AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪ್ರದಾಯ ಬದಿಗಿಟ್ಟು.. ಹಾಸನಾಂಬ ದೇಗುಲ ಮುಚ್ಚಲು ನಿರ್ಧಾರ: ಜಿಲ್ಲಾಡಳಿತದ ನಡೆಗೆ ಭಕ್ತರ ಆಕ್ರೋಶ

ಹಾಸನ: ವರ್ಷಕ್ಕೆ ಒಮ್ಮೆ ದರ್ಶನ ನೀಡೋ ಹಾಸನಾಂಬ ದೇವಿಯ ದರ್ಶನಕ್ಕೆ ಲಕ್ಷಾಂತರ ಮಂದಿ ಭಕ್ತರು ಬಂದು ಹೋಗ್ತಾರೆ. ಆದರೆ ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ದರ್ಶನಕ್ಕೆ ಕೆಲವು ನಿರ್ಬಂಧನೆಗಳನ್ನು ವಿಧಿಸಲಾಗಿದೆ. ಆದರೂ ಸಹ ಸಾವಿರಾರು ಭಕ್ತರು ದೇವಿಯ ದರ್ಶನಕ್ಕೆ ಮುಗಿಬಿದ್ದಿದ್ದಾರೆ. ಈ ನಡುವೆ ನಾಳೆ ಹಾಸನಾಂಬ ದೇಗುಲದ ಬಾಗಿಲು ಮುಚ್ಚಲು ಹಾಸನ ಜಿಲ್ಲಾಡಳಿತದ ನಿರ್ಧಾರ ಮಾಡಿದ್ದು ಇದಕ್ಕೆ ಭಕ್ತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಶಾಸ್ತ್ರ, ಸಂಪ್ರದಾಯಕ್ಕೆ ವಿರುದ್ಧವಾಗಿ ಹಾಸನಾಂಬೆ ಬಾಗಿಲು ಮುಚ್ಚಲು ಜಿಲ್ಲಾಡಳಿತ ಸಜ್ಜಾಗಿದೆ. ಹಾಸನಾಂಬೆ ದರ್ಶನ […]

ಸಂಪ್ರದಾಯ ಬದಿಗಿಟ್ಟು.. ಹಾಸನಾಂಬ ದೇಗುಲ ಮುಚ್ಚಲು ನಿರ್ಧಾರ: ಜಿಲ್ಲಾಡಳಿತದ ನಡೆಗೆ ಭಕ್ತರ ಆಕ್ರೋಶ
ಆಯೇಷಾ ಬಾನು
|

Updated on:Nov 15, 2020 | 12:21 PM

Share

ಹಾಸನ: ವರ್ಷಕ್ಕೆ ಒಮ್ಮೆ ದರ್ಶನ ನೀಡೋ ಹಾಸನಾಂಬ ದೇವಿಯ ದರ್ಶನಕ್ಕೆ ಲಕ್ಷಾಂತರ ಮಂದಿ ಭಕ್ತರು ಬಂದು ಹೋಗ್ತಾರೆ. ಆದರೆ ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ದರ್ಶನಕ್ಕೆ ಕೆಲವು ನಿರ್ಬಂಧನೆಗಳನ್ನು ವಿಧಿಸಲಾಗಿದೆ. ಆದರೂ ಸಹ ಸಾವಿರಾರು ಭಕ್ತರು ದೇವಿಯ ದರ್ಶನಕ್ಕೆ ಮುಗಿಬಿದ್ದಿದ್ದಾರೆ. ಈ ನಡುವೆ ನಾಳೆ ಹಾಸನಾಂಬ ದೇಗುಲದ ಬಾಗಿಲು ಮುಚ್ಚಲು ಹಾಸನ ಜಿಲ್ಲಾಡಳಿತದ ನಿರ್ಧಾರ ಮಾಡಿದ್ದು ಇದಕ್ಕೆ ಭಕ್ತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಶಾಸ್ತ್ರ, ಸಂಪ್ರದಾಯಕ್ಕೆ ವಿರುದ್ಧವಾಗಿ ಹಾಸನಾಂಬೆ ಬಾಗಿಲು ಮುಚ್ಚಲು ಜಿಲ್ಲಾಡಳಿತ ಸಜ್ಜಾಗಿದೆ. ಹಾಸನಾಂಬೆ ದರ್ಶನ ಕೊನೆಗೊಳಿಸೋ ವಿಚಾರದಲ್ಲಿ ಪುರೋಹಿತರ ನಡುವೆಯೇ ಭಿನ್ನಾಭಿಪ್ರಾಯ ಉಂಟಾಗಿದೆ. ಬಲಿಪಾಡ್ಯಮಿಯ ಮರುದಿನ ದೇಗುಲದ ಬಾಗಿಲು ಮುಚ್ಚುತ್ತಿದ್ದ ಸಂಪ್ರದಾಯಕ್ಕೆ ಬ್ರೇಕ್ ಹಾಕಿ. ಈ ಬಾರಿ ಒಂದು ದಿನ ಮುಂಚಿತವಾಗಿ ಬಾಗಿಲು ಮುಚ್ಚಲು ತೀರ್ಮಾನ ಮಾಡಲಾಗಿದೆ. ಪಂಚಾಂಗದ ಉಲ್ಲೇಖ ಕಡೆಗಣಿಸಿ ಸಂಪ್ರದಾಯಕ್ಕೆ ವಿರುದ್ಧವಾಗಿ ಬಾಗಿಲು ಮುಚ್ಚಲಾಗುತ್ತಿದೆ ಎಂದು ಭಕ್ತರು ಆಕ್ರೋಶ ಹೊರ ಹಾಕಿದ್ದಾರೆ.

ಶತಮಾನಗಳ ಸಂಪ್ರದಾಯ ಮುರಿಯುತ್ತಿರೋ ಬಗ್ಗೆ ಹಲವು ಪುರೋಹಿತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಾಗೂ ಒಂಟಿಕೊಪ್ಪಲ್ ಪಂಚಾಂಗದಲ್ಲಿನ ಉಲ್ಲೇಖ‌ ಕಡೆಗಣಿಸಲಾಗಿದೆ ಎಂದು ಭಕ್ತರು ಆಕ್ರೋಶಗೊಂಡಿದ್ದಾರೆ. ಒಂದು ದಿನ ಮುಂಚಿತವಾಗಿ ಬಾಗಿಲು ಮುಚ್ಚುತ್ತಿರುವುದರಿಂದ ಮುಂದೆ ಗಂಡಾಂತರ ಕಾದಿದೆ ಎಂದು ಆತಂಕಕ್ಕೊಳಗಾಗಿದ್ದಾರೆ. ನವೆಂಬರ್ 16 ರ ಸೋಮವಾರ ಹಾಸನಾಂಬೆ ದೇವಾಲಯದ ಬಾಗಿಲು ಮುಚ್ಚಲು ಜಿಲ್ಲಾಡಳಿತ ತಯಾರಿ ನಡೆಸಿದೆ. ಆದ್ರೆ ಸಂಪ್ರದಾಯಬದ್ಧವಾಗಿ ಬಲಿಪಾಡ್ಯಮಿಯ ಮಾರನೇ ದಿನ ಅಂದ್ರೆ ಮಂಗಳವಾರ ಬಾಗಿಲು ಮುಚ್ಚಬೇಕು ಎಂದು ಭಕ್ತರು ಒತ್ತಾಯಿಸಿದ್ದಾರೆ.

Published On - 12:20 pm, Sun, 15 November 20

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​