AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಟಿಎಂಗಳಲ್ಲಿ ಅಮಾಯಕ ರೈತರ ಹಣ ಎಗರಿಸುತ್ತಿದ್ದವನ ಅರೆಸ್ಟ್​ ಮಾಡಿದ ವಿಜಯಪುರ ಪೊಲೀಸರು

ಒಟ್ಟಾರೆ ಮೋಸ ಹೋಗುವವರು ಎಲ್ಲಿವರೆಗೂ ಇರ್ತಾರೋ ಅಲ್ಲಿ ವರೆಗೂ ವಂಚಕರು ಇರ್ತಾರೆ ಅನ್ನೂ ಹಾಗೆ ಬಡ ರೈತರನ್ನೆ ಟಾರ್ಗೆಟ್ ಮಾಡಿ ಮಜಾ ಮಾಡ್ತಿದ್ದ ಭೂಪ ಮತ್ತೆ ಮುದ್ದೆ ಮುರಿಯಲು ಜೈಲು ಸೇರಿದ್ದಾನೆ. ಇನ್ನಾದ್ರು ಎಟಿಎಂ ಬಳಿ ಹಣ ಡ್ರಾ ಮಾಡಲು ಹೋಗುವ ರೈತರು ಸ್ವಲ್ಪ ಎಚ್ಚರದಿಂದ ಇದ್ರೆ ಒಳ್ಳೆಯದು.

ಎಟಿಎಂಗಳಲ್ಲಿ ಅಮಾಯಕ ರೈತರ ಹಣ ಎಗರಿಸುತ್ತಿದ್ದವನ ಅರೆಸ್ಟ್​ ಮಾಡಿದ ವಿಜಯಪುರ ಪೊಲೀಸರು
ಎಟಿಎಂಗಳಲ್ಲಿ ಅಮಾಯಕ ರೈತರ ಹಣ ಎಗರಿಸುತ್ತಿದ್ದವ ಅರೆಸ್ಟ್​
ನವೀನ್ ಕುಮಾರ್ ಟಿ
| Edited By: |

Updated on:Feb 27, 2024 | 12:36 PM

Share

ಎಟಿಎಂ ಕಾರ್ಡ್ (ATM) ಇದ್ದರೂ ಹಣ ಡ್ರಾ ಮಾಡಲು ಬಾರದೆ ಸಾಕಷ್ಟು ಜನ ಇಂದಿಗೂ ಎಟಿಎಂ ಗಳ ಬಳಿ ಪರದಾಟ ನಡೆಸುವುದು ಸಹಜ. ಹೀಗಾಗೆ ಇಂತವರನ್ನೆ ಟಾರ್ಗೆಟ್ ಮಾಡಿಕೊಂಡು ಎಟಿಎಂ ಕಾರ್ಡಗಳನ್ನೆ ಬದಲಿಸಿ ಸಾವಿರಾರು ರೂಪಾಯಿ ಹಣ (money) ಎಗರಿಸುತ್ತಿದ್ದ ಖದೀಮನೊಬ್ಬ ನಿನ್ನೆ ಸೋಮವಾರ ಖಾಕಿ ಬಲೆಗೆ ಬಿದ್ದಿದ್ದು ಅಮಾಯಕ ರೈತನ ಸಾವಿರಾರು ರೂಪಾಯಿ ಹಣ ಹಾಗೂ ಚಿನ್ನದೊಂದಿಗೆ ತಗಲಾಕ್ಕೊಂಡಿದ್ದಾನೆ. ಅದು ಎಲ್ಲಿ, ಹೇಗೆ ಅನ್ನೂ ಸ್ಟೋರಿ ಇಲ್ಲಿದೆ. ಈ ದೃಶ್ಯಗಳನ್ನೊಮ್ಮೆ ಸರಿಯಾಗಿ ನೋಡಿ ಹಾಡಹಗಲೆ ರಾಜಾರೋಷವಾಗಿ ಚಿನ್ನದಂಗಡಿಗೆ ಬಂದ ಖದೀಮ ಅವರಪ್ಪನ ದುಡ್ಡು ಎಂಬಂತೆ ಕಾರ್ಡ್ ಸ್ವೈಪ್ ಮಾಡಿ ಭರ್ಜರಿ ಶಾಪಿಂಗ್ ಮಾಡ್ತಿದ್ದಾನೆ. ಆ ಉಂಗುರ ತೋರಿಸಿ, ಈ ಉಂಗುರ ತೋರಿಸಿ ಅಂತ ಬೇಕಾದ್ದನ್ನ ಪಡೆದುಕೊಂಡು ಹೋಗಿದ್ದ. ಆದರೆ ಇದೀಗ ಇದೇ ಆರೋಪಿ ಶ್ರೀ ಕೃಷ್ಣನ ಜನ್ಮಸ್ಥಾನ ಸೇರಲು ಮುಂದಾಗಿದ್ದಾ‌ನೆ (Vijayapura police).

ಹೌದು ಅಂದಹಾಗೆ ಈ ರೀತಿ ಪೊಲೀಸರ ಕೈಗೆ ತಗಲಾಕ್ಕೊಂಡು ಶ್ರೀ ಕೃಷ್ಣನ ಜನ್ಮಸ್ಥಾನ ಸೇರಲು ಮುಂದಾಗಿರುವ ಇವನ ಹೆಸರು ಗುರುಮೂರ್ತಿ. ಈತ ಮೂಲತಃ ಚಿಂತಾಮಣಿ ನಿವಾಸಿ. ಇವನು ಕಳೆದು ತಿಂಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣಕ್ಕೆ ಬಂದಿದ್ದು ಎಟಿಎಂ ಬಳಿ ಹಣ ಡ್ರಾ ಮಾಡುವ ವಿಧಾನವನ್ನು ತಿಳಿಯದವರು ಯಾರಾದರೂ ಬರುತ್ತಾರಾ ಅಂತ ಹೊಂಚು ಹಾಕುತ್ತಾ ಕುಳಿತಿದ್ದ.

ಇದೇ ವೇಳೆ ರಾಜಣ್ಣ ಅನ್ನೂ ರೇಷ್ಮೆ ಬೆಳೆಯುವ ಈ ರೈತ ಗೂಡು ಮಾರಿದ ಹಣ ಡ್ರಾ ಮಾಡೋಕ್ಕೆ ಅಂತ ಎಟಿಎಂ ಗೆ ಬಂದು ಹಣ ಡ್ರಾ ಮಾಡಲಾಗದೆ ಪರದಾಡಿದ್ದಾನೆ. ಹೀಗಾಗಿ ರಾಜಣ್ಣನ ಸಹಾಯಕ್ಕೆ ಬರುವಂತೆ ಬಂದ ಭೂಪ ಮೊದಲಿಗೆ ರೈತನಿಗೆ ಹಣ ಡ್ರಾ ಮಾಡಿಕೊಟ್ಟಿದ್ದು ನಂತರ ರೈತನ ಕಾರ್ಡ್ ಪಡೆದು ಬೇರೋಂದು ಕಾರ್ಡ್ ನೀಡಿ ಎಸ್ಕೇಪ್ ಆಗಿದ್ದ. ಜೊತೆಗೆ ವಿಜಯಪುರ ಪಟ್ಟಣದ ಚಿನ್ನದಂಗಡಿ ಒಂದಕ್ಕೆ ಹೋಗಿದ್ದ ಭೂಪ ಅಲ್ಲಿ ಇದೇ ರೈತನ ಕಾರ್ಡ್ ಬಳಸಿ ಚಿನ್ನದ ಉಂಗುರ ಖರೀದಿಸಿ ಎಸ್ಕೇಪ್ ಆಗಿದ್ದ.

Also Read: ಬೆಂಗಳೂರು ಗಾಂಧಿ ಬಜಾರಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ಶಿವಮೊಗ್ಗದ ವಕೀಲರಿಗೆ ಬೈಕ್​ನಿಂದ ಗುದ್ದಿದ ಯುವಕ, ವಕೀಲ ಸಾವು

ಚಿನ್ನದಂಗಡಿಯಲ್ಲಿ ಉಂಗುರ ಖರೀದಿಸಿದ್ದಕ್ಕೆ ಹಣ ಪಾವತಿ ಮಾಡಿದ ಸಂದೇಶ ರೈತನ ಮೊಬೈಲ್ ಗೆ ಬಂದ ಹಿನ್ನೆಲೆಯಲ್ಲಿ ವಿಜಯಪುರ ಪೊಲೀಸ್ ಠಾಣೆಯಲ್ಲಿ ರೈತ ರಾಜಣ್ಣ ದೂರು ನೀಡಿದ್ದ. ಹೀಗಾಗಿ ದೂರು ಪಡೆದು ತನಿಖೆ ನಡೆಸಿದ ಪೊಲೀಸರು ಚಿಂತಾಮಣಿ ಮೂಲದ ಗುರುಮೂರ್ತಿ ಅನ್ನೋ ಈ ವಂಚಕನನ್ನ ಬಂದಿಸಿದ್ದಾರೆ. ಜೊತೆಗೆ ಈತ ಇದೇ ರೀತಿ ಚಿಂತಾಮಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲು ಕಾರ್ಡ್ ಬದಲಿಸಿ ಕೆಲವರಿಗೆ ವಂಚನೆ ಮಾಡಿದ್ದು ಜೈಲುವಾಸ ಸಹ ಅನುಭವಿಸಿ ಕಳೆದ ಜನವರಿಯಲ್ಲಿ ಜೈಲಿಂದ ಬಿಡುಗಡೆಯಾಗಿ ಬಂದಿದ್ನಂತೆ. ಆದ್ರೆ ಜೈಲಿಂದ ಬಂದ್ರು ಬುದ್ದಿ ಕಲಿಯದ ಭೂಪ ಮತ್ತದೆ ಕೆಲಸ ಮಾಡಲು ಹೋಗಿ ಇದೀಗ ಪೊಲೀಸರ ಕೈಗೆ ಲಾಕ್ ಆಗಿದ್ದಾ‌ನೆ. ಇನ್ನೂ ಪೊಲೀಸರು ಆರೋಪಿಯಿಂದ ಎರಡು ಚಿನ್ನದ ಉಂಗುರ ಎಟಿಎಂ ಕಾರ್ಡ್ಗಳನ್ನ ವಶಕ್ಕೆ ಪಡೆದು ಬಡ ರೈತನಿಗೆ ವಾಪಸ್ ನೀಡಿದ್ದಾರೆ.

ಒಟ್ಟಾರೆ ಮೋಸ ಹೋಗುವವರು ಎಲ್ಲಿವರೆಗೂ ಇರ್ತಾರೋ ಅಲ್ಲಿ ವರೆಗೂ ವಂಚಕರು ಇರ್ತಾರೆ ಅನ್ನೂ ಹಾಗೆ ಬಡ ರೈತರನ್ನೆ ಟಾರ್ಗೆಟ್ ಮಾಡಿ ಮಜಾ ಮಾಡ್ತಿದ್ದ ಭೂಪ ಮತ್ತೆ ಮುದ್ದೆ ಮುರಿಯಲು ಜೈಲು ಸೇರಿದ್ದಾನೆ. ಇನ್ನಾದ್ರು ಎಟಿಎಂ ಬಳಿ ಹಣ ಡ್ರಾ ಮಾಡಲು ಹೋಗುವ ರೈತರು ಸ್ವಲ್ಪ ಎಚ್ಚರದಿಂದ ಇದ್ರೆ ಒಳ್ಳೆಯದು.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:45 am, Tue, 27 February 24

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!