ಇಂಥ ತೊಗರಿಗೆ ಈಗಾಗಲೇ ದೇಶಾದ್ಯಂತ ಭಾರಿ ಡಿಮ್ಯಾಂಡ್ ಇದೆ. ಪ್ರತಿವರ್ಷ ಸಾವಿರಾರು ಟನ್​ನಷ್ಟು ತೊಗರಿ ದೇಶದ ವಿವಿಧ ರಾಜ್ಯಗಳಿಗೆ ಸರಬರಾಜು ಆಗುತ್ತಿದೆ. ಇದರ ನಡುವೆಯೇ ಕೆಂಪು ತೊಗರಿಗೆ ಅಂತಾರಾಷ್ಟ್ರೀಯ ಮಾನ್ಯತೆ ಸಿಕ್ಕಿದೆ.

ವಿದೇಶಕ್ಕೆ ರಫ್ತು ಮಾಡಲು ಪ್ಲ್ಯಾನ್: ಈ ಹಿನ್ನೆಲೆಯಲ್ಲಿ ತೊಗರಿಯನ್ನ ವಿದೇಶಕ್ಕೆ ರಫ್ತು ಮಾಡಲು ರಾಯಚೂರು ಕೃಷಿ ವಿಶ್ವವಿದ್ಯಾಲಯ ಪ್ಲ್ಯಾನ್ ಮಾಡ್ತಿದೆ. ಮೊದಲ ಹಂತದಲ್ಲಿ 100 ಟನ್ ತೊಗರಿಯನ್ನ ವಿದೇಶಕ್ಕೆ ಪೂರೈಸಲು ಭರದ ಸಿದ್ಧತೆ ನಡೀತಿದೆ. ಕಲ್ಯಾಣ ಕರ್ನಾಟಕದಲ್ಲಿ ಬೆಳೆಯೋ ತೊಗರಿಯನ್ನ ಆರು ಜಿಲ್ಲೆಗಳ ವ್ಯಾಪ್ತಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳು ಸರ್ಕಾರ ಘೋಷಿಸಿದ ಬೆಂಬಲ ಬೆಲೆಗೆ ಖರೀದಿಸುತ್ತಿವೆ. ಪ್ರಸಕ್ತ ವರ್ಷವೂ ಪ್ರತಿ ಕ್ವಿಂಟಾಲ್​ಗೆ 6,100 ರೂಪಾಯಿಯಂತೆ ಖರೀದಿಸಲಾಗುತ್ತಿದೆ.

ಕೆಂಪು ತೊಗರಿಗೆ ವಿದೇಶದಲ್ಲೂ ಡಿಮ್ಯಾಂಡ್: ಇದೀಗ ಅಂತಾರಾಷ್ಟ್ರೀಯ ಮಾನ್ಯತೆ ಕೂಡ ಸಿಕ್ಕಿರೋದ್ರಿಂದ ಕೆಂಪು ತೊಗರಿಗೆ ಇನ್ಮುಂದೆ ವಿದೇಶದಲ್ಲೂ ಡಿಮ್ಯಾಂಡ್ ಸೃಷ್ಟಿಯಾಗಲಿದೆ. ಇದರಿಂದ ಕಲ್ಯಾಣ ಕರ್ನಾಟಕ ಭಾಗದ ತೊಗರಿ ಬೆಳೆಗಾರರಿಗೆ ಹೆಚ್ಚಿನ ಬೆಲೆ ಸಿಗಲಿದೆ. ಇದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಒಟ್ನಲ್ಲಿ, ಪ್ರತಿ ವರ್ಷ ಕೇವಲ ಸರ್ಕಾರ ಘೋಷಿಸಿದ ಬೆಂಬಲ ಬೆಲೆಗೆ ತೊಗರಿ ಮಾರಾಟ ಮಾಡ್ತಿದ್ದ ರೈತರೀಗ ಅಂತಾರಾಷ್ಟ್ರೀಯ ಮಟ್ಟದಲ್ಲೂ ತೊಗರಿ ಮಾರಾಟ ಆಗೋದ್ರಿಂದ ಹೆಚ್ಚಿನ ಲಾಭ ನಿರೀಕ್ಷಿಸುವಂತಾಗಿದೆ. ಕೃಷಿ ವಿವಿಯ ಈ ಪ್ರಯತ್ನ ಸಕ್ಸಸ್ ಆದ್ರೆ ಕಲ್ಯಾಣ ಕರ್ನಾಟಕ ಭಾಗದ ತೊಗರಿಗೆ ಭಾರಿ ಬೇಡಿಕೆ ಬಂದು ಬೆಳೆಗಾರರಿಗೆ ಬಂಪರ್ ಬೆಲೆ ಸಿಗೋದ್ರಲ್ಲಿ ನೋ ಡೌಟ್.

Published On - 12:56 pm, Fri, 24 January 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ