AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಕೋ ಅನ್ನುತ್ತಿರುವ ರಾಮನಗರದ ಪ್ರವಾಸಿ ತಾಣಗಳು

ರಾಮನಗರ: ಮಹಾಮಾರಿ ಕೊರೊನಾ ದೇಶದ ಆರ್ಥಿಕ ಮತ್ತು ಆರೋಗ್ಯ ಸ್ಥಿತಿಗಳಿಗೆ ಭಾರೀ ಹೊಡೆತ ಕೊಟ್ಟಿದೆ. ಇಷ್ಟೇ ಅಲ್ಲ ಕೊರೊನಾ ಪ್ರವಾಸೋದ್ಯಮಕ್ಕೂ ಪೆಟ್ಟು ನೀಡಿದೆ. ಹೀಗೆ ಪೆಟ್ಟು ತಿಂದ ಪ್ರವಾಸೋದ್ಯಮ ಕೇಂದ್ರಗಳಲ್ಲಿ ರಾಮನಗರ ಜಿಲ್ಲೆ ಕೂಡಾ ಒಂದು. ಹೌದು, ಕೊರೊನಾದಿಂದಾಗಿ ಎಲ್ಲೆಡೆ ಲಾಕ್‌ಡೌನ್‌ ಘೋಷಿಸಲಾಗಿತ್ತು. ಪರಿಣಾಮ ರಾಜ್ಯದ ಎಲ್ಲೆಡೆಯಂತೆ ರಾಮನಗರದ ಪ್ರವಾಸಿ ಕ್ಷೇತ್ರಗಳಿಗೂ ಲಾಕ್‌ಡೌನ್‌ ಮಾಡಲಾಗಿತ್ತು. ಸುಮಾರು ಎರಡುವರೆ ತಿಂಗಳುಗಳ ನಂತರ ಜಿಲ್ಲೆಯ ಪ್ರವಾಸ ಕ್ಷೇತ್ರಗಳಲ್ಲೂ ಲಾಕ್‌ಡೌನ್‌ ಸಡಿಲಿಸಲಾಗಿದೆ. ಆದ್ರೆ ಸಿಲಿಕಾನ್ ಸಿಟಿ ಬೆಂಗಳೂರು ತೀರಾ ಹತ್ತಿರದಲ್ಲಿದ್ದರೂ ಪ್ರವಾಸೋದ್ಯಮ […]

ಬಿಕೋ ಅನ್ನುತ್ತಿರುವ ರಾಮನಗರದ ಪ್ರವಾಸಿ ತಾಣಗಳು
Guru
| Updated By: ಸಾಧು ಶ್ರೀನಾಥ್​|

Updated on:Jun 18, 2020 | 6:33 PM

Share

ರಾಮನಗರ: ಮಹಾಮಾರಿ ಕೊರೊನಾ ದೇಶದ ಆರ್ಥಿಕ ಮತ್ತು ಆರೋಗ್ಯ ಸ್ಥಿತಿಗಳಿಗೆ ಭಾರೀ ಹೊಡೆತ ಕೊಟ್ಟಿದೆ. ಇಷ್ಟೇ ಅಲ್ಲ ಕೊರೊನಾ ಪ್ರವಾಸೋದ್ಯಮಕ್ಕೂ ಪೆಟ್ಟು ನೀಡಿದೆ. ಹೀಗೆ ಪೆಟ್ಟು ತಿಂದ ಪ್ರವಾಸೋದ್ಯಮ ಕೇಂದ್ರಗಳಲ್ಲಿ ರಾಮನಗರ ಜಿಲ್ಲೆ ಕೂಡಾ ಒಂದು.

ಹೌದು, ಕೊರೊನಾದಿಂದಾಗಿ ಎಲ್ಲೆಡೆ ಲಾಕ್‌ಡೌನ್‌ ಘೋಷಿಸಲಾಗಿತ್ತು. ಪರಿಣಾಮ ರಾಜ್ಯದ ಎಲ್ಲೆಡೆಯಂತೆ ರಾಮನಗರದ ಪ್ರವಾಸಿ ಕ್ಷೇತ್ರಗಳಿಗೂ ಲಾಕ್‌ಡೌನ್‌ ಮಾಡಲಾಗಿತ್ತು. ಸುಮಾರು ಎರಡುವರೆ ತಿಂಗಳುಗಳ ನಂತರ ಜಿಲ್ಲೆಯ ಪ್ರವಾಸ ಕ್ಷೇತ್ರಗಳಲ್ಲೂ ಲಾಕ್‌ಡೌನ್‌ ಸಡಿಲಿಸಲಾಗಿದೆ. ಆದ್ರೆ ಸಿಲಿಕಾನ್ ಸಿಟಿ ಬೆಂಗಳೂರು ತೀರಾ ಹತ್ತಿರದಲ್ಲಿದ್ದರೂ ಪ್ರವಾಸೋದ್ಯಮ ಮಾತ್ರ ಚೇತರಿಸಿಕೊಳ್ಳುತ್ತಿಲ್ಲ.

ಒಂದು ದಿನದ ಪ್ರವಾಸಕ್ಕೆ ಸೂಕ್ತ ತಾಣಗಳಿವೆ ಬೆಂಗಳೂರಿಗೆ ಹತ್ತಿರದಲ್ಲೇ ಇರುವ ರಾಮನಗರ ಜಿಲ್ಲೆ ಬಹುತೇಕರಿಗೆ ನೆಚ್ಚಿನ ತಾಣವಾಗಿತ್ತು. ಒಂದು ದಿನದ ಪ್ರವಾಸ ಸುಖ ಅನುಭವಿಸಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಇಲ್ಲಿ ಬಂದು ಹೋಗುತ್ತಿದ್ದರು. ಆದರೆ, ಕೊರೊನಾ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ಪ್ರವಾಸಿ ಚಟುವಟಿಕೆಗಳು ಜೂನ್ 8ರ ನಂತರ ಮತ್ತೆ ಪುನರಾರಂಭ ಪಡೆಯಬಹುದು ಎನ್ನುವ ವಿಶ್ವಾಸವಿತ್ತು. ಆದರೆ ಆ ನಿರೀಕ್ಷೆ ಹುಸಿಯಾಗಿದೆ. ಜಿಲ್ಲೆಯ ಬಹುತೇಕ ಪ್ರವಾಸಿ ತಾಣಗಳು ಪ್ರವಾಸಿಗರಿಗಾಗಿ ಅನ್‌ಲಾಕ್‌ ಆಗಿ 10 ದಿನ ಕಳೆದರೂ ಯಾರೂ ಇತ್ತ ಸುಳಿಯುತ್ತಿಲ್ಲ.

ಚುಂಚಿ ಫಾಲ್ಸ್‌, ಕಣ್ವ ಜಲಾಶಯ ಪ್ರಮಖ ಆಕರ್ಷಣೆ ಜಿಲ್ಲೆಯ ರಾಮದೇವರ ಬೆಟ್ಟ, ಕಣ್ವ ಜಲಾಶಯ, ಸಂಗಮ, ಮೇಕೆದಾಟು, ಚುಂಚಿ ಫಾಲ್ಸ್ ಸೇರಿದಂತೆ 15ಕ್ಕೂ ಹೆಚ್ಚಿನ ಪ್ರವಾಸಿ ತಾಣಗಳನ್ನು ಸರ್ಕಾರವೇ ಗುರುತಿಸಿದೆ. ಇದರಲ್ಲಿ ಚನ್ನಪಟ್ಟಣದ ಕೆಂಗಲ್ ಆಂಜನೇಯ ಸ್ವಾಮಿ ದೇವಾಲಯ, ಮಾಗಡಿ ರಂಗನಾಥ ಸ್ವಾಮಿ ದೇವಾಲಯ ಸೇರಿ ಹಲವು ದೇವಾಲಯಗಳು ‘ಎ’ ಗ್ರೇಡ್ ದೇವಾಲಯಗಳಾಗಿರೋದ್ರಿಂದ ಇವುಗಳನ್ನು ತೆರೆಯಲು ಇನ್ನೂ ಅನುಮತಿ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಈ ಪ್ರದೇಶಗಳಿಗೆ ಭಕ್ತರೂ ಇಲ್ಲ ಪ್ರವಾಸಿಗರೂ ಇಲ್ಲ.

ಇನ್ನೂ ಬಿಕೋ ಎನ್ನುತ್ತಿರುವ ಪ್ರವಾಸಿ ತಾಣಗಳು ಇನ್ನು ಸ್ಥಳ ಪುರಾಣದ ಕುರಿತು ಪ್ರವಾಸಿಗರಿಗೆ ಅಗತ್ಯ ಮಾಹಿತಿ ನೀಡುವ 24 ಮಂದಿ ಪ್ರವಾಸಿ ಮಿತ್ರರು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಅವರೂ ಕೂಡಾ ತಮ್ಮ ಕರ್ತವ್ಯಕ್ಕೆ ಇದುವರೆಗೆ ಮರಳಿಲ್ಲ. ಲಾಕ್‌ಡೌನ್ ಸಮಯದಲ್ಲಿ ಮನೆಯಲ್ಲಿರುವಂತೆ ಸೂಚಿಸಿದ್ದ ಅಧಿಕಾರಿಗಳು, ಮರಳಿ ಬರುವಂತೆ ಅವರಿಗೆ ಇದುವರೆಗೆ ಸೂಚಿಸಿಲ್ಲ. ಈ ಬಗ್ಗೆ ಸರ್ಕಾರದ ಆದೇಶಕ್ಕಾಗಿ ಕಾಯುತ್ತಿದ್ದೇವೆ ಎನ್ನುತ್ತಾರೆ ಸ್ಥಳೀಯ ಅಧಿಕಾರಿಗಳು. ಒಟ್ಟಿನಲ್ಲಿ ರಜಾ ದಿನಗಳಂದು ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಜಿಲ್ಲೆಯ ಪ್ರವಾಸಿ ತಾಣಗಳು ಈಗ ಬಿಕೋ ಎನ್ನುತ್ತಿವೆ. -ಪ್ರಶಾಂತ್ ಹುಲಿಕೆರೆ

Published On - 6:31 pm, Thu, 18 June 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ